<p>ಮರಿ: ಸಮೀಪದ ಕುದರೂರು ಗ್ರಾಮ ಪಂಚಾಯ್ತಿ ಉದ್ಯೋಗ ಖಾತ್ರಿ ಭ್ರಷ್ಟಾಚಾರವನ್ನು ಖಂಡಿಸಿ ಜನಪರ ವೇದಿಕೆ ಬುಧವಾರ ಸಂಘಟಿಸಿದ ಪ್ರತಿಭಟನಾ ಮೆರವಣಿಗೆಗೆ ಭಾರೀ ಜನಸ್ಪಂದನೆ ವ್ಯಕ್ತವಾಯಿತು.<br /> <br /> ಹಾರಿಗೆ ಸರ್ಕಲ್ನಿಂದ ಕುದರೂರು ಗ್ರಾಮ ಪಂಚಾಯ್ತಿವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.<br /> ಉದ್ಯೋಗ ಖಾತ್ರಿ ಯೋಜನೆಯಲ್ಲಿ ್ಙ 20 ಲ್ಷಕಕ್ಕೂ ಹೆಚ್ಚು ಮೊತ್ತಕ್ಕೆ ನಕಲಿ ಮಾನವ ದಿನಗಳನ್ನು ಎಂಇಎಸ್ ದಾಖಲಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಜಿಲ್ಲಾ ಪಂಚಾಯ್ತಿ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಖಾತ್ರಿಯಲ್ಲಿ ಭ್ರಷ್ಟಾಚಾರ ನಡೆದು 15 ದಿನಗಳು ಕಳೆದರೂ ಕೂಡ ಜಿಲ್ಲಾ ಮಟ್ಟದ ಒಬ್ಬ ಅಧಿಕಾರಿಯೂ ಪರಿಶೀಲನೆಗೆ ಆಗಮಿಸದಿರುವುದು ಇದಕ್ಕೆ ಸಾಕ್ಷಿಯಾಗಿದ್ದು, ಸುಳ್ಳು ಎಂಬಿಗಳನ್ನು ದಾಖಲಿಸಿದ ಎಂಜಿನಿಯರ್ಗಳ ವಿರುದ್ಧ ಕ್ರಮ ಜರುಗಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.<br /> <br /> ಗ್ರಾಮ ಪಂಚಾಯ್ತಿ ಉದ್ಯೋಗ ಖಾತ್ರಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡಿದ್ದು ಪಂಚಾಯತ್ ರಾಜ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಗ್ರಾಮ ಪಂಚಾಯ್ತಿಯನ್ನು ಸೂಪರ್ಸೀಡ್ ಮಾಡಿ, ಆಡಳಿತಾಧಿಕಾರಿ ನೇಮಿಸಬೇಕು ಎಂದು ಆಗ್ರಹಿಸಿದರು.<br /> <br /> ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಶಶಿಕುಮಾರ್, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶೀಘ್ರ ಕ್ರಮ ಜರುಗಿಸುವ ಭರವಸೆ ನೀಡಿದರು.<br /> <br /> ಆದರೆ, ಇದನ್ನು ಒಪ್ಪದ ಪ್ರತಿಭಟನಾಕಾರರು ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಆಗಮಿಸಬೇಕು. ತಕ್ಷಣವೇ ಅಮಾನತು ಆದೇಶ ಹೊರಡಿಸಬೇಕು ಎಂದು ಪಟ್ಟು ಹಿಡಿದರು.<br /> <br /> ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಡಾ.ಶಶಿಕುಮಾರ್ 24 ಗಂಟೆಯ ಒಳಗೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಹಾಗೂ ಈ ಬಗ್ಗೆ ಅಗತ್ಯ ವರದಿಯನ್ನು ಜಿಲ್ಲಾ ಪಂಚಾಯ್ತಿಗೆ ಸಲ್ಲಿಸುವುದಾಗಿ ತಿಳಿಸಿದರು.<br /> <br /> ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಅಮಾನತು ಆದೇಶ ಹೊರಡಿಸುವವರೆಗೆ ಗ್ರಾಮ ಪಂಚಾಯ್ತಿ ಎದುರು ಅಹೋರಾತ್ರಿ ಧರಣಿ ಮುಂದುವರಿಸುವುದಾಗಿ ನಿರ್ಧಾರ ಪ್ರಕಟಿಸಿದರು. <br /> <br /> ಅಗತ್ಯ ಮಾಹಿತಿಯನ್ನು ತಿಳಿಸಲು ಅನುಕೂಲ ಆಗುವಂತೆ ಡಾ.ಶಶಿಕುಮಾರ್ ಅವರಿಗೆ ಧರಣಿ ಸ್ಥಳದಿಂದ ತೆರಳಲು ತಾತ್ಕಾಲಿಕ ಅನುಮತಿ ನೀಡಲಾಯಿತು.<br /> <br /> ಪ್ರತಿಭಟನೆ ನೇತೃತ್ವವನ್ನು ಜಿನದತ್ತ ಜೈನ್, ಮಹಾವೀರ್ ಜೈನ್, ಸಂತೋಷ್ ಶೆಟ್ಟಿ, ಗಣೇಶ್, ರವಿ, ರಘುಪತಿ ವಹಿಸಿದ್ದರು.ಸಾಗರ ಗ್ರಾಮಾಂತರ ಠಾಣೆ ಸಿಪಿಐ ಮಾದಪ್ಪ ಸ್ಥಳದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಿ: ಸಮೀಪದ ಕುದರೂರು ಗ್ರಾಮ ಪಂಚಾಯ್ತಿ ಉದ್ಯೋಗ ಖಾತ್ರಿ ಭ್ರಷ್ಟಾಚಾರವನ್ನು ಖಂಡಿಸಿ ಜನಪರ ವೇದಿಕೆ ಬುಧವಾರ ಸಂಘಟಿಸಿದ ಪ್ರತಿಭಟನಾ ಮೆರವಣಿಗೆಗೆ ಭಾರೀ ಜನಸ್ಪಂದನೆ ವ್ಯಕ್ತವಾಯಿತು.<br /> <br /> ಹಾರಿಗೆ ಸರ್ಕಲ್ನಿಂದ ಕುದರೂರು ಗ್ರಾಮ ಪಂಚಾಯ್ತಿವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.<br /> ಉದ್ಯೋಗ ಖಾತ್ರಿ ಯೋಜನೆಯಲ್ಲಿ ್ಙ 20 ಲ್ಷಕಕ್ಕೂ ಹೆಚ್ಚು ಮೊತ್ತಕ್ಕೆ ನಕಲಿ ಮಾನವ ದಿನಗಳನ್ನು ಎಂಇಎಸ್ ದಾಖಲಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಜಿಲ್ಲಾ ಪಂಚಾಯ್ತಿ ರಕ್ಷಣೆ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಖಾತ್ರಿಯಲ್ಲಿ ಭ್ರಷ್ಟಾಚಾರ ನಡೆದು 15 ದಿನಗಳು ಕಳೆದರೂ ಕೂಡ ಜಿಲ್ಲಾ ಮಟ್ಟದ ಒಬ್ಬ ಅಧಿಕಾರಿಯೂ ಪರಿಶೀಲನೆಗೆ ಆಗಮಿಸದಿರುವುದು ಇದಕ್ಕೆ ಸಾಕ್ಷಿಯಾಗಿದ್ದು, ಸುಳ್ಳು ಎಂಬಿಗಳನ್ನು ದಾಖಲಿಸಿದ ಎಂಜಿನಿಯರ್ಗಳ ವಿರುದ್ಧ ಕ್ರಮ ಜರುಗಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.<br /> <br /> ಗ್ರಾಮ ಪಂಚಾಯ್ತಿ ಉದ್ಯೋಗ ಖಾತ್ರಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡಿದ್ದು ಪಂಚಾಯತ್ ರಾಜ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಗ್ರಾಮ ಪಂಚಾಯ್ತಿಯನ್ನು ಸೂಪರ್ಸೀಡ್ ಮಾಡಿ, ಆಡಳಿತಾಧಿಕಾರಿ ನೇಮಿಸಬೇಕು ಎಂದು ಆಗ್ರಹಿಸಿದರು.<br /> <br /> ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಶಶಿಕುಮಾರ್, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶೀಘ್ರ ಕ್ರಮ ಜರುಗಿಸುವ ಭರವಸೆ ನೀಡಿದರು.<br /> <br /> ಆದರೆ, ಇದನ್ನು ಒಪ್ಪದ ಪ್ರತಿಭಟನಾಕಾರರು ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಆಗಮಿಸಬೇಕು. ತಕ್ಷಣವೇ ಅಮಾನತು ಆದೇಶ ಹೊರಡಿಸಬೇಕು ಎಂದು ಪಟ್ಟು ಹಿಡಿದರು.<br /> <br /> ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಡಾ.ಶಶಿಕುಮಾರ್ 24 ಗಂಟೆಯ ಒಳಗೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಹಾಗೂ ಈ ಬಗ್ಗೆ ಅಗತ್ಯ ವರದಿಯನ್ನು ಜಿಲ್ಲಾ ಪಂಚಾಯ್ತಿಗೆ ಸಲ್ಲಿಸುವುದಾಗಿ ತಿಳಿಸಿದರು.<br /> <br /> ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಅಮಾನತು ಆದೇಶ ಹೊರಡಿಸುವವರೆಗೆ ಗ್ರಾಮ ಪಂಚಾಯ್ತಿ ಎದುರು ಅಹೋರಾತ್ರಿ ಧರಣಿ ಮುಂದುವರಿಸುವುದಾಗಿ ನಿರ್ಧಾರ ಪ್ರಕಟಿಸಿದರು. <br /> <br /> ಅಗತ್ಯ ಮಾಹಿತಿಯನ್ನು ತಿಳಿಸಲು ಅನುಕೂಲ ಆಗುವಂತೆ ಡಾ.ಶಶಿಕುಮಾರ್ ಅವರಿಗೆ ಧರಣಿ ಸ್ಥಳದಿಂದ ತೆರಳಲು ತಾತ್ಕಾಲಿಕ ಅನುಮತಿ ನೀಡಲಾಯಿತು.<br /> <br /> ಪ್ರತಿಭಟನೆ ನೇತೃತ್ವವನ್ನು ಜಿನದತ್ತ ಜೈನ್, ಮಹಾವೀರ್ ಜೈನ್, ಸಂತೋಷ್ ಶೆಟ್ಟಿ, ಗಣೇಶ್, ರವಿ, ರಘುಪತಿ ವಹಿಸಿದ್ದರು.ಸಾಗರ ಗ್ರಾಮಾಂತರ ಠಾಣೆ ಸಿಪಿಐ ಮಾದಪ್ಪ ಸ್ಥಳದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>