<p><strong>ಮೈಸೂರು:</strong> `ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು~ ಎಂದು ಅಂಕಿ-ಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ (ಸ್ವತಂತ್ರ ನಿರ್ವಹಣೆ) ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಶ್ರೀಕಾಂತ್ಕುಮಾರ್ ಜೇನಾ ಸೋಮವಾರ ತಿಳಿಸಿದರು.<br /> <br /> ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ನಾಲ್ಕನೆಯ ಪದವೀಧರರ ದಿನಾಚರಣೆಯಲ್ಲಿ ಪದವಿ ಪ್ರದಾನದ ಮಾಡಿ ಮಾತನಾಡಿದ ಅವರು, `ಈ ಸಂಬಂಧವಾಗಿ ಕಾಲೇಜುಗಳಿಗೆ ಸ್ವಾಯತ್ತೆ ನೀಡಬೇಕು ಹಾಗೂ ನ್ಯಾಕ್ ಕಾಲೇಜುಗಳು ಮಾನ್ಯತೆ ನೀಡಬೇಕು. ಆಗ ಮಾತ್ರ ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ~ ಎಂದು ಹೇಳಿದರು.<br /> <br /> `11 ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಉನ್ನತ ಶಿಕ್ಷಣದಲ್ಲಿ ಶೇ.15 ರಷ್ಟು ನೋಂದಣಿ ಮಾಡಿಸುವ ಗುರಿಯನ್ನು ಹೊಂದಲಾಗಿದ್ದು, 12 ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಈ ಪ್ರಮಾಣವನ್ನು ಶೇ.21 ಕ್ಕೆ ಹೆಚ್ಚಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳು, ಸಾಂದರ್ಭಿಕ ತರಬೇತಿ ಕೋರ್ಸ್ಗಳು ಹಾಗೂ ತಾಂತ್ರಿಕ ಸಂಸ್ಥೆಗಳ ಸಂಖ್ಯೆ ಹೆಚ್ಚಬೇಕು. ಇವುಗಳು ಹೆಚ್ಚು ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಸಾಧ್ಯವಾಗಬೇಕು~ ಎಂದ ಅವರು `ಎಸ್ಸಿ, ಎಸ್ಟಿ ಮತ್ತು ಓಬಿಸಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಬೇಕು~ ಎಂದರು.<br /> <br /> `ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ನೋಂದಣಿಗಾಗಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ನೀಡುತ್ತಿವೆ. ಗುಣಮಟ್ಟದ ಶಿಕ್ಷಣ ನೀಡಲು ಮೂಲಸೌಕರ್ಯದ ಜೊತೆಗೆ ಸ್ಪರ್ಧಾತ್ಮಕ ಹಾಗೂ ತರಬೇತಿ ಹೊಂದಿದ ಶಿಕ್ಷಕರ ಅಗತ್ಯವಿದೆ. <br /> <br /> ಭಾರತದಂತಹ ದೇಶದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ದೊಡ್ಡ ಸವಾಲಾಗಿದೆ. ಸ್ವಾತಂತ್ರ್ಯಾನಂತರದಲ್ಲಿ ದೇಶದಲ್ಲಿ ವಿಶ್ವವಿದ್ಯಾನಿಲಯಗಳು, ಕಾಲೇಜುಗಳು, ಶಿಕ್ಷಕರ ಸಂಖ್ಯೆಯಲ್ಲಿ ಅಗಾಧ ಬೆಳವಣಿಗೆಯಾಗಿದೆ. ಅಲ್ಲದೇ ವಿದ್ಯಾರ್ಥಿಗಳ ನೋಂದಣಿಯೂ ಹೆಚ್ಚಾಗಿದೆ. ಇದಕ್ಕೆ ಅನುಗುಣವಾಗಿ ಸವಲತ್ತುಗಳನ್ನು ನೀಡಬೇಕು. ಆಗ ಮಾತ್ರ ದೇಶಕ್ಕೆ ಕೊಡುಗೆ ನೀಡಲು ಸಾಧ್ಯ~ ಎಂದು ಹೇಳಿದರು.<br /> <br /> ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜೆಎಸ್ಎಸ್ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಜಂಟಿ ಕಾರ್ಯದರ್ಶಿ ಸತೀಶ್ಚಂದ್ರ ಪ್ರಮಾಣ ವಚನ ಬೋಧಿಸಿದರು. <br /> <br /> ಪ್ರಾಂಶುಪಾಲ ಪ್ರೊ.ಬಿ.ವಿ. ಸಾಂಬಶಿವಯ್ಯ ಸ್ವಾಗತಿ ಸಿದರು. ಪದವಿ ಪಡೆದ ಎಸ್.ಆನಂದ್, ಬಿ.ಎಂ.ಮನೋಜ್, ಪಿ.ಅಭಿಶೇಕ್, ಪಿ.ಎಸ್.ಅದಿತಿ, ಜಿ.ರೇಖಾ ಅನಿಸಿಕೆ ವ್ಯಕ್ತಪಡಿಸಿದರು. <br /> ಸಹಾಯಕ ಪ್ರಾಧ್ಯಾಪಕ ಕೆ.ಜಿ.ಪರಮಶಿವಪ್ಪ ವಂದಿಸಿದರು.<br /> <br /> ವಿವಿಧ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ 27 ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಗಣ್ಯರು ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> `ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು~ ಎಂದು ಅಂಕಿ-ಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ (ಸ್ವತಂತ್ರ ನಿರ್ವಹಣೆ) ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಶ್ರೀಕಾಂತ್ಕುಮಾರ್ ಜೇನಾ ಸೋಮವಾರ ತಿಳಿಸಿದರು.<br /> <br /> ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ನಾಲ್ಕನೆಯ ಪದವೀಧರರ ದಿನಾಚರಣೆಯಲ್ಲಿ ಪದವಿ ಪ್ರದಾನದ ಮಾಡಿ ಮಾತನಾಡಿದ ಅವರು, `ಈ ಸಂಬಂಧವಾಗಿ ಕಾಲೇಜುಗಳಿಗೆ ಸ್ವಾಯತ್ತೆ ನೀಡಬೇಕು ಹಾಗೂ ನ್ಯಾಕ್ ಕಾಲೇಜುಗಳು ಮಾನ್ಯತೆ ನೀಡಬೇಕು. ಆಗ ಮಾತ್ರ ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ~ ಎಂದು ಹೇಳಿದರು.<br /> <br /> `11 ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಉನ್ನತ ಶಿಕ್ಷಣದಲ್ಲಿ ಶೇ.15 ರಷ್ಟು ನೋಂದಣಿ ಮಾಡಿಸುವ ಗುರಿಯನ್ನು ಹೊಂದಲಾಗಿದ್ದು, 12 ನೇ ಪಂಚ ವಾರ್ಷಿಕ ಯೋಜನೆಯಲ್ಲಿ ಈ ಪ್ರಮಾಣವನ್ನು ಶೇ.21 ಕ್ಕೆ ಹೆಚ್ಚಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳು, ಸಾಂದರ್ಭಿಕ ತರಬೇತಿ ಕೋರ್ಸ್ಗಳು ಹಾಗೂ ತಾಂತ್ರಿಕ ಸಂಸ್ಥೆಗಳ ಸಂಖ್ಯೆ ಹೆಚ್ಚಬೇಕು. ಇವುಗಳು ಹೆಚ್ಚು ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಸಾಧ್ಯವಾಗಬೇಕು~ ಎಂದ ಅವರು `ಎಸ್ಸಿ, ಎಸ್ಟಿ ಮತ್ತು ಓಬಿಸಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಬೇಕು~ ಎಂದರು.<br /> <br /> `ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ನೋಂದಣಿಗಾಗಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ನೀಡುತ್ತಿವೆ. ಗುಣಮಟ್ಟದ ಶಿಕ್ಷಣ ನೀಡಲು ಮೂಲಸೌಕರ್ಯದ ಜೊತೆಗೆ ಸ್ಪರ್ಧಾತ್ಮಕ ಹಾಗೂ ತರಬೇತಿ ಹೊಂದಿದ ಶಿಕ್ಷಕರ ಅಗತ್ಯವಿದೆ. <br /> <br /> ಭಾರತದಂತಹ ದೇಶದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ದೊಡ್ಡ ಸವಾಲಾಗಿದೆ. ಸ್ವಾತಂತ್ರ್ಯಾನಂತರದಲ್ಲಿ ದೇಶದಲ್ಲಿ ವಿಶ್ವವಿದ್ಯಾನಿಲಯಗಳು, ಕಾಲೇಜುಗಳು, ಶಿಕ್ಷಕರ ಸಂಖ್ಯೆಯಲ್ಲಿ ಅಗಾಧ ಬೆಳವಣಿಗೆಯಾಗಿದೆ. ಅಲ್ಲದೇ ವಿದ್ಯಾರ್ಥಿಗಳ ನೋಂದಣಿಯೂ ಹೆಚ್ಚಾಗಿದೆ. ಇದಕ್ಕೆ ಅನುಗುಣವಾಗಿ ಸವಲತ್ತುಗಳನ್ನು ನೀಡಬೇಕು. ಆಗ ಮಾತ್ರ ದೇಶಕ್ಕೆ ಕೊಡುಗೆ ನೀಡಲು ಸಾಧ್ಯ~ ಎಂದು ಹೇಳಿದರು.<br /> <br /> ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜೆಎಸ್ಎಸ್ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಜಂಟಿ ಕಾರ್ಯದರ್ಶಿ ಸತೀಶ್ಚಂದ್ರ ಪ್ರಮಾಣ ವಚನ ಬೋಧಿಸಿದರು. <br /> <br /> ಪ್ರಾಂಶುಪಾಲ ಪ್ರೊ.ಬಿ.ವಿ. ಸಾಂಬಶಿವಯ್ಯ ಸ್ವಾಗತಿ ಸಿದರು. ಪದವಿ ಪಡೆದ ಎಸ್.ಆನಂದ್, ಬಿ.ಎಂ.ಮನೋಜ್, ಪಿ.ಅಭಿಶೇಕ್, ಪಿ.ಎಸ್.ಅದಿತಿ, ಜಿ.ರೇಖಾ ಅನಿಸಿಕೆ ವ್ಯಕ್ತಪಡಿಸಿದರು. <br /> ಸಹಾಯಕ ಪ್ರಾಧ್ಯಾಪಕ ಕೆ.ಜಿ.ಪರಮಶಿವಪ್ಪ ವಂದಿಸಿದರು.<br /> <br /> ವಿವಿಧ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ 27 ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಗಣ್ಯರು ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>