<p><strong>ರಾಂಚಿ (ಪಿಟಿಐ</strong>): ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭದ್ರತಾ ಯೋಜನೆಯ ಅನುಷ್ಟಾನಕ್ಕಾಗಿ ಅವಿರತ ಶ್ರಮಿಸುತ್ತಿದ್ದ ಕಾರ್ಯಕರ್ತ ನಿಯಾಮತ್ ಅನ್ಸಾರಿ ಎಂಬಾತನನ್ನು 12 ಜನರ ಮಾವೋವಾದಿಗಳು ಗುಂಪೊಂದು ಮನೆಯಿಂದ ಹೊರಗೆಳೆತಂದು ಮನಬಂದಂತೆ ಥಳಿಸಿ, ಹತ್ಯೆಗೈದ ಘಟನೆ ಬುಧವಾರ ಸಂಜೆ ನಡೆದಿದೆ.</p>.<p>ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರೆಂದು ಪೊಲೀಸರು ತಿಳಿಸಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಮಾವೋವಾದಿಗಳು ಮತ್ತೊಬ್ಬ ಕಾರ್ಯಕರ್ತ ಭೂಕನ್ ಸಿಂಗ್ ಅವರಿಗಾಗಿಯೂ ಹಳ್ಳಿಯಲ್ಲಿ ಶೋಧ ನಡೆಸಿದ್ದರು, ಆದರೆ ಅದೃಷ್ಟವಶಾತ್ ಅವರು ಪತ್ತೆಯಾಗಲಿಲ್ಲ ಎಂದು ವರದಿಯಾಗಿದೆ.</p>.<p>ನಿಯಾಮತ್ ಅನ್ಸಾರಿ ಅವರು ಪ್ರಖ್ಯಾತ ಅರ್ಥಶಾಸ್ತ್ರಜ್ಞ ಜೀನ್ ಡ್ರೂಜ್ ಅವರ ನಿಕಟವರ್ತಿಗಳಾಗಿದ್ದರು. ಅಲ್ಲದೆ ಗ್ರಾಮಸ್ವರಾಜ್ ಅಭಿಯಾನಕ್ಕಾಗಿ ಶ್ರಮಿಸುತ್ತಿದ್ದರು ಹಾಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭದ್ರತಾ ಯೋಜನೆಯ ಸಂಚಾಲಕರೂ ಆಗಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಈ ಹಿಂದೆ ಮಾವೋವಾದಿಗಳು ಇವರಿಗೆ ~ಅರಣ್ಯವನ್ನು ದೋಚದಿರಿ, ಇಲ್ಲವೆ ಪರಿಣಾಮ ಎದುರಿಸಿ~ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ..</p>.<p> ಮೂರು ವರ್ಷದ ಹಿಂದೆ ಖ್ಯಾತ ಅರ್ಥಶಾಸ್ತ್ರಜ್ಞ ಜೀನ್ ಡ್ರೂಜ್ ಅವರ ನಿಕಟವರ್ತಿಯೊಬ್ಬನನ್ನು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು. ನಂತರ ಡ್ರೂಜ್ ಸೇರಿದಂತೆ ಹಲವು ಸಂಘಟನೆಗಳು ಈ ಘಟನೆಯನ್ನು ಖಂಡಿಸಿ ರಾಜಾದ್ಯಂತ ಪ್ರತಿಭಟನೆಗಳನ್ನು ನಡೆಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಪಿಟಿಐ</strong>): ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭದ್ರತಾ ಯೋಜನೆಯ ಅನುಷ್ಟಾನಕ್ಕಾಗಿ ಅವಿರತ ಶ್ರಮಿಸುತ್ತಿದ್ದ ಕಾರ್ಯಕರ್ತ ನಿಯಾಮತ್ ಅನ್ಸಾರಿ ಎಂಬಾತನನ್ನು 12 ಜನರ ಮಾವೋವಾದಿಗಳು ಗುಂಪೊಂದು ಮನೆಯಿಂದ ಹೊರಗೆಳೆತಂದು ಮನಬಂದಂತೆ ಥಳಿಸಿ, ಹತ್ಯೆಗೈದ ಘಟನೆ ಬುಧವಾರ ಸಂಜೆ ನಡೆದಿದೆ.</p>.<p>ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರೆಂದು ಪೊಲೀಸರು ತಿಳಿಸಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಮಾವೋವಾದಿಗಳು ಮತ್ತೊಬ್ಬ ಕಾರ್ಯಕರ್ತ ಭೂಕನ್ ಸಿಂಗ್ ಅವರಿಗಾಗಿಯೂ ಹಳ್ಳಿಯಲ್ಲಿ ಶೋಧ ನಡೆಸಿದ್ದರು, ಆದರೆ ಅದೃಷ್ಟವಶಾತ್ ಅವರು ಪತ್ತೆಯಾಗಲಿಲ್ಲ ಎಂದು ವರದಿಯಾಗಿದೆ.</p>.<p>ನಿಯಾಮತ್ ಅನ್ಸಾರಿ ಅವರು ಪ್ರಖ್ಯಾತ ಅರ್ಥಶಾಸ್ತ್ರಜ್ಞ ಜೀನ್ ಡ್ರೂಜ್ ಅವರ ನಿಕಟವರ್ತಿಗಳಾಗಿದ್ದರು. ಅಲ್ಲದೆ ಗ್ರಾಮಸ್ವರಾಜ್ ಅಭಿಯಾನಕ್ಕಾಗಿ ಶ್ರಮಿಸುತ್ತಿದ್ದರು ಹಾಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭದ್ರತಾ ಯೋಜನೆಯ ಸಂಚಾಲಕರೂ ಆಗಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಈ ಹಿಂದೆ ಮಾವೋವಾದಿಗಳು ಇವರಿಗೆ ~ಅರಣ್ಯವನ್ನು ದೋಚದಿರಿ, ಇಲ್ಲವೆ ಪರಿಣಾಮ ಎದುರಿಸಿ~ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ..</p>.<p> ಮೂರು ವರ್ಷದ ಹಿಂದೆ ಖ್ಯಾತ ಅರ್ಥಶಾಸ್ತ್ರಜ್ಞ ಜೀನ್ ಡ್ರೂಜ್ ಅವರ ನಿಕಟವರ್ತಿಯೊಬ್ಬನನ್ನು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು. ನಂತರ ಡ್ರೂಜ್ ಸೇರಿದಂತೆ ಹಲವು ಸಂಘಟನೆಗಳು ಈ ಘಟನೆಯನ್ನು ಖಂಡಿಸಿ ರಾಜಾದ್ಯಂತ ಪ್ರತಿಭಟನೆಗಳನ್ನು ನಡೆಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>