<p><strong>ನವದೆಹಲಿ (ಪಿಟಿಐ):</strong> ದೇಶದ ರಾಜಧಾನಿ ದೆಹಲಿ, ಹಿಮಾಚಲಪ್ರದೇಶ, ಉತ್ತರಾಖಂಡ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಮಳೆಯ ಅನಾಹುತಕ್ಕೆ ಮೂವರು ಬಲಿಯಾಗಿದ್ದಾರೆ.<br /> <br /> ದೆಹಲಿಯಲ್ಲಿ ಎಡೆಬಿಡದೆ ಮಳೆ ಸುರಿದಿದ್ದರಿಂದ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಭಾರಿ ತೊಂದರೆ ಉಂಟಾಯಿತು ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿತು.<br /> <br /> ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಎರಡು ಮೆಟ್ರೊ ನಿಲ್ದಾಣಗಳನ್ನು ಕೆಲವು ಗಂಟೆಗಳ ಕಾಲ ಮುಚ್ಚಲಾಗಿತ್ತು.<br /> <br /> ಹಿಮಾಚಲಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಕ್ಕಿ ಮೂವರು ಸತ್ತಿದ್ದಾರೆ. ಅನೇಕ ಮನೆಗಳಿಗೆ ಹಾನಿ ಉಂಟಾಗಿದೆ.<br /> <br /> ಚಾಲಕನೊಬ್ಬ ತನ್ನ ಟ್ರಕ್ಕಿನಲ್ಲಿ ಇತರ ಇಬ್ಬರ ಜತೆ ಮಲಗಿದ್ದಾಗ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದರಿಂದ ಸತ್ತಿದ್ದಾನೆ. ಇತರ ಇಬ್ಬರು ಪಾರಾಗಿದ್ದಾರೆ. ಮೆಹಾಸ್ಕವಾಲ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ.<br /> <br /> ಉತ್ತರಾಖಂಡದಲ್ಲೂ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ರಸ್ತೆ ದುರಸ್ತಿ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಇದರಿಂದ ಪರಿಹಾರ ಸಾಮಗ್ರಿ ವಿತರಣೆಗೆ ತೊಂದರೆಯಾಗಿದೆ. ಭಾರಿ ಮಳೆಯಿಂದಾಗಿ ಕೇಂದ್ರ ರೈಲ್ವೆಯ ನಾಗ್ಪುರ- ವಾರ್ಧಾ ವಿಭಾಗದ ಸಿಂದಿ ಮತ್ತು ತುಳಜಾಪುರ ಮಧ್ಯೆ ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದೆ.<br /> <br /> ಈ ಭಾಗದಲ್ಲಿ ಸಣ್ಣ ಸೇತುವೆಗಳು ಮತ್ತು ಹಳಿಯ ಕೆಳಭಾಗದ ಜಲ್ಲಿಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ಮಾರ್ಗದ ಅನೇಕ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೇಶದ ರಾಜಧಾನಿ ದೆಹಲಿ, ಹಿಮಾಚಲಪ್ರದೇಶ, ಉತ್ತರಾಖಂಡ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಮಳೆಯ ಅನಾಹುತಕ್ಕೆ ಮೂವರು ಬಲಿಯಾಗಿದ್ದಾರೆ.<br /> <br /> ದೆಹಲಿಯಲ್ಲಿ ಎಡೆಬಿಡದೆ ಮಳೆ ಸುರಿದಿದ್ದರಿಂದ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಭಾರಿ ತೊಂದರೆ ಉಂಟಾಯಿತು ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿತು.<br /> <br /> ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಎರಡು ಮೆಟ್ರೊ ನಿಲ್ದಾಣಗಳನ್ನು ಕೆಲವು ಗಂಟೆಗಳ ಕಾಲ ಮುಚ್ಚಲಾಗಿತ್ತು.<br /> <br /> ಹಿಮಾಚಲಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭೂಕುಸಿತ ಮತ್ತು ಪ್ರವಾಹಕ್ಕೆ ಸಿಕ್ಕಿ ಮೂವರು ಸತ್ತಿದ್ದಾರೆ. ಅನೇಕ ಮನೆಗಳಿಗೆ ಹಾನಿ ಉಂಟಾಗಿದೆ.<br /> <br /> ಚಾಲಕನೊಬ್ಬ ತನ್ನ ಟ್ರಕ್ಕಿನಲ್ಲಿ ಇತರ ಇಬ್ಬರ ಜತೆ ಮಲಗಿದ್ದಾಗ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದರಿಂದ ಸತ್ತಿದ್ದಾನೆ. ಇತರ ಇಬ್ಬರು ಪಾರಾಗಿದ್ದಾರೆ. ಮೆಹಾಸ್ಕವಾಲ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ.<br /> <br /> ಉತ್ತರಾಖಂಡದಲ್ಲೂ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ರಸ್ತೆ ದುರಸ್ತಿ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಇದರಿಂದ ಪರಿಹಾರ ಸಾಮಗ್ರಿ ವಿತರಣೆಗೆ ತೊಂದರೆಯಾಗಿದೆ. ಭಾರಿ ಮಳೆಯಿಂದಾಗಿ ಕೇಂದ್ರ ರೈಲ್ವೆಯ ನಾಗ್ಪುರ- ವಾರ್ಧಾ ವಿಭಾಗದ ಸಿಂದಿ ಮತ್ತು ತುಳಜಾಪುರ ಮಧ್ಯೆ ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದೆ.<br /> <br /> ಈ ಭಾಗದಲ್ಲಿ ಸಣ್ಣ ಸೇತುವೆಗಳು ಮತ್ತು ಹಳಿಯ ಕೆಳಭಾಗದ ಜಲ್ಲಿಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಈ ಮಾರ್ಗದ ಅನೇಕ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>