<p><strong>ನವದೆಹಲಿ (ಪಿಟಿಐ): </strong>ಭಾರತದ ಉಪ ಕಾನ್ಸಲ್ ಜನರಲ್ ಜತೆ ಅನುಚಿತವಾಗಿ ವರ್ತಿಸಿದ್ದರ ಪ್ರತಿಭಟನಾ ಸೂಚಕವಾಗಿ ಲೋಕಸಭೆ ಸ್ಪೀಕರ್ ಮೀರಾ ಕುಮಾರ್ ಅವರು ಅಮೆರಿಕ ಸಂಸದರ ನಿಯೋಗದೊಂದಿಗಿನ ಸಭೆಯನ್ನು ಸೋಮವಾರ ರದ್ದುಪಡಿಸಿದ್ದಾರೆ.<br /> <br /> ವೀಸಾ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿನ ಭಾರತದ ಉಪ ಕಾನ್ಸಲ್ ಜನರಲ್ ದೇವಯಾನಿ ಖೋಬ್ರಾಗಡೆ ಅವರನ್ನು ಬಂಧಿಸಿ ಕೈಕೊಳ ತೊಡಿಸಿ ಸಾರ್ವಜನಿಕವಾಗಿ ಅಪಮಾನ ಮಾಡಲಾಗಿತ್ತು.<br /> <br /> ‘ದೇವಯಾನಿ ಅವರನ್ನು ಅಮೆರಿಕ ಕೆಟ್ಟದಾಗಿ ನಡೆಸಿಕೊಂಡಿದ್ದು, ಆ ದೇಶದ ಸಂಸದರ ಜೊತೆ ಸಭೆ ನಡೆಸುವುದು ಸೂಕ್ತವಲ್ಲ ಎಂದು ರಾಜಕೀಯಕ್ಕೆ ಬರುವುದಕ್ಕೂ ಮುನ್ನ ಸ್ವತಃ ಐಎಫ್ಎಸ್ ಅಧಿಕಾರಿಯಾಗಿದ್ದ ಮೀರಾ ಕುಮಾರ್ ಭಾವಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.<br /> <br /> ಇದೇ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಕೂಡ ಈಚೆಗೆ ಅಮೆರಿಕ ಸಂಸದರ ಜೊತೆಗಿನ ಸಭೆ ರದ್ದುಪಡಿಸಿದ್ದರು. ಅಲ್ಲದೇ ಭಾರತದಲ್ಲಿನ ಅಮೆರಿಕ ರಾಯಭಾರಿ ನ್ಯಾನ್ಸಿ ಪೊವೆಲ್ ಅವರ ಬಳಿಯೂ ಭಾರತ ಪ್ರತಿಭಟನೆ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಭಾರತದ ಉಪ ಕಾನ್ಸಲ್ ಜನರಲ್ ಜತೆ ಅನುಚಿತವಾಗಿ ವರ್ತಿಸಿದ್ದರ ಪ್ರತಿಭಟನಾ ಸೂಚಕವಾಗಿ ಲೋಕಸಭೆ ಸ್ಪೀಕರ್ ಮೀರಾ ಕುಮಾರ್ ಅವರು ಅಮೆರಿಕ ಸಂಸದರ ನಿಯೋಗದೊಂದಿಗಿನ ಸಭೆಯನ್ನು ಸೋಮವಾರ ರದ್ದುಪಡಿಸಿದ್ದಾರೆ.<br /> <br /> ವೀಸಾ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿನ ಭಾರತದ ಉಪ ಕಾನ್ಸಲ್ ಜನರಲ್ ದೇವಯಾನಿ ಖೋಬ್ರಾಗಡೆ ಅವರನ್ನು ಬಂಧಿಸಿ ಕೈಕೊಳ ತೊಡಿಸಿ ಸಾರ್ವಜನಿಕವಾಗಿ ಅಪಮಾನ ಮಾಡಲಾಗಿತ್ತು.<br /> <br /> ‘ದೇವಯಾನಿ ಅವರನ್ನು ಅಮೆರಿಕ ಕೆಟ್ಟದಾಗಿ ನಡೆಸಿಕೊಂಡಿದ್ದು, ಆ ದೇಶದ ಸಂಸದರ ಜೊತೆ ಸಭೆ ನಡೆಸುವುದು ಸೂಕ್ತವಲ್ಲ ಎಂದು ರಾಜಕೀಯಕ್ಕೆ ಬರುವುದಕ್ಕೂ ಮುನ್ನ ಸ್ವತಃ ಐಎಫ್ಎಸ್ ಅಧಿಕಾರಿಯಾಗಿದ್ದ ಮೀರಾ ಕುಮಾರ್ ಭಾವಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.<br /> <br /> ಇದೇ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಕೂಡ ಈಚೆಗೆ ಅಮೆರಿಕ ಸಂಸದರ ಜೊತೆಗಿನ ಸಭೆ ರದ್ದುಪಡಿಸಿದ್ದರು. ಅಲ್ಲದೇ ಭಾರತದಲ್ಲಿನ ಅಮೆರಿಕ ರಾಯಭಾರಿ ನ್ಯಾನ್ಸಿ ಪೊವೆಲ್ ಅವರ ಬಳಿಯೂ ಭಾರತ ಪ್ರತಿಭಟನೆ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>