<p><strong>ಬಾಗೇಪಲ್ಲಿ: </strong>ಪ್ರಸಕ್ತ ಬಜೆಟ್ನಲ್ಲಿ ಉದ್ಯೋಗ ಸೃಷ್ಠಿ ಹಾಗೂ ನಿರುದ್ಯೋಗ ಭತ್ಯೆಗೆ ಹೆಚ್ಚು ಹಣ ಮೀಸಲಿಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮಾ.15ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಎನ್.ಎಲ್.ಭರತ್ರಾಜ್ ಬುಧವಾರ ಇಲ್ಲಿ ತಿಳಿಸಿದರು. <br /> <br /> ರಾಜ್ಯದ ವಿವಿಧ ಇಲಾಖೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಶಿಕ್ಷಣದಲ್ಲಿ 38,518, ವೈದ್ಯ ಶಿಕ್ಷಣ ಇಲಾಖೆಯಲ್ಲಿ 20,143, ಪೊಲೀಸ್ ಇಲಾಖೆ- 16,950, ನಿಗಮ ಮಂಡಳಿ-13, 309, ಸಮಾಜ ಕಲ್ಯಾಣ-10,546, ನ್ಯಾಯಾಂಗ- 7,516, ಕಂದಾಯ-6,108, ತಾಂತ್ರಿಕ- 6601, ತೋಟಗಾರಿಕೆ-7636, ಪಶು ಸಂಗೋಪನೆ-5364, ಆರೋಗ್ಯ-23,088 ಹುದ್ದೆಗಳು ಖಾಲಿ ಇವೆ. ಇವುಗಳನ್ನು ನೇಮಕಕ್ಕೆ ಕೂಡಲೇ ರಾಜ್ಯ ಸರ್ಕಾರ ಮುಂದಾಗುವಂತೆ ಭರತ್ರಾಜ್ ಗೋಷ್ಠಿಯಲ್ಲಿ ಹೇಳಿದರು.<br /> <br /> ಖಾಲಿ ಇರುವ ಐದು ಸಾವಿರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಉದ್ಯೋಗ ನೇಮಕಾತಿ ಮೇಲಿನ ಕೆಲವು ನಿರ್ಬಂಧಗಳನ್ನು ಹಿಂತೆಗೆದುಕೊಳ್ಳಬೇಕು. ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಹೊರಗುತ್ತಿಗೆ ರದ್ದಾ ಗಬೇಕು. ಲೋಕಾಯುಕ್ತ ವರದಿ ಅನುಷ್ಠಾನ ಗೊಳಿಸಬೇಕು. <br /> ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೊಳಿಸಬೇಕು. <br /> <br /> ಗ್ರಾಮೀಣ ಭಾಗದ ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ಆರು ಸಾವಿರ, ನಗರ ಪ್ರದೇಶಗಳಲ್ಲಿ ಹತ್ತು ಸಾವಿರ ಕನಿಷ್ಠ ವೇತನ ನಿಗದಿಗೊಳಿಸಬೇಕು. ಇದರ ಜತೆಯಲ್ಲಿ ನಿರುದ್ಯೋಗ ಭತ್ಯೆ ನೀಡಲು ಯೋಜನೆ ರೂಪಿಸಿ ಬಜೆಟ್ನಲ್ಲಿ ಹಣ ಮೀಸಲೀಡಬೇಕು ಎಂದು ಹೇಳಿದರು.<br /> <br /> ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಚನ್ನರಾಯಪ್ಪ, ಕಾರ್ಯದರ್ಶಿ ಎಂ.ಪಿ.ಮುನಿ ವೆಂಕಟಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ರಘುರಾಮರೆಡ್ಡಿ, ಕಾರ್ಯದರ್ಶಿ ಶ್ರೀನಿವಾಸ ರೆಡ್ಡಿ, ಗೌರಿಬಿದನೂರು ತಾಲ್ಲೂಕು ಘಟಕದ ಅಧ್ಯಕ್ಷ ರವಿಚಂದ್ರರೆಡ್ಡಿ, ಚಿಂತಾಮಣಿ ಘಟಕದ ಅಧ್ಯಕ್ಷ ಕೃಷ್ಣಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ: </strong>ಪ್ರಸಕ್ತ ಬಜೆಟ್ನಲ್ಲಿ ಉದ್ಯೋಗ ಸೃಷ್ಠಿ ಹಾಗೂ ನಿರುದ್ಯೋಗ ಭತ್ಯೆಗೆ ಹೆಚ್ಚು ಹಣ ಮೀಸಲಿಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮಾ.15ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಎನ್.ಎಲ್.ಭರತ್ರಾಜ್ ಬುಧವಾರ ಇಲ್ಲಿ ತಿಳಿಸಿದರು. <br /> <br /> ರಾಜ್ಯದ ವಿವಿಧ ಇಲಾಖೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಶಿಕ್ಷಣದಲ್ಲಿ 38,518, ವೈದ್ಯ ಶಿಕ್ಷಣ ಇಲಾಖೆಯಲ್ಲಿ 20,143, ಪೊಲೀಸ್ ಇಲಾಖೆ- 16,950, ನಿಗಮ ಮಂಡಳಿ-13, 309, ಸಮಾಜ ಕಲ್ಯಾಣ-10,546, ನ್ಯಾಯಾಂಗ- 7,516, ಕಂದಾಯ-6,108, ತಾಂತ್ರಿಕ- 6601, ತೋಟಗಾರಿಕೆ-7636, ಪಶು ಸಂಗೋಪನೆ-5364, ಆರೋಗ್ಯ-23,088 ಹುದ್ದೆಗಳು ಖಾಲಿ ಇವೆ. ಇವುಗಳನ್ನು ನೇಮಕಕ್ಕೆ ಕೂಡಲೇ ರಾಜ್ಯ ಸರ್ಕಾರ ಮುಂದಾಗುವಂತೆ ಭರತ್ರಾಜ್ ಗೋಷ್ಠಿಯಲ್ಲಿ ಹೇಳಿದರು.<br /> <br /> ಖಾಲಿ ಇರುವ ಐದು ಸಾವಿರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಉದ್ಯೋಗ ನೇಮಕಾತಿ ಮೇಲಿನ ಕೆಲವು ನಿರ್ಬಂಧಗಳನ್ನು ಹಿಂತೆಗೆದುಕೊಳ್ಳಬೇಕು. ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಹೊರಗುತ್ತಿಗೆ ರದ್ದಾ ಗಬೇಕು. ಲೋಕಾಯುಕ್ತ ವರದಿ ಅನುಷ್ಠಾನ ಗೊಳಿಸಬೇಕು. <br /> ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೊಳಿಸಬೇಕು. <br /> <br /> ಗ್ರಾಮೀಣ ಭಾಗದ ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ಆರು ಸಾವಿರ, ನಗರ ಪ್ರದೇಶಗಳಲ್ಲಿ ಹತ್ತು ಸಾವಿರ ಕನಿಷ್ಠ ವೇತನ ನಿಗದಿಗೊಳಿಸಬೇಕು. ಇದರ ಜತೆಯಲ್ಲಿ ನಿರುದ್ಯೋಗ ಭತ್ಯೆ ನೀಡಲು ಯೋಜನೆ ರೂಪಿಸಿ ಬಜೆಟ್ನಲ್ಲಿ ಹಣ ಮೀಸಲೀಡಬೇಕು ಎಂದು ಹೇಳಿದರು.<br /> <br /> ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಚನ್ನರಾಯಪ್ಪ, ಕಾರ್ಯದರ್ಶಿ ಎಂ.ಪಿ.ಮುನಿ ವೆಂಕಟಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ರಘುರಾಮರೆಡ್ಡಿ, ಕಾರ್ಯದರ್ಶಿ ಶ್ರೀನಿವಾಸ ರೆಡ್ಡಿ, ಗೌರಿಬಿದನೂರು ತಾಲ್ಲೂಕು ಘಟಕದ ಅಧ್ಯಕ್ಷ ರವಿಚಂದ್ರರೆಡ್ಡಿ, ಚಿಂತಾಮಣಿ ಘಟಕದ ಅಧ್ಯಕ್ಷ ಕೃಷ್ಣಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>