<p><strong>ನವದೆಹಲಿ (ಪಿಟಿಐ):</strong> ಕೈಗಾರಿಕಾ ಉತ್ಪಾದನೆಯು ಮುಂದಿನ 6 ತಿಂಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಆರ್ಥಿಕ ಉತ್ತೇಜನಾ ಕೊಡುಗೆ ರದ್ದುಪಡಿಸಬಾರದು ಅಥವಾ ಅಬಕಾರಿ ಸುಂಕ ಹೆಚ್ಚಿಸಬಾರದು ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟವು (ಎಫ್ಕೆಸಿಸಿಐ-ಫಿಕ್ಕಿ) ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಒತ್ತಾಯಿಸಿದೆ.<br /> <br /> ಕಚ್ಚಾ ಸರಕಿನ ಬೆಲೆ ಹೆಚ್ಚಳ, ಅಹಾರ ಹಣದುಬ್ಬರ ಏರಿಕೆಯು ಅರ್ಥ ವ್ಯವಸ್ಥೆಯ ಇತರ ವಲಯಗಳಿಗೆ ವಿಸ್ತರಿಸುವ ಸಾಧ್ಯತೆ ಮತ್ತಿತರ ಕಾರಣಗಳಿಗಾಗಿ ಕೈಗಾರಿಕೆ ಉತ್ಪಾದನೆಯು ಕುಂಠಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಉತ್ತೇಜನಾ ಕೊಡುಗೆಗಳನ್ನು ರದ್ದುಪಡಿಸಬಾರದು. ಅದರಲ್ಲೂ ವಿಶೇಷವಾಗಿ ಅಬಕಾರಿ ಸುಂಕ ಹೆಚ್ಚಿಸಬಾರದು ಎಂದು ‘ಫಿಕ್ಕಿ’ ಮನವಿ ಮಾಡಿಕೊಂಡಿದೆ.<br /> <br /> ಸರಕು- ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಲಾಗಿದೆ. ಆರ್ಥಿಕ ವೃದ್ಧಿ ದರವು 2011-12ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟಿನ ಪೂರ್ವದ ಶೇ 9ರ ಮಟ್ಟಕ್ಕೆ ಮರಳುವ ಸಾಧ್ಯತೆ ಇರುವುದರಿಂದ ಉತ್ತೇಜನಾ ಕೊಡುಗೆಗಳನ್ನು ಕೈಬಿಡಬಹುದಾಗಿದೆ ಎಂದು ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ‘ಫಿಕ್ಕಿ’ ಈ ಸಲಹೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕೈಗಾರಿಕಾ ಉತ್ಪಾದನೆಯು ಮುಂದಿನ 6 ತಿಂಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಆರ್ಥಿಕ ಉತ್ತೇಜನಾ ಕೊಡುಗೆ ರದ್ದುಪಡಿಸಬಾರದು ಅಥವಾ ಅಬಕಾರಿ ಸುಂಕ ಹೆಚ್ಚಿಸಬಾರದು ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟವು (ಎಫ್ಕೆಸಿಸಿಐ-ಫಿಕ್ಕಿ) ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಒತ್ತಾಯಿಸಿದೆ.<br /> <br /> ಕಚ್ಚಾ ಸರಕಿನ ಬೆಲೆ ಹೆಚ್ಚಳ, ಅಹಾರ ಹಣದುಬ್ಬರ ಏರಿಕೆಯು ಅರ್ಥ ವ್ಯವಸ್ಥೆಯ ಇತರ ವಲಯಗಳಿಗೆ ವಿಸ್ತರಿಸುವ ಸಾಧ್ಯತೆ ಮತ್ತಿತರ ಕಾರಣಗಳಿಗಾಗಿ ಕೈಗಾರಿಕೆ ಉತ್ಪಾದನೆಯು ಕುಂಠಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಉತ್ತೇಜನಾ ಕೊಡುಗೆಗಳನ್ನು ರದ್ದುಪಡಿಸಬಾರದು. ಅದರಲ್ಲೂ ವಿಶೇಷವಾಗಿ ಅಬಕಾರಿ ಸುಂಕ ಹೆಚ್ಚಿಸಬಾರದು ಎಂದು ‘ಫಿಕ್ಕಿ’ ಮನವಿ ಮಾಡಿಕೊಂಡಿದೆ.<br /> <br /> ಸರಕು- ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಲಾಗಿದೆ. ಆರ್ಥಿಕ ವೃದ್ಧಿ ದರವು 2011-12ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟಿನ ಪೂರ್ವದ ಶೇ 9ರ ಮಟ್ಟಕ್ಕೆ ಮರಳುವ ಸಾಧ್ಯತೆ ಇರುವುದರಿಂದ ಉತ್ತೇಜನಾ ಕೊಡುಗೆಗಳನ್ನು ಕೈಬಿಡಬಹುದಾಗಿದೆ ಎಂದು ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ‘ಫಿಕ್ಕಿ’ ಈ ಸಲಹೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>