<p><br /> ಉನ್ನತ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ, ಶಿಕ್ಷಣ ಸಂಸ್ಥೆಗಳ ಸುಗಮ ಆಡಳಿತ ನಿರ್ವಹಣೆಗಾಗಿ ವಿಷಯವಾರು ವಿಶ್ವವಿದ್ಯಾಲಯಗಳನ್ನು ಆರಂಭಿಸಿದೆ.</p>.<p>ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರತ್ಯೇಕವಾದ ವಿಶ್ವವಿದ್ಯಾಲಯವನ್ನು ಅಸ್ತಿತ್ವಕ್ಕೆ ತಂದಿದ್ದು ರಾಜ್ಯದ ಇನ್ನೂರಕ್ಕೂ ಹೆಚ್ಚಿನ ಎಂಜಿನಿಯರಿಂಗ್ ಕಾಲೇಜುಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬಂದಿವೆ.</p>.<p>ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಸೃಷ್ಟಿಸಿರುವ ಉದ್ಯೋಗದ ಅವಕಾಶಗಳ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆಯೂ ಸೃಷ್ಟಿಯಾಗಿರುವುದರಿಂದ ಈ ವಿಶ್ವವಿದ್ಯಾಲಯಕ್ಕೆ ಪ್ರತಿಷ್ಠಿತ ಸ್ಥಾನವೇ ಇದೆ.</p>.<p>ಆದರೆ, ವಿಶ್ವವಿದ್ಯಾಲಯದ ಗೌರವಕ್ಕೆ ತಕ್ಕಂತೆ ಅರ್ಹ ವ್ಯಕ್ತಿಯನ್ನು ಕುಲಪತಿಯಾಗಿ ನೇಮಿಸುವಲ್ಲಿ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡಿಲ್ಲವೆಂಬುದು ಈಗ ಬಯಲಾಗುತ್ತಿದೆ.</p>.<p>ಈ ವಿಶ್ವವಿದ್ಯಾಲಯದ ಕುಲಪತಿ ಗಳಿಸಿದ ಪದವಿ ಪ್ರಥಮ ದರ್ಜೆಯದೊ, ಎರಡನೇ ದರ್ಜೆಯದೋ ಎಂಬುದನ್ನು, ಅವರನ್ನು ನೇಮಕ ಮಾಡಿದ ಕುಲಾಧಿಪತಿಗಳಾದ ರಾಜ್ಯಪಾಲರು ನಿರ್ಧರಿಸಲಿ ಎಂಬ ಸೂಚನೆಯನ್ನು, ಈ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಈ ಪ್ರಕರಣದ ವಿಚಾರಣೆ ಹೈಕೋರ್ಟಿನಲ್ಲಿ ನಡೆಯುತ್ತಿದ್ದಾಗಲೇ, ಕುಲಪತಿಯಾಗಿ ನೇಮಕಗೊಂಡಿದ್ದ ವ್ಯಕ್ತಿ ತಮ್ಮ ಎಂಜಿನಿಯರಿಂಗ್ ಪದವಿಯ ಹತ್ತು ಸೆಮಿಸ್ಟರ್ಗಳಲ್ಲಿ ತೇರ್ಗಡೆಯಾಗಲು ಒಟ್ಟು 25 ಪ್ರಯತ್ನಗಳನ್ನು ತೆಗೆದುಕೊಂಡಿದ್ದರೆಂಬ ಅಂಶ ಮಾಹಿತಿ ಹಕ್ಕು ಕಾಯ್ದೆ ಅನ್ವಯ ಬಯಲಿಗೆ ಬಂದಿತ್ತು.</p>.<p> ಅನುಮಾನಕ್ಕೆ ಎಡೆ ಕೊಡುವಂಥ ಶೈಕ್ಷಣಿಕ ಅರ್ಹತೆ ಇದ್ದ ವ್ಯಕ್ತಿಯನ್ನು ಕುಲಪತಿ ಸ್ಥಾನಕ್ಕೆ ನೇಮಕ ಮಾಡಿರುವ ಸರ್ಕಾರದ ಕ್ರಮ ವಿವೇಚನೆಯಿಂದ ಕೂಡಿಲ್ಲ ಎಂಬುದು ಇದರಿಂದ ಸ್ಪಷ್ಟ.</p>.<p>ಕುಲಪತಿ ಹುದ್ದೆಗೆ ನೇಮಕಗೊಳ್ಳುವ ವ್ಯಕ್ತಿಯ ಶೈಕ್ಷಣಿಕ ಅರ್ಹತೆ ಮತ್ತು ಸಂಶೋಧನಾ ಪ್ರತಿಭೆ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿರಬೇಕು ಎಂಬುದನ್ನು ಅಭ್ಯರ್ಥಿಗಳನ್ನು ಗುರುತಿಸಿದ ಸರ್ಕಾರವಾಗಲೀ, ಅದಕ್ಕೆ ಅನುಮತಿ ನೀಡಿದ ರಾಜ್ಯಪಾಲರಾಗಲೀ ಗಮನಿಸದೆ ಇರುವುದು ಬೇಜವಾಬ್ದಾರಿಯ ಪರಮಾವಧಿ. <br /> <br /> ಇದರಿಂದ ತಾಂತ್ರಿಕ ಶಿಕ್ಷಣ ಕ್ಷೇತ್ರ ದುರ್ಬಲಗೊಳ್ಳುತ್ತದೆ. ಇದರ ಹೊಣೆಯನ್ನು ಕುಲಾಧಿಪತಿಗಳಾದ ರಾಜ್ಯಪಾಲರೇ ಹೊರಬೇಕಾಗಿದೆ. ಹಾಗೆ ನೋಡಿದರೆ ರಾಜ್ಯದಲ್ಲಿ ಈಚಿನ ವರ್ಷಗಳಲ್ಲಿ ಅಸ್ತಿತ್ವಕ್ಕೆ ಬಂದ ಎಲ್ಲ ವಿಶ್ವವಿದ್ಯಾಲಯಗಳೂ ಬಗೆಬಗೆಯ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿವೆ.</p>.<p>ಕುಲಪತಿ ಸ್ಥಾನಕ್ಕೆ ಆಯ್ಕೆ ಮಾಡುವಾಗ ಸಾಮಾಜಿಕ ನ್ಯಾಯದ ಅನ್ವಯ ಎಲ್ಲ ವರ್ಗಕ್ಕೆ ನೀಡುತ್ತಿದ್ದ ಪ್ರಾತಿನಿಧ್ಯದ ಪರಿಪಾಠ ಮಾಯವಾಗಿದೆ. ವಿಶ್ವವಿದ್ಯಾಲಯಗಳಲ್ಲಿ ನೇಮಕಗಳಿಗೆ ಕಟ್ಟುನಿಟ್ಟಿನ ನಿಯಮಗಳಿವೆ.</p>.<p>ಆದರೆ, ಎಲ್ಲ ವಿಶ್ವವಿದ್ಯಾಲಯಗಳಲ್ಲೂ ನಿಯಮಗಳನ್ನು ಉಲ್ಲಂಘಿಸಿ ಇಲ್ಲವೇ ನಿರ್ಲಕ್ಷಿಸಿ ನೇಮಕಗಳಾಗಿವೆ. ಕೆಲವು ಕಡೆ ಪ್ರಕರಣಗಳು ಹೈಕೋರ್ಟ್ ಮೆಟ್ಟಿಲೇರಿವೆ. ಇನ್ನೂ ಕೆಲವು ಕಡೆ ವಿಚಾರಣೆಗಳು ನಡೆದು ಸರ್ಕಾರಕ್ಕೆ ವರದಿಗಳು ಸಲ್ಲಿಕೆಯಾಗಿವೆ.</p>.<p>ಯಾವ ಸಂದರ್ಭದಲ್ಲೂ ವರದಿಗಳನ್ನು ಆಧರಿಸಿ ಕ್ರಮಗಳನ್ನು ಕೈಗೊಂಡಿಲ್ಲ. ಬಯಲಿಗೆ ಬಂದ ಎಲ್ಲ ಅವ್ಯವಹಾರಗಳ ಬಗ್ಗೆಯೂ ಸರ್ಕಾರದ ಕಡೆಯಿಂದ ದಿವ್ಯ ನಿರ್ಲಕ್ಷ್ಯ.</p>.<p>ಇಂಥ ಪರಿಸ್ಥಿತಿಯನ್ನು ಮೂಕ ಪ್ರೇಕ್ಷಕನಂತೆ ನೋಡುತ್ತಿರುವ ಉನ್ನತ ಶಿಕ್ಷಣ ಇಲಾಖೆ ಪ್ರಮುಖ ಅಧಿಕಾರಿಗಳ ಹುದ್ದೆಗಳೂ, ಸಚಿವ ಸ್ಥಾನವೂ ಅಪ್ರಸ್ತುತವೆನಿಸುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ಉನ್ನತ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ, ಶಿಕ್ಷಣ ಸಂಸ್ಥೆಗಳ ಸುಗಮ ಆಡಳಿತ ನಿರ್ವಹಣೆಗಾಗಿ ವಿಷಯವಾರು ವಿಶ್ವವಿದ್ಯಾಲಯಗಳನ್ನು ಆರಂಭಿಸಿದೆ.</p>.<p>ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರತ್ಯೇಕವಾದ ವಿಶ್ವವಿದ್ಯಾಲಯವನ್ನು ಅಸ್ತಿತ್ವಕ್ಕೆ ತಂದಿದ್ದು ರಾಜ್ಯದ ಇನ್ನೂರಕ್ಕೂ ಹೆಚ್ಚಿನ ಎಂಜಿನಿಯರಿಂಗ್ ಕಾಲೇಜುಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬಂದಿವೆ.</p>.<p>ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಸೃಷ್ಟಿಸಿರುವ ಉದ್ಯೋಗದ ಅವಕಾಶಗಳ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆಯೂ ಸೃಷ್ಟಿಯಾಗಿರುವುದರಿಂದ ಈ ವಿಶ್ವವಿದ್ಯಾಲಯಕ್ಕೆ ಪ್ರತಿಷ್ಠಿತ ಸ್ಥಾನವೇ ಇದೆ.</p>.<p>ಆದರೆ, ವಿಶ್ವವಿದ್ಯಾಲಯದ ಗೌರವಕ್ಕೆ ತಕ್ಕಂತೆ ಅರ್ಹ ವ್ಯಕ್ತಿಯನ್ನು ಕುಲಪತಿಯಾಗಿ ನೇಮಿಸುವಲ್ಲಿ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡಿಲ್ಲವೆಂಬುದು ಈಗ ಬಯಲಾಗುತ್ತಿದೆ.</p>.<p>ಈ ವಿಶ್ವವಿದ್ಯಾಲಯದ ಕುಲಪತಿ ಗಳಿಸಿದ ಪದವಿ ಪ್ರಥಮ ದರ್ಜೆಯದೊ, ಎರಡನೇ ದರ್ಜೆಯದೋ ಎಂಬುದನ್ನು, ಅವರನ್ನು ನೇಮಕ ಮಾಡಿದ ಕುಲಾಧಿಪತಿಗಳಾದ ರಾಜ್ಯಪಾಲರು ನಿರ್ಧರಿಸಲಿ ಎಂಬ ಸೂಚನೆಯನ್ನು, ಈ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಈ ಪ್ರಕರಣದ ವಿಚಾರಣೆ ಹೈಕೋರ್ಟಿನಲ್ಲಿ ನಡೆಯುತ್ತಿದ್ದಾಗಲೇ, ಕುಲಪತಿಯಾಗಿ ನೇಮಕಗೊಂಡಿದ್ದ ವ್ಯಕ್ತಿ ತಮ್ಮ ಎಂಜಿನಿಯರಿಂಗ್ ಪದವಿಯ ಹತ್ತು ಸೆಮಿಸ್ಟರ್ಗಳಲ್ಲಿ ತೇರ್ಗಡೆಯಾಗಲು ಒಟ್ಟು 25 ಪ್ರಯತ್ನಗಳನ್ನು ತೆಗೆದುಕೊಂಡಿದ್ದರೆಂಬ ಅಂಶ ಮಾಹಿತಿ ಹಕ್ಕು ಕಾಯ್ದೆ ಅನ್ವಯ ಬಯಲಿಗೆ ಬಂದಿತ್ತು.</p>.<p> ಅನುಮಾನಕ್ಕೆ ಎಡೆ ಕೊಡುವಂಥ ಶೈಕ್ಷಣಿಕ ಅರ್ಹತೆ ಇದ್ದ ವ್ಯಕ್ತಿಯನ್ನು ಕುಲಪತಿ ಸ್ಥಾನಕ್ಕೆ ನೇಮಕ ಮಾಡಿರುವ ಸರ್ಕಾರದ ಕ್ರಮ ವಿವೇಚನೆಯಿಂದ ಕೂಡಿಲ್ಲ ಎಂಬುದು ಇದರಿಂದ ಸ್ಪಷ್ಟ.</p>.<p>ಕುಲಪತಿ ಹುದ್ದೆಗೆ ನೇಮಕಗೊಳ್ಳುವ ವ್ಯಕ್ತಿಯ ಶೈಕ್ಷಣಿಕ ಅರ್ಹತೆ ಮತ್ತು ಸಂಶೋಧನಾ ಪ್ರತಿಭೆ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿರಬೇಕು ಎಂಬುದನ್ನು ಅಭ್ಯರ್ಥಿಗಳನ್ನು ಗುರುತಿಸಿದ ಸರ್ಕಾರವಾಗಲೀ, ಅದಕ್ಕೆ ಅನುಮತಿ ನೀಡಿದ ರಾಜ್ಯಪಾಲರಾಗಲೀ ಗಮನಿಸದೆ ಇರುವುದು ಬೇಜವಾಬ್ದಾರಿಯ ಪರಮಾವಧಿ. <br /> <br /> ಇದರಿಂದ ತಾಂತ್ರಿಕ ಶಿಕ್ಷಣ ಕ್ಷೇತ್ರ ದುರ್ಬಲಗೊಳ್ಳುತ್ತದೆ. ಇದರ ಹೊಣೆಯನ್ನು ಕುಲಾಧಿಪತಿಗಳಾದ ರಾಜ್ಯಪಾಲರೇ ಹೊರಬೇಕಾಗಿದೆ. ಹಾಗೆ ನೋಡಿದರೆ ರಾಜ್ಯದಲ್ಲಿ ಈಚಿನ ವರ್ಷಗಳಲ್ಲಿ ಅಸ್ತಿತ್ವಕ್ಕೆ ಬಂದ ಎಲ್ಲ ವಿಶ್ವವಿದ್ಯಾಲಯಗಳೂ ಬಗೆಬಗೆಯ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿವೆ.</p>.<p>ಕುಲಪತಿ ಸ್ಥಾನಕ್ಕೆ ಆಯ್ಕೆ ಮಾಡುವಾಗ ಸಾಮಾಜಿಕ ನ್ಯಾಯದ ಅನ್ವಯ ಎಲ್ಲ ವರ್ಗಕ್ಕೆ ನೀಡುತ್ತಿದ್ದ ಪ್ರಾತಿನಿಧ್ಯದ ಪರಿಪಾಠ ಮಾಯವಾಗಿದೆ. ವಿಶ್ವವಿದ್ಯಾಲಯಗಳಲ್ಲಿ ನೇಮಕಗಳಿಗೆ ಕಟ್ಟುನಿಟ್ಟಿನ ನಿಯಮಗಳಿವೆ.</p>.<p>ಆದರೆ, ಎಲ್ಲ ವಿಶ್ವವಿದ್ಯಾಲಯಗಳಲ್ಲೂ ನಿಯಮಗಳನ್ನು ಉಲ್ಲಂಘಿಸಿ ಇಲ್ಲವೇ ನಿರ್ಲಕ್ಷಿಸಿ ನೇಮಕಗಳಾಗಿವೆ. ಕೆಲವು ಕಡೆ ಪ್ರಕರಣಗಳು ಹೈಕೋರ್ಟ್ ಮೆಟ್ಟಿಲೇರಿವೆ. ಇನ್ನೂ ಕೆಲವು ಕಡೆ ವಿಚಾರಣೆಗಳು ನಡೆದು ಸರ್ಕಾರಕ್ಕೆ ವರದಿಗಳು ಸಲ್ಲಿಕೆಯಾಗಿವೆ.</p>.<p>ಯಾವ ಸಂದರ್ಭದಲ್ಲೂ ವರದಿಗಳನ್ನು ಆಧರಿಸಿ ಕ್ರಮಗಳನ್ನು ಕೈಗೊಂಡಿಲ್ಲ. ಬಯಲಿಗೆ ಬಂದ ಎಲ್ಲ ಅವ್ಯವಹಾರಗಳ ಬಗ್ಗೆಯೂ ಸರ್ಕಾರದ ಕಡೆಯಿಂದ ದಿವ್ಯ ನಿರ್ಲಕ್ಷ್ಯ.</p>.<p>ಇಂಥ ಪರಿಸ್ಥಿತಿಯನ್ನು ಮೂಕ ಪ್ರೇಕ್ಷಕನಂತೆ ನೋಡುತ್ತಿರುವ ಉನ್ನತ ಶಿಕ್ಷಣ ಇಲಾಖೆ ಪ್ರಮುಖ ಅಧಿಕಾರಿಗಳ ಹುದ್ದೆಗಳೂ, ಸಚಿವ ಸ್ಥಾನವೂ ಅಪ್ರಸ್ತುತವೆನಿಸುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>