<p><strong>ಕೋಲಾರ: </strong>ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮೂವರು ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆ ಮುಖಂಡರು ಸೋಮವಾರ ಕಾಲೇಜು ಪ್ರಭಾರಿ ಪ್ರಾಂಶುಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು.<br /> <br /> ತರಗತಿಗಳಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದನ್ನೆ ಕೆಲವು ಉಪನ್ಯಾಸಕರು ಹವ್ಯಾಸ ಮಾಡಿಕೊಂಡಿದ್ದಾರೆ. ಸಣ್ಣಪುಟ್ಟ ಕಾರಣಗಳಿಗಾಗಿ ವಿದ್ಯಾರ್ಥಿನಿಯರು ನಿಂದನೆಗೆ ಗುರಿಯಾಗುತ್ತಿದ್ದಾರೆ. ಉಪನ್ಯಾಸಕರ ದೌರ್ಜನ್ಯದಿಂದ ಹಲವಾರು ವಿದ್ಯಾರ್ಥಿನಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂದು ರೈತ ಮುಖಂಡ ವಡಗೂರು ನಾಗರಾಜ್ ಆರೋಪಿಸಿದರು.<br /> <br /> ಕಾಲೇಜು ಉಪನ್ಯಾಸಕರ ಪೈಕಿ ಮೂವರು, ವಿದ್ಯಾರ್ಥಿನಿಯರ ಜೊತೆ ತುಂಬಾ ಒರಟಾಗಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಶಾಲಾಭಿವೃದ್ಧಿ ಸಮಿತಿಯ ಕೃಷ್ಣಮೂರ್ತಿ ಒತ್ತಾಯಿಸಿದರು.<br /> <br /> ಕೆಲವು ಉಪನ್ಯಾಸಕರು ಕಾಲೇಜು ಅವಧಿಯಲ್ಲಿ ಸಹ ಖಾಸಗಿ ಟ್ಯೂಷನ್ ಮಾಡುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಹಿತಕ್ಕಿಂತ ಟ್ಯೂಷನ್ ವಿದ್ಯಾರ್ಥಿಗಳ ಮೇಲೆ ಮಮಕಾರ ಹೆಚ್ಚು ಎಂದು ವಿದ್ಯಾರ್ಥಿ ಮುಖಂಡ ಸುರೇಶ್ಗೌಡ ದೂರಿದರು.<br /> <br /> ಸಂಘಟನೆಗಳ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಭಾರಿ ಪ್ರಾಂಶುಪಾಲ ಪರಶಿವಮೂರ್ತಿ, ಎಲ್ಲ ದೂರುಗಳನ್ನು ಪ್ರಾಂಶುಪಾಲರ ಗಮನಕ್ಕೆ ತರಲಾಗುವುದು. ಉಪನ್ಯಾಸಕರು ತಪ್ಪು ಮಾಡಿದ್ದರೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.ವಿಜಯಕುಮಾರ್, ವೀರಣ್ಣ, ಪ್ರದೀಪ್, ರಾಜಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮೂವರು ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆ ಮುಖಂಡರು ಸೋಮವಾರ ಕಾಲೇಜು ಪ್ರಭಾರಿ ಪ್ರಾಂಶುಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು.<br /> <br /> ತರಗತಿಗಳಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದನ್ನೆ ಕೆಲವು ಉಪನ್ಯಾಸಕರು ಹವ್ಯಾಸ ಮಾಡಿಕೊಂಡಿದ್ದಾರೆ. ಸಣ್ಣಪುಟ್ಟ ಕಾರಣಗಳಿಗಾಗಿ ವಿದ್ಯಾರ್ಥಿನಿಯರು ನಿಂದನೆಗೆ ಗುರಿಯಾಗುತ್ತಿದ್ದಾರೆ. ಉಪನ್ಯಾಸಕರ ದೌರ್ಜನ್ಯದಿಂದ ಹಲವಾರು ವಿದ್ಯಾರ್ಥಿನಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂದು ರೈತ ಮುಖಂಡ ವಡಗೂರು ನಾಗರಾಜ್ ಆರೋಪಿಸಿದರು.<br /> <br /> ಕಾಲೇಜು ಉಪನ್ಯಾಸಕರ ಪೈಕಿ ಮೂವರು, ವಿದ್ಯಾರ್ಥಿನಿಯರ ಜೊತೆ ತುಂಬಾ ಒರಟಾಗಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಶಾಲಾಭಿವೃದ್ಧಿ ಸಮಿತಿಯ ಕೃಷ್ಣಮೂರ್ತಿ ಒತ್ತಾಯಿಸಿದರು.<br /> <br /> ಕೆಲವು ಉಪನ್ಯಾಸಕರು ಕಾಲೇಜು ಅವಧಿಯಲ್ಲಿ ಸಹ ಖಾಸಗಿ ಟ್ಯೂಷನ್ ಮಾಡುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಹಿತಕ್ಕಿಂತ ಟ್ಯೂಷನ್ ವಿದ್ಯಾರ್ಥಿಗಳ ಮೇಲೆ ಮಮಕಾರ ಹೆಚ್ಚು ಎಂದು ವಿದ್ಯಾರ್ಥಿ ಮುಖಂಡ ಸುರೇಶ್ಗೌಡ ದೂರಿದರು.<br /> <br /> ಸಂಘಟನೆಗಳ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರಭಾರಿ ಪ್ರಾಂಶುಪಾಲ ಪರಶಿವಮೂರ್ತಿ, ಎಲ್ಲ ದೂರುಗಳನ್ನು ಪ್ರಾಂಶುಪಾಲರ ಗಮನಕ್ಕೆ ತರಲಾಗುವುದು. ಉಪನ್ಯಾಸಕರು ತಪ್ಪು ಮಾಡಿದ್ದರೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.ವಿಜಯಕುಮಾರ್, ವೀರಣ್ಣ, ಪ್ರದೀಪ್, ರಾಜಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>