<p><strong>ಉಡುಪಿ: </strong>ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಲು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಶ್ರಮಿಸಬೇಕು ಎಂದು ಒಂಬುಡ್ಸ್ಮನ್ ಶೀನಶೆಟ್ಟಿ ಹೇಳಿದರು.<br /> <br /> ಉಡುಪಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಉದ್ಯೋಗ ಖಾತರಿ ಯೋಜನೆಯ ಮಾಹಿತಿ, ಶಿಕ್ಷಣ, ಸಂಹವನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಯೋಜನೆ ವರದಾನವಾಗಿದೆ. ಉದ್ಯೋಗ ಚೀಟಿ ಪಡೆದಿರುವ ಪ್ರತಿಯೊಬ್ಬರೂ ವಾರ್ಷಿಕ 17,400 ರೂಪಾಯಿ ಆದಾಯ ಗಳಿಸುವಂತಾಗಬೇಕು. ಮಾರ್ಗಸೂಚಿಯ ಅನ್ವಯ ಕೆಲಸ ಮಾಡಿದರೆ ಮೂರು ವರ್ಷಗಳಲ್ಲಿ ಆಗದಷ್ಟು ಕೆಲಸ ಮುಂದಿನ ಐದು ತಿಂಗಳಲ್ಲಿ ಆಗಲಿದೆ ಎಂದು ಹೇಳಿದರು.<br /> <br /> ಗ್ರಾಮ ಪಂಚಾಯಿತಿಗೆ ಪರಮಾಧಿಕಾರವಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಯ ಲಾಭ ಸಿಗುವಂತೆ ಮಾಡುವ ಹೊಣೆಯೂ ಇದೆ. ಗ್ರಾಮದಲ್ಲಿ ಆಸ್ತಿ ಸೃಷ್ಟಿಸಿ, ನೆಲ, ಜಲ ಸಂರಕ್ಷಣೆ ಕೆಲಸವನ್ನು ಮಾಡಿ. ಸಾಮಗ್ರಿ ಆಧಾರಿತ ಕೆಲಸವನ್ನು ಕಡಿಮೆ ಮಾಡಿ ಕೂಲಿ ಆಧಾರಿತ ಕಾಮಗಾರಿಗೆ ಆದ್ಯತೆ ನೀಡಿ ಎಂದು ಕಿವಿ ಮಾತು ಹೇಳಿದರು.<br /> <br /> ಉಡುಪಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಯ್ಯ ಅತ್ಯುತ್ತಮವಾಗಿ ಕೆಲಸ ಮಾಡಿರುವ ಪಂಚಾಯಿತಿಗಳನ್ನು ಸಭೆಗೆ ಪರಿಚಯಿಸಿದರು. ಎಲ್ಲ ಅರ್ಹರಿಗೂ ಉದ್ಯೋಗ ಚೀಟಿ ನೀಡಲು ಶ್ರಮಿಸುವುದಾಗಿ ಪಿಡಿಓ, ಕಾರ್ಯದರ್ಶಿಗಳು ಪ್ರತಿಜ್ಞೆ ಮಾಡಿದರು. ಕೃಷ್ಣಮೂಲ್ಯ, ಉಮಾನಾಥ ಶೆಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಲು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಶ್ರಮಿಸಬೇಕು ಎಂದು ಒಂಬುಡ್ಸ್ಮನ್ ಶೀನಶೆಟ್ಟಿ ಹೇಳಿದರು.<br /> <br /> ಉಡುಪಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಉದ್ಯೋಗ ಖಾತರಿ ಯೋಜನೆಯ ಮಾಹಿತಿ, ಶಿಕ್ಷಣ, ಸಂಹವನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಯೋಜನೆ ವರದಾನವಾಗಿದೆ. ಉದ್ಯೋಗ ಚೀಟಿ ಪಡೆದಿರುವ ಪ್ರತಿಯೊಬ್ಬರೂ ವಾರ್ಷಿಕ 17,400 ರೂಪಾಯಿ ಆದಾಯ ಗಳಿಸುವಂತಾಗಬೇಕು. ಮಾರ್ಗಸೂಚಿಯ ಅನ್ವಯ ಕೆಲಸ ಮಾಡಿದರೆ ಮೂರು ವರ್ಷಗಳಲ್ಲಿ ಆಗದಷ್ಟು ಕೆಲಸ ಮುಂದಿನ ಐದು ತಿಂಗಳಲ್ಲಿ ಆಗಲಿದೆ ಎಂದು ಹೇಳಿದರು.<br /> <br /> ಗ್ರಾಮ ಪಂಚಾಯಿತಿಗೆ ಪರಮಾಧಿಕಾರವಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಯ ಲಾಭ ಸಿಗುವಂತೆ ಮಾಡುವ ಹೊಣೆಯೂ ಇದೆ. ಗ್ರಾಮದಲ್ಲಿ ಆಸ್ತಿ ಸೃಷ್ಟಿಸಿ, ನೆಲ, ಜಲ ಸಂರಕ್ಷಣೆ ಕೆಲಸವನ್ನು ಮಾಡಿ. ಸಾಮಗ್ರಿ ಆಧಾರಿತ ಕೆಲಸವನ್ನು ಕಡಿಮೆ ಮಾಡಿ ಕೂಲಿ ಆಧಾರಿತ ಕಾಮಗಾರಿಗೆ ಆದ್ಯತೆ ನೀಡಿ ಎಂದು ಕಿವಿ ಮಾತು ಹೇಳಿದರು.<br /> <br /> ಉಡುಪಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಯ್ಯ ಅತ್ಯುತ್ತಮವಾಗಿ ಕೆಲಸ ಮಾಡಿರುವ ಪಂಚಾಯಿತಿಗಳನ್ನು ಸಭೆಗೆ ಪರಿಚಯಿಸಿದರು. ಎಲ್ಲ ಅರ್ಹರಿಗೂ ಉದ್ಯೋಗ ಚೀಟಿ ನೀಡಲು ಶ್ರಮಿಸುವುದಾಗಿ ಪಿಡಿಓ, ಕಾರ್ಯದರ್ಶಿಗಳು ಪ್ರತಿಜ್ಞೆ ಮಾಡಿದರು. ಕೃಷ್ಣಮೂಲ್ಯ, ಉಮಾನಾಥ ಶೆಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>