<p><strong>ಚಿಕ್ಕಮಗಳೂರು: </strong>`ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಮಾಡಬೇಕೆನ್ನುವುದಕ್ಕಿಂತಲೂ ಪಕ್ಷ ಉಳಿಸಲು ಈ ಉಪ ಚುನಾವಣೆಯನ್ನು ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಬೇಕು~ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದರು.<br /> <br /> ನಗರದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ? ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ. ಜೆಡಿಎಸ್ ಜನರ ಮನಸ್ಸಿನಲ್ಲಿದೆ. ಚುನಾವಣೆ ಬಂದಾಗ ತನ್ನ ಶಕ್ತಿ ಪ್ರದರ್ಶಿಸುತ್ತದೆ ಎಂದು ಹೇಳಿದರು.<br /> <br /> ಕಳೆದ 2008ರ ಚುನಾವಣೆಯಲ್ಲಿ ಜೆಡಿಎಸ್ ಮೂರು ಎಂ.ಪಿ ಸ್ಥಾನ ಗೆದ್ದರೆ ಕಾಂಗ್ರೆಸ್ 6 ಸ್ಥಾನ ಪಡೆಯಿತು. ಅದು ಹೇಗೆ ಆರು ಸ್ಥಾನಗಳಲ್ಲಿ ಜಯ ಗಳಿಸಿತು ಎನ್ನುವುದನ್ನು ಈಗ ವಿಶ್ಲೇಷಣೆ ಮಾಡುವುದಿಲ್ಲ. ಆ ವಿಶ್ಲೇಷಣೆ ಇಲ್ಲಿ ಅಪ್ರಸ್ತುತ. ಒಂದಲ್ಲ ಒಂದು ರೀತಿ ಯಾರು ಯಾರ ನೆರಳಿನಲ್ಲಿ ಗೆದ್ದಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು.<br /> <br /> ರಾಜ್ಯದಲ್ಲಿ ಬಿಜೆಪಿಯ ಆಪರೇಷನ್ಗೆ ಸಿಲುಕಿ ನಡೆದ 8 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ 3ರಲ್ಲಿ ಪಕ್ಷ ಜಯಗಳಿಸಿದೆ. ಕಾಂಗ್ರೆಸ್ ಒಂದೂ ಸ್ಥಾನ ಗೆಲ್ಲಲಿಲ್ಲ. ಪಕ್ಷ ರಾಜ್ಯದಲ್ಲಿ ಎಲ್ಲಿದೆ? ಎಂಬ ಉತ್ತರವನ್ನು ಟೀಕಿಸುವವರೇ ಕಂಡುಕೊಳ್ಳಬೇಕೆಂದರು.<br /> <br /> ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಕಾಂಗ್ರೆಸ್ ಮುಖಂಡರಲ್ಲಿ ನಡುಕ ಹುಟ್ಟಿಸಿದೆ. ಹಾಗಾಗಿ ಪಕ್ಷ ಟೀಕಿಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಕುಡಿಯುವ ನೀರು, ರಸ್ತೆ ಕೊಡಲು ಸಾಧ್ಯವಾಗಿಲ್ಲವೆಂದು ಸರ್ಕಾರದ ಕಾರ್ಯವೈಖರಿ ಟೀಕಿಸಿದರು.<br /> <br /> ಸಂಸದ ಎನ್.ಚೆಲುವರಾಯಸ್ವಾಮಿ ಮಾತನಾಡಿ, ಈ ಉಪಚುನಾವಣೆ ಯಾವುದೇ ಪಕ್ಷದ ಭವಿಷ್ಯ ನಿರ್ಧರಿಸಲಿದೆ. ಉತ್ತರ ಪ್ರದೇಶದ ಚುನಾವಣಾ ಫಲಿತಾಂಶ ರಾಷ್ಟ್ರೀಯ ಪಕ್ಷಗಳು ದೇಶ ಆಳಲು ಅರ್ಹರಲ್ಲ ಎಂಬುದನ್ನು ಸಾರಿದೆ ಎಂದರು.<br /> <br /> ಪಕ್ಷದ ಜಿಲ್ಲಾ ಅಧ್ಯಕ್ಷ ಎಚ್.ಎಚ್.ದೇವರಾಜ್, ಮಹಿಳಾ ವಿಭಾಗ ಮುಖ್ಯಸ್ಥೆ ಪದ್ಮಾತಿಮ್ಮೇಗೌಡ ಮಾತನಾಡಿದರು. ರಾಜ್ಯ ಮುಖಂಡರಾದ ಕೃಷ್ಣಪ್ಪ, ರಾಮಯ್ಯ, ಮಂಜುನಾಥ, ಹುಚ್ಚಪ್ಪ, ಪುಟ್ಟರಾಜು, ಅನ್ನದಾನಿ, ಎಂ.ಡಿ.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>`ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಮಾಡಬೇಕೆನ್ನುವುದಕ್ಕಿಂತಲೂ ಪಕ್ಷ ಉಳಿಸಲು ಈ ಉಪ ಚುನಾವಣೆಯನ್ನು ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಬೇಕು~ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದರು.<br /> <br /> ನಗರದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ? ಎಂಬ ಪ್ರಶ್ನೆ ಮುಂದಿಟ್ಟಿದ್ದಾರೆ. ಜೆಡಿಎಸ್ ಜನರ ಮನಸ್ಸಿನಲ್ಲಿದೆ. ಚುನಾವಣೆ ಬಂದಾಗ ತನ್ನ ಶಕ್ತಿ ಪ್ರದರ್ಶಿಸುತ್ತದೆ ಎಂದು ಹೇಳಿದರು.<br /> <br /> ಕಳೆದ 2008ರ ಚುನಾವಣೆಯಲ್ಲಿ ಜೆಡಿಎಸ್ ಮೂರು ಎಂ.ಪಿ ಸ್ಥಾನ ಗೆದ್ದರೆ ಕಾಂಗ್ರೆಸ್ 6 ಸ್ಥಾನ ಪಡೆಯಿತು. ಅದು ಹೇಗೆ ಆರು ಸ್ಥಾನಗಳಲ್ಲಿ ಜಯ ಗಳಿಸಿತು ಎನ್ನುವುದನ್ನು ಈಗ ವಿಶ್ಲೇಷಣೆ ಮಾಡುವುದಿಲ್ಲ. ಆ ವಿಶ್ಲೇಷಣೆ ಇಲ್ಲಿ ಅಪ್ರಸ್ತುತ. ಒಂದಲ್ಲ ಒಂದು ರೀತಿ ಯಾರು ಯಾರ ನೆರಳಿನಲ್ಲಿ ಗೆದ್ದಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು.<br /> <br /> ರಾಜ್ಯದಲ್ಲಿ ಬಿಜೆಪಿಯ ಆಪರೇಷನ್ಗೆ ಸಿಲುಕಿ ನಡೆದ 8 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ 3ರಲ್ಲಿ ಪಕ್ಷ ಜಯಗಳಿಸಿದೆ. ಕಾಂಗ್ರೆಸ್ ಒಂದೂ ಸ್ಥಾನ ಗೆಲ್ಲಲಿಲ್ಲ. ಪಕ್ಷ ರಾಜ್ಯದಲ್ಲಿ ಎಲ್ಲಿದೆ? ಎಂಬ ಉತ್ತರವನ್ನು ಟೀಕಿಸುವವರೇ ಕಂಡುಕೊಳ್ಳಬೇಕೆಂದರು.<br /> <br /> ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಕಾಂಗ್ರೆಸ್ ಮುಖಂಡರಲ್ಲಿ ನಡುಕ ಹುಟ್ಟಿಸಿದೆ. ಹಾಗಾಗಿ ಪಕ್ಷ ಟೀಕಿಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಕುಡಿಯುವ ನೀರು, ರಸ್ತೆ ಕೊಡಲು ಸಾಧ್ಯವಾಗಿಲ್ಲವೆಂದು ಸರ್ಕಾರದ ಕಾರ್ಯವೈಖರಿ ಟೀಕಿಸಿದರು.<br /> <br /> ಸಂಸದ ಎನ್.ಚೆಲುವರಾಯಸ್ವಾಮಿ ಮಾತನಾಡಿ, ಈ ಉಪಚುನಾವಣೆ ಯಾವುದೇ ಪಕ್ಷದ ಭವಿಷ್ಯ ನಿರ್ಧರಿಸಲಿದೆ. ಉತ್ತರ ಪ್ರದೇಶದ ಚುನಾವಣಾ ಫಲಿತಾಂಶ ರಾಷ್ಟ್ರೀಯ ಪಕ್ಷಗಳು ದೇಶ ಆಳಲು ಅರ್ಹರಲ್ಲ ಎಂಬುದನ್ನು ಸಾರಿದೆ ಎಂದರು.<br /> <br /> ಪಕ್ಷದ ಜಿಲ್ಲಾ ಅಧ್ಯಕ್ಷ ಎಚ್.ಎಚ್.ದೇವರಾಜ್, ಮಹಿಳಾ ವಿಭಾಗ ಮುಖ್ಯಸ್ಥೆ ಪದ್ಮಾತಿಮ್ಮೇಗೌಡ ಮಾತನಾಡಿದರು. ರಾಜ್ಯ ಮುಖಂಡರಾದ ಕೃಷ್ಣಪ್ಪ, ರಾಮಯ್ಯ, ಮಂಜುನಾಥ, ಹುಚ್ಚಪ್ಪ, ಪುಟ್ಟರಾಜು, ಅನ್ನದಾನಿ, ಎಂ.ಡಿ.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>