<p>ಬಳ್ಳಾರಿ: ಯುವತಿಯರು ವಿದ್ಯಾರ್ಥಿ ದೆಸೆಯಲ್ಲೇ ಸ್ವಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಗುರಿಯನ್ನು ಹೊಂದುವ ಮೂಲಕ, ಸಾಧನೆಗೆ ಶ್ರಮಿಸಬೇಕು ಎಂದು ವಿಜಾಪುರದ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಮೀನಾ ಚಂದಾವರಕರ್ ಸಲಹೆ ನೀಡಿದರು.<br /> <br /> ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಪ್ರಸಕ್ತ ಸಾಲಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿನಿಯರು ಪದವಿ ಪಡೆದ ನಂತರ ಕೆಲಸಕ್ಕಾಗಿ ಹುಡುಕಾಟ ಪ್ರಾರಂಭಿಸದೆ, ವ್ಯಾಸಂಗದ ವೇಳೆಯಲ್ಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿ ಮಾಡಿಕೊಂಡಿರಬೇಕು ಎಂದು ಅವರು ತಿಳಿಸಿದರು.<br /> ಮಹಿಳೆ ಸ್ವಾವಲಂಬಿಯಾದರೆ ಸಮಾಜಕ್ಕೂ ಕೊಡುಗೆ ನೀಡಬಹುದು ಎಂದು ಅವರು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಮಾತನಾಡಿ, ಕಾಲೇಜನ್ನು ಅಭಿವೃದ್ಧಿಗೊಳಿಸಿ, ಮೂಲ ಸೌಲಭ್ಯ ಕಲ್ಪಿಸಲು ಸಂಘ ಸದಾ ಆಸಕ್ತಿ ಹೊಂದಿದೆ. ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.<br /> <br /> ಈ ಕಾರ್ಯಕ್ರಮದಲ್ಲಿ ವೀ.ವಿ. ಸಂಘದ ಕೆ.ಎಂ. ಮಹೇಶ್ವರಸ್ವಾಮಿ, ಗುರುಸಿದ್ಧಸ್ವಾಮಿ, ಜೆ.ಎಸ್. ನೇಪಾಕ್ಷಪ್ಪ, ಸಂಗನಕಲ್ಲು ಹಿಮಂತ ರಾಜ್, ಕಾತ್ಯಾಯನಿ ಮರಿದೇವಯ್ಯ, ಜೆ.ಎಸ್.ಸುಮಂಗಳಮ್ಮ, ಡಾ.ರೇಣುಕಾ ಮಂಜುನಾಥ, ಸ್ವರ್ಣಲತಾ ಗಡಗಿ, ಅಂಗಡಿ ಶಶಿಕಲಾ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.<br /> ಪ್ರಾಚಾಯ ಡಾ.ಕೆ. ತೇಜಸ್ ಮೂರ್ತಿ ವಾರ್ಷಿಕ ವರದಿ ಮಂಡಿಸಿದರು.<br /> <br /> ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್. ನಾಗರಾಜ ಸ್ವಾಗತಿಸಿ, ವಂದಿಸಿದರು.<br /> ನಂತರ ಕಾಲೇಜಿನ ವಿದ್ಯಾರ್ಥಿನಿ ಯರಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಯುವತಿಯರು ವಿದ್ಯಾರ್ಥಿ ದೆಸೆಯಲ್ಲೇ ಸ್ವಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಗುರಿಯನ್ನು ಹೊಂದುವ ಮೂಲಕ, ಸಾಧನೆಗೆ ಶ್ರಮಿಸಬೇಕು ಎಂದು ವಿಜಾಪುರದ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಮೀನಾ ಚಂದಾವರಕರ್ ಸಲಹೆ ನೀಡಿದರು.<br /> <br /> ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಪ್ರಸಕ್ತ ಸಾಲಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿನಿಯರು ಪದವಿ ಪಡೆದ ನಂತರ ಕೆಲಸಕ್ಕಾಗಿ ಹುಡುಕಾಟ ಪ್ರಾರಂಭಿಸದೆ, ವ್ಯಾಸಂಗದ ವೇಳೆಯಲ್ಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿ ಮಾಡಿಕೊಂಡಿರಬೇಕು ಎಂದು ಅವರು ತಿಳಿಸಿದರು.<br /> ಮಹಿಳೆ ಸ್ವಾವಲಂಬಿಯಾದರೆ ಸಮಾಜಕ್ಕೂ ಕೊಡುಗೆ ನೀಡಬಹುದು ಎಂದು ಅವರು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಮಾತನಾಡಿ, ಕಾಲೇಜನ್ನು ಅಭಿವೃದ್ಧಿಗೊಳಿಸಿ, ಮೂಲ ಸೌಲಭ್ಯ ಕಲ್ಪಿಸಲು ಸಂಘ ಸದಾ ಆಸಕ್ತಿ ಹೊಂದಿದೆ. ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.<br /> <br /> ಈ ಕಾರ್ಯಕ್ರಮದಲ್ಲಿ ವೀ.ವಿ. ಸಂಘದ ಕೆ.ಎಂ. ಮಹೇಶ್ವರಸ್ವಾಮಿ, ಗುರುಸಿದ್ಧಸ್ವಾಮಿ, ಜೆ.ಎಸ್. ನೇಪಾಕ್ಷಪ್ಪ, ಸಂಗನಕಲ್ಲು ಹಿಮಂತ ರಾಜ್, ಕಾತ್ಯಾಯನಿ ಮರಿದೇವಯ್ಯ, ಜೆ.ಎಸ್.ಸುಮಂಗಳಮ್ಮ, ಡಾ.ರೇಣುಕಾ ಮಂಜುನಾಥ, ಸ್ವರ್ಣಲತಾ ಗಡಗಿ, ಅಂಗಡಿ ಶಶಿಕಲಾ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.<br /> ಪ್ರಾಚಾಯ ಡಾ.ಕೆ. ತೇಜಸ್ ಮೂರ್ತಿ ವಾರ್ಷಿಕ ವರದಿ ಮಂಡಿಸಿದರು.<br /> <br /> ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್. ನಾಗರಾಜ ಸ್ವಾಗತಿಸಿ, ವಂದಿಸಿದರು.<br /> ನಂತರ ಕಾಲೇಜಿನ ವಿದ್ಯಾರ್ಥಿನಿ ಯರಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>