<p><strong>ನವದೆಹಲಿ (ಪಿಟಿಐ): </strong>ಮುಂಬರುವ ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಯುಪಿಎ ತನ್ನ ಅಭ್ಯರ್ಥಿಯನ್ನಾಗಿ ಹಮೀದ್ ಅನ್ಸಾರಿ ಅವರನ್ನು ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ ಸಹ ಕಣಕ್ಕಿಳಿಯಲು ನಿರ್ಧರಿಸಿದೆ.<br /> <br /> ಯುಪಿಎ ಅನ್ಸಾರಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುತ್ತಿದ್ದಂತೆಯೇ, ಶನಿವಾರ ಸಂಜೆ ಇಲ್ಲಿ ಸಭೆ ಸೇರಿದ ಬಿಜೆಪಿ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಇದೇ16ರಂದು ಎನ್ಡಿಎ ಸಭೆ ನಡೆಯಲಿದ್ದು ಆ ನಂತರವಷ್ಟೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. <br /> <br /> 2007ರಲ್ಲಿ ಅನ್ಸಾರಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ನಜ್ಮಾ ಹೆಪ್ತುಲ್ಲಾ ಇಲ್ಲವೆ ಜೆಡಿ(ಯು) ಅಧ್ಯಕ್ಷ ಶರದ್ ಯಾದವ್ ಅವರಲ್ಲಿ ಒಬ್ಬರನ್ನು ಉಪ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. <br /> <br /> ತೃಣಮೂಲ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಗೋಪಾಲಕೃಷ್ಣ ಗಾಂಧಿ ಅಥವಾ ಕೃಷ್ಣ ಬೋಸ್ ಅವರನ್ನು ಆಯ್ಕೆಮಾಡಲಾಗುತ್ತಿದೆ ಎಂಬ ವದಂತಿಗಳು ಕೇಳಿಬಂದಿದ್ದರೂ ಪಕ್ಷದ ಅಧ್ಯಕ್ಷೆ ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಲ್ಲಿ ಎನ್ಡಿಎ ತನ್ನ ಅಭ್ಯರ್ಥಿಯನ್ನು ನಿಲ್ಲಿಸುವುದು ಖಚಿತ ಎನ್ನಲಾಗುತ್ತಿದೆ.<br /> <br /> <strong>ಗಡ್ಕರಿ, ಅಡ್ವಾಣಿಗೆ ಪ್ರಧಾನಿ ಮನವಿ:</strong> ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ ಬಿಜೆಪಿ ನಾಯಕರಾದ ನಿತಿನ್ ಗಡ್ಕರಿ, ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿ ಅವರನ್ನು ಸಂಪರ್ಕಿಸಿ ಉಪರಾಷ್ಟ್ರಪತಿ ಸ್ಥಾನಕ್ಕೆ ಹಮೀದ್ ಅನ್ಸಾರಿ ಅವರನ್ನು ಬೆಂಬಲಿಸುವಂತೆ ಕೋರಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮುಂಬರುವ ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಯುಪಿಎ ತನ್ನ ಅಭ್ಯರ್ಥಿಯನ್ನಾಗಿ ಹಮೀದ್ ಅನ್ಸಾರಿ ಅವರನ್ನು ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ ಸಹ ಕಣಕ್ಕಿಳಿಯಲು ನಿರ್ಧರಿಸಿದೆ.<br /> <br /> ಯುಪಿಎ ಅನ್ಸಾರಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುತ್ತಿದ್ದಂತೆಯೇ, ಶನಿವಾರ ಸಂಜೆ ಇಲ್ಲಿ ಸಭೆ ಸೇರಿದ ಬಿಜೆಪಿ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಇದೇ16ರಂದು ಎನ್ಡಿಎ ಸಭೆ ನಡೆಯಲಿದ್ದು ಆ ನಂತರವಷ್ಟೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. <br /> <br /> 2007ರಲ್ಲಿ ಅನ್ಸಾರಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ನಜ್ಮಾ ಹೆಪ್ತುಲ್ಲಾ ಇಲ್ಲವೆ ಜೆಡಿ(ಯು) ಅಧ್ಯಕ್ಷ ಶರದ್ ಯಾದವ್ ಅವರಲ್ಲಿ ಒಬ್ಬರನ್ನು ಉಪ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. <br /> <br /> ತೃಣಮೂಲ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಗೋಪಾಲಕೃಷ್ಣ ಗಾಂಧಿ ಅಥವಾ ಕೃಷ್ಣ ಬೋಸ್ ಅವರನ್ನು ಆಯ್ಕೆಮಾಡಲಾಗುತ್ತಿದೆ ಎಂಬ ವದಂತಿಗಳು ಕೇಳಿಬಂದಿದ್ದರೂ ಪಕ್ಷದ ಅಧ್ಯಕ್ಷೆ ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಲ್ಲಿ ಎನ್ಡಿಎ ತನ್ನ ಅಭ್ಯರ್ಥಿಯನ್ನು ನಿಲ್ಲಿಸುವುದು ಖಚಿತ ಎನ್ನಲಾಗುತ್ತಿದೆ.<br /> <br /> <strong>ಗಡ್ಕರಿ, ಅಡ್ವಾಣಿಗೆ ಪ್ರಧಾನಿ ಮನವಿ:</strong> ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ ಬಿಜೆಪಿ ನಾಯಕರಾದ ನಿತಿನ್ ಗಡ್ಕರಿ, ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿ ಅವರನ್ನು ಸಂಪರ್ಕಿಸಿ ಉಪರಾಷ್ಟ್ರಪತಿ ಸ್ಥಾನಕ್ಕೆ ಹಮೀದ್ ಅನ್ಸಾರಿ ಅವರನ್ನು ಬೆಂಬಲಿಸುವಂತೆ ಕೋರಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>