<p><strong>ನವದೆಹಲಿ(ಪಿಟಿಐ):</strong> ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿರುವುದಕ್ಕೆ ಕಾರಣಗಳೇನು ಎನ್ನುವುದರ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿಶ್ಲೇಷಣೆ ನಡೆಸಲಿದ್ದಾರೆ.</p>.<p>ಶುಕ್ರವಾರದಂದು (ಏ. 6) ನಡೆಯಲಿರುವ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಈ ವಿಶ್ಲೇಷಣೆ ನಡೆಸಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪಕ್ಷ ಬಲವರ್ಧನೆಗೂ ಅವರು ಸಲಹೆ- ಸೂಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಉತ್ತರ ಪ್ರದೇಶ ಚುನಾವಣೆಯ ಉಸ್ತುವಾರಿ ಹೊತ್ತಿದ್ದ ರಾಹುಲ್ ಗಾಂಧಿ ಅವರು ಚುನಾವಣೆಯ ಫಲಿತಾಂಶದ ನಂತರ ಔಪಚಾರಿಕವಾಗಿ ಇದೇ ಮೊದಲ ಬಾರಿಗೆ ನಡೆಸುತ್ತಿರುವ ಈ ಸಭೆಯಲ್ಲಿ ಹೊಸದಾಗಿ ಚುನಾಯಿತರಾಗಿರುವ ಶಾಸಕರು, ಉತ್ತರ ಪ್ರದೇಶದ ಸಂಸದರು ಭಾಗವಹಿಸಲಿದ್ದಾರೆ.</p>.<p>ಚುನಾವಣೆಯಲ್ಲಿ 20 ಸಾವಿರಕ್ಕೂ ಹೆಚ್ಚು ಮತ್ತು ಕಡಿಮೆ ಅಂತರದಲ್ಲಿ ಠೇವಣಿ ಕಳೆದುಕೊಂಡು ಪರಭಾವಗೊಂಡ ಅಭ್ಯರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರು ಗುರುವಾರ ನಡೆಯುವ ಪೂರ್ವಭಾವಿ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.</p>.<p>ರಾಹುಲ್ ಗಾಂಧಿ ಅವರೇ ಮುಂಚೂಣಿಯಲ್ಲಿ ನಿಂತು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೂ ವಿಧಾನಸಭೆಯ ಒಟ್ಟು 403 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಕೇವಲ 28 ಸ್ಥಾನಗಳಲ್ಲಿ ಮಾತ್ರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ(ಪಿಟಿಐ):</strong> ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿರುವುದಕ್ಕೆ ಕಾರಣಗಳೇನು ಎನ್ನುವುದರ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿಶ್ಲೇಷಣೆ ನಡೆಸಲಿದ್ದಾರೆ.</p>.<p>ಶುಕ್ರವಾರದಂದು (ಏ. 6) ನಡೆಯಲಿರುವ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಈ ವಿಶ್ಲೇಷಣೆ ನಡೆಸಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪಕ್ಷ ಬಲವರ್ಧನೆಗೂ ಅವರು ಸಲಹೆ- ಸೂಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಉತ್ತರ ಪ್ರದೇಶ ಚುನಾವಣೆಯ ಉಸ್ತುವಾರಿ ಹೊತ್ತಿದ್ದ ರಾಹುಲ್ ಗಾಂಧಿ ಅವರು ಚುನಾವಣೆಯ ಫಲಿತಾಂಶದ ನಂತರ ಔಪಚಾರಿಕವಾಗಿ ಇದೇ ಮೊದಲ ಬಾರಿಗೆ ನಡೆಸುತ್ತಿರುವ ಈ ಸಭೆಯಲ್ಲಿ ಹೊಸದಾಗಿ ಚುನಾಯಿತರಾಗಿರುವ ಶಾಸಕರು, ಉತ್ತರ ಪ್ರದೇಶದ ಸಂಸದರು ಭಾಗವಹಿಸಲಿದ್ದಾರೆ.</p>.<p>ಚುನಾವಣೆಯಲ್ಲಿ 20 ಸಾವಿರಕ್ಕೂ ಹೆಚ್ಚು ಮತ್ತು ಕಡಿಮೆ ಅಂತರದಲ್ಲಿ ಠೇವಣಿ ಕಳೆದುಕೊಂಡು ಪರಭಾವಗೊಂಡ ಅಭ್ಯರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರು ಗುರುವಾರ ನಡೆಯುವ ಪೂರ್ವಭಾವಿ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.</p>.<p>ರಾಹುಲ್ ಗಾಂಧಿ ಅವರೇ ಮುಂಚೂಣಿಯಲ್ಲಿ ನಿಂತು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೂ ವಿಧಾನಸಭೆಯ ಒಟ್ಟು 403 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಕೇವಲ 28 ಸ್ಥಾನಗಳಲ್ಲಿ ಮಾತ್ರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>