<p><strong>ಬೆಂಗಳೂರು:</strong> ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ನಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ರೈಲ್ವೆ ಸಚಿವ ಸುರೇಶ್ಪ್ರಭು ಅವರಿಗೆ ಮನವಿ ಮಾಡಿದರು.<br /> <br /> ನವದೆಹಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ ಅನಂತಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಪತ್ರವನ್ನೂ ಹಸ್ತಾಂತರಿಸಿದರು.<br /> <br /> ‘ಐಟಿ, ಬಿಟಿ ಉದ್ಯಮದ ಬೆಳವಣಿಗೆಯಿಂದ ಸಂಚಾರದ ಒತ್ತಡವೂ ಹೆಚ್ಚಾಗಿದೆ. ವೈಟ್ಫೀಲ್ಡ್ ಮತ್ತು ಹೊರವರ್ತುಲ ರಸ್ತೆ ಸುತ್ತಲಿನ ಪ್ರದೇಶಗಳಿಗೆ ತೆರಳಲು ಪ್ರಯಾಣದ ಅವಧಿ ಹೆಚ್ಚಿದ್ದರಿಂದ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಹೀಗಾಗಿ ಉಪನಗರ ರೈಲ್ವೆ ಯೋಜನೆ ಆರಂಭಿಸಬೇಕು’ ಎಂದು ಕೇಳಿಕೊಂಡರು.<br /> <br /> ರೈಲ್ವೆ ಮಂಡಳಿ ಅಧ್ಯಕ್ಷ ಎ.ಕೆ. ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ನಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ರೈಲ್ವೆ ಸಚಿವ ಸುರೇಶ್ಪ್ರಭು ಅವರಿಗೆ ಮನವಿ ಮಾಡಿದರು.<br /> <br /> ನವದೆಹಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ ಅನಂತಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಪತ್ರವನ್ನೂ ಹಸ್ತಾಂತರಿಸಿದರು.<br /> <br /> ‘ಐಟಿ, ಬಿಟಿ ಉದ್ಯಮದ ಬೆಳವಣಿಗೆಯಿಂದ ಸಂಚಾರದ ಒತ್ತಡವೂ ಹೆಚ್ಚಾಗಿದೆ. ವೈಟ್ಫೀಲ್ಡ್ ಮತ್ತು ಹೊರವರ್ತುಲ ರಸ್ತೆ ಸುತ್ತಲಿನ ಪ್ರದೇಶಗಳಿಗೆ ತೆರಳಲು ಪ್ರಯಾಣದ ಅವಧಿ ಹೆಚ್ಚಿದ್ದರಿಂದ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಹೀಗಾಗಿ ಉಪನಗರ ರೈಲ್ವೆ ಯೋಜನೆ ಆರಂಭಿಸಬೇಕು’ ಎಂದು ಕೇಳಿಕೊಂಡರು.<br /> <br /> ರೈಲ್ವೆ ಮಂಡಳಿ ಅಧ್ಯಕ್ಷ ಎ.ಕೆ. ಮಿತ್ತಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>