<p>ಬೆಂಗಳೂರು: ಉಪ್ಪಾರ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.<br /> <br /> ಕರ್ನಾಟಕ ರಾಜ್ಯ ಉಪ್ಪಾರ ಸಂಘವು ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಉಪ್ಪಾರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಜಾತಿ ಆಳವಾಗಿ ಬೇರು ಬಿಟ್ಟಿದ್ದು, ಹಿಂದುಳಿದ ಜಾತಿಗಳು ಹೆಚ್ಚೆಚ್ಚು ಸಮಾವೇಶಗಳನ್ನು ನಡೆಸುವ ಮೂಲಕ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡ ತರಬೇಕು. ಆ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.<br /> <br /> ರಾಜ್ಯದ ನಾನಾ ಭಾಗಗಳಲ್ಲಿ ಉಪ್ಪಾರ ಸಮುದಾಯ ಹಂಚಿಹೋಗಿದ್ದು, ಈವರೆಗೆ ಕೇವಲ ಇಬ್ಬರು ಮಾತ್ರ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಗಿದೆ. ಹಿಂದುಳಿದ ವರು ಮೇಲ್ಮಟ್ಟದಲ್ಲೂ ಚುನಾಯಿತರಾಗಬೇಕು. ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕು ಎಂದರು.<br /> <br /> ಪುರುಷೋತ್ತಮಾನಂದಪುರಿ ಸ್ವಾಮೀಜಿ ರಾಜ್ಯದಲ್ಲಿ ಉಪ್ಪಾರರ ಸಂಖ್ಯೆ 40 ಲಕ್ಷಕ್ಕೂ ಮೀರಿದೆ. ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ₨5 ಕೋಟಿ ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಉಪ್ಪಾರ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.<br /> <br /> ಕರ್ನಾಟಕ ರಾಜ್ಯ ಉಪ್ಪಾರ ಸಂಘವು ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಉಪ್ಪಾರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಜಾತಿ ಆಳವಾಗಿ ಬೇರು ಬಿಟ್ಟಿದ್ದು, ಹಿಂದುಳಿದ ಜಾತಿಗಳು ಹೆಚ್ಚೆಚ್ಚು ಸಮಾವೇಶಗಳನ್ನು ನಡೆಸುವ ಮೂಲಕ ಸರ್ಕಾರದ ಮೇಲೆ ಒಗ್ಗಟ್ಟಿನ ಒತ್ತಡ ತರಬೇಕು. ಆ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.<br /> <br /> ರಾಜ್ಯದ ನಾನಾ ಭಾಗಗಳಲ್ಲಿ ಉಪ್ಪಾರ ಸಮುದಾಯ ಹಂಚಿಹೋಗಿದ್ದು, ಈವರೆಗೆ ಕೇವಲ ಇಬ್ಬರು ಮಾತ್ರ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಗಿದೆ. ಹಿಂದುಳಿದ ವರು ಮೇಲ್ಮಟ್ಟದಲ್ಲೂ ಚುನಾಯಿತರಾಗಬೇಕು. ಈ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕು ಎಂದರು.<br /> <br /> ಪುರುಷೋತ್ತಮಾನಂದಪುರಿ ಸ್ವಾಮೀಜಿ ರಾಜ್ಯದಲ್ಲಿ ಉಪ್ಪಾರರ ಸಂಖ್ಯೆ 40 ಲಕ್ಷಕ್ಕೂ ಮೀರಿದೆ. ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ₨5 ಕೋಟಿ ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>