<p><strong>ಬಳ್ಳಾರಿ: </strong>ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಸ್ಯುಸಿಐ (ಸಿ) ಪಕ್ಷದ ಅಭ್ಯರ್ಥಿ ಎ.ದೇವದಾಸ್ ಅವರು ಭಾನುವಾರ ಬೆಳಿಗ್ಗೆ ನಗರದ ವಿವಿಧ ಉದ್ಯಾನವನ ಹಾಗೂ ಆಟದ ಮೈದಾನಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ಮೂಲಕ ಮತ ಯಾಚಿಸಿದರು.<br /> <br /> ವಾಯು ವಿಹಾರಕ್ಕೆ ಬಂದಿದ್ದ ಮತದಾರರನ್ನು ಭೇಟಿಯಾದ ಅಭ್ಯರ್ಥಿ ಹಾಗೂ ಕಾರ್ಯಕರ್ತರು ಪಕ್ಷದ ಕರಪತ್ರ ಹಂಚಿ, ಬೆಂಬಲಿಸುವಂತೆ ಕೋರಿದರು.<br /> <br /> ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಿಂದ ಕೂಡಿರುವ ರಾಜಕೀಯ ಪಕ್ಷಗಳು ಕಲುಷಿತಗೊಂಡಿದ್ದು, ಅಂತಹ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಅವರು ಮನವಿ ಮಾಡಿದರು.<br /> <br /> 65 ವರ್ಷ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ನಿರುದ್ಯೋಗ, ಬಡತನ ಸಮಸ್ಯೆ ನಿವಾರಿಸುವ ಕುರಿತು ಗಂಭೀರವಾಗಿ ಚಿಂತಿಸದೆ ಭ್ರಷ್ಟ ಆಡಳಿತ ನೀಡಿವೆ ಎಂದು ಅವರು ದೂರಿದರು.<br /> <br /> ಕೇವಲ ಅಧಿಕಾರಕ್ಕಾಗಿ ಹಪಹಪಿಸುವ ಈ ಪಕ್ಷಗಳಿಂದ ದೇಶದ ಜ್ವಲಂತ ಸಮಸ್ಯೆಗಳ ನಿವಾರಣೆ ಅಸಾಧ್ಯ. ಇಂತಹ ಪಕ್ಷಗಳಿಗೆ ಮತದಾರರು ಮನ್ನಣೆ ನೀಡಬಾರದು ಎಂದರು. ಉನ್ನತ ಸಿದ್ಧಾಂತ ಹಾಗೂ ಮೌಲ್ಯಾಧಾರಿತ ರಾಜಕೀಯ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇರುವ ತಮ್ಮ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಕೋರಿದರು.<br /> ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಸೋಮಶೇಖರ್, ಆರ್. ಸೋಮಶೇಖರಗೌಡ, ಡಾ.ಪ್ರಮೋದ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಸ್ಯುಸಿಐ (ಸಿ) ಪಕ್ಷದ ಅಭ್ಯರ್ಥಿ ಎ.ದೇವದಾಸ್ ಅವರು ಭಾನುವಾರ ಬೆಳಿಗ್ಗೆ ನಗರದ ವಿವಿಧ ಉದ್ಯಾನವನ ಹಾಗೂ ಆಟದ ಮೈದಾನಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ಮೂಲಕ ಮತ ಯಾಚಿಸಿದರು.<br /> <br /> ವಾಯು ವಿಹಾರಕ್ಕೆ ಬಂದಿದ್ದ ಮತದಾರರನ್ನು ಭೇಟಿಯಾದ ಅಭ್ಯರ್ಥಿ ಹಾಗೂ ಕಾರ್ಯಕರ್ತರು ಪಕ್ಷದ ಕರಪತ್ರ ಹಂಚಿ, ಬೆಂಬಲಿಸುವಂತೆ ಕೋರಿದರು.<br /> <br /> ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಿಂದ ಕೂಡಿರುವ ರಾಜಕೀಯ ಪಕ್ಷಗಳು ಕಲುಷಿತಗೊಂಡಿದ್ದು, ಅಂತಹ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಅವರು ಮನವಿ ಮಾಡಿದರು.<br /> <br /> 65 ವರ್ಷ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ನಿರುದ್ಯೋಗ, ಬಡತನ ಸಮಸ್ಯೆ ನಿವಾರಿಸುವ ಕುರಿತು ಗಂಭೀರವಾಗಿ ಚಿಂತಿಸದೆ ಭ್ರಷ್ಟ ಆಡಳಿತ ನೀಡಿವೆ ಎಂದು ಅವರು ದೂರಿದರು.<br /> <br /> ಕೇವಲ ಅಧಿಕಾರಕ್ಕಾಗಿ ಹಪಹಪಿಸುವ ಈ ಪಕ್ಷಗಳಿಂದ ದೇಶದ ಜ್ವಲಂತ ಸಮಸ್ಯೆಗಳ ನಿವಾರಣೆ ಅಸಾಧ್ಯ. ಇಂತಹ ಪಕ್ಷಗಳಿಗೆ ಮತದಾರರು ಮನ್ನಣೆ ನೀಡಬಾರದು ಎಂದರು. ಉನ್ನತ ಸಿದ್ಧಾಂತ ಹಾಗೂ ಮೌಲ್ಯಾಧಾರಿತ ರಾಜಕೀಯ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇರುವ ತಮ್ಮ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಕೋರಿದರು.<br /> ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಸೋಮಶೇಖರ್, ಆರ್. ಸೋಮಶೇಖರಗೌಡ, ಡಾ.ಪ್ರಮೋದ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>