<p>ನವದೆಹಲಿ (ಪಿಟಿಐ): ಆಗಸ್ಟ್ 7 ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ತಿ ಹಮೀದ್ ಅನ್ಸಾರಿ ಅವರ ವಿರುದ್ಧ ತನ್ನ ಸರ್ವಾನುಮತದ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರನ್ನು ಎನ್ ಡಿ ಎ ಸೋಮವಾರ ಆಯ್ಕೆ ಮಾಡಿತು.<br /> <br /> ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಪಾಲ ಮಸೂದೆ ಅಂಗೀಕಾರ ಸಂದರ್ಭದಲ್ಲಿ ಸದನವನ್ನು ಸಮರ್ಪಕವಾಗಿ ನಿಭಾಯಿಸದ ಅನ್ಸಾರಿ ಅವರನ್ನು ಮರುನಾಮಕರಣ ಮಾಡುವ ಬಗ್ಗೆ ತನಗೆ ಆಕ್ಷೇಪವಿದೆ ಎಂದು ವಿರೋಧಿ ಮೈತ್ರಿಕೂಟ ಹೇಳಿತು.<br /> <br /> ~ಅವರಿಗೆ (ಕಾಂಗ್ರೆಸ್ ನೇತೃತ್ವದ ಯುಪಿಎ) ಸುಲಲಿತ ನಡಿಗೆಗೆ ಅವಕಾಶ ನೀಡದಿರಲು ನಾವು ನಿರ್ಧರಿಸಿದ್ದೇವೆ. ನಾವು ಸರ್ವಾನುಮತದಿಂದ ಜಸ್ವಂತ್ ಸಿಂಗ್ ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ~ ಎಂದು ಎನ್ ಡಿ ಎ ಕಾರ್ಯಾಧ್ಯಕ್ಷ ಎಲ್. ಕೆ. ಅಡ್ವಾಣಿ ಅವರು ಎನ್ ಡಿಎ ಸಭೆಯ ಬಳಿಕ ಪ್ರಕಟಿಸಿದರು.<br /> <br /> ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಸಂದರ್ಭದಲ್ಲಿ ಮಸೂದೆಯನ್ನು ವಿರೋಧಿಸಿದವರನ್ನು ಉಚ್ಚಾಟಿಸಲು ಮಾರ್ಶಲ್ ಗಳನ್ನು ಬಳಸಿದ ಜೆಡಿ(ಯು) ಮುಖ್ಯಸ್ಥ ಶರದ್ ಯಾದವ್ ಅವರು ತೀವ್ರ ಕಳವಳ ವ್ಯಕ್ತ ಪಡಿಸಿದರು ಎಂದು ಅಡ್ವಾಣಿ ನುಡಿದರು.<br /> <br /> ಅನ್ಸಾರಿ ಅವರ ಅಭ್ಯರ್ಥನವನ್ನು ಬೆಂಬಲಿಸುವಂತೆ ಕೋರಲು ಶನಿವಾರ ತಮ್ಮನ್ನು ಕರೆಸಿಕೊಂಡಿದ್ದ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಳಿಯೂ ಇದೇ ಕಳವಳವನ್ನು ಹಂಚಿಕೊಂಡಿದ್ದೇವೆ ಎಂದು ಅವರು ಹೇಳಿದರು.<br /> <br /> ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮೊದಲಿಗೆ ಎನ್ ಡಿಎ ಸಂಚಾಲಕರೂ ಆಗಿರುವ ಶರದ್ ಯಾದವ್ ಅವರನ್ನೇ ಕೋರಿಕೊಳ್ಳಲಾಯಿತು. ಆದರೆ ತಾವು ಸಕ್ರಿಯ ರಾಜಕಾರಣದಲ್ಲಿ ಆಸಕ್ತಿ ಹೊಂದಿರುವುದನ್ನು ಉಲ್ಲೇಖಿಸಿ ಅವರು ನಿರಾಕರಿಸಿದರು ಎಂದು ಅಡ್ವಾಣಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಆಗಸ್ಟ್ 7 ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ತಿ ಹಮೀದ್ ಅನ್ಸಾರಿ ಅವರ ವಿರುದ್ಧ ತನ್ನ ಸರ್ವಾನುಮತದ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರನ್ನು ಎನ್ ಡಿ ಎ ಸೋಮವಾರ ಆಯ್ಕೆ ಮಾಡಿತು.<br /> <br /> ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಪಾಲ ಮಸೂದೆ ಅಂಗೀಕಾರ ಸಂದರ್ಭದಲ್ಲಿ ಸದನವನ್ನು ಸಮರ್ಪಕವಾಗಿ ನಿಭಾಯಿಸದ ಅನ್ಸಾರಿ ಅವರನ್ನು ಮರುನಾಮಕರಣ ಮಾಡುವ ಬಗ್ಗೆ ತನಗೆ ಆಕ್ಷೇಪವಿದೆ ಎಂದು ವಿರೋಧಿ ಮೈತ್ರಿಕೂಟ ಹೇಳಿತು.<br /> <br /> ~ಅವರಿಗೆ (ಕಾಂಗ್ರೆಸ್ ನೇತೃತ್ವದ ಯುಪಿಎ) ಸುಲಲಿತ ನಡಿಗೆಗೆ ಅವಕಾಶ ನೀಡದಿರಲು ನಾವು ನಿರ್ಧರಿಸಿದ್ದೇವೆ. ನಾವು ಸರ್ವಾನುಮತದಿಂದ ಜಸ್ವಂತ್ ಸಿಂಗ್ ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ~ ಎಂದು ಎನ್ ಡಿ ಎ ಕಾರ್ಯಾಧ್ಯಕ್ಷ ಎಲ್. ಕೆ. ಅಡ್ವಾಣಿ ಅವರು ಎನ್ ಡಿಎ ಸಭೆಯ ಬಳಿಕ ಪ್ರಕಟಿಸಿದರು.<br /> <br /> ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಸಂದರ್ಭದಲ್ಲಿ ಮಸೂದೆಯನ್ನು ವಿರೋಧಿಸಿದವರನ್ನು ಉಚ್ಚಾಟಿಸಲು ಮಾರ್ಶಲ್ ಗಳನ್ನು ಬಳಸಿದ ಜೆಡಿ(ಯು) ಮುಖ್ಯಸ್ಥ ಶರದ್ ಯಾದವ್ ಅವರು ತೀವ್ರ ಕಳವಳ ವ್ಯಕ್ತ ಪಡಿಸಿದರು ಎಂದು ಅಡ್ವಾಣಿ ನುಡಿದರು.<br /> <br /> ಅನ್ಸಾರಿ ಅವರ ಅಭ್ಯರ್ಥನವನ್ನು ಬೆಂಬಲಿಸುವಂತೆ ಕೋರಲು ಶನಿವಾರ ತಮ್ಮನ್ನು ಕರೆಸಿಕೊಂಡಿದ್ದ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಳಿಯೂ ಇದೇ ಕಳವಳವನ್ನು ಹಂಚಿಕೊಂಡಿದ್ದೇವೆ ಎಂದು ಅವರು ಹೇಳಿದರು.<br /> <br /> ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮೊದಲಿಗೆ ಎನ್ ಡಿಎ ಸಂಚಾಲಕರೂ ಆಗಿರುವ ಶರದ್ ಯಾದವ್ ಅವರನ್ನೇ ಕೋರಿಕೊಳ್ಳಲಾಯಿತು. ಆದರೆ ತಾವು ಸಕ್ರಿಯ ರಾಜಕಾರಣದಲ್ಲಿ ಆಸಕ್ತಿ ಹೊಂದಿರುವುದನ್ನು ಉಲ್ಲೇಖಿಸಿ ಅವರು ನಿರಾಕರಿಸಿದರು ಎಂದು ಅಡ್ವಾಣಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>