<p><strong>ಬೆಂಗಳೂರು:</strong> ಉಪ ಲೋಕಾಯುಕ್ತ ನ್ಯಾಯಮೂರ್ತಿ ಎಸ್.ಬಿ.ಮಜಗೆ ಅವರು ಬುಧವಾರ ಕೃಷ್ಣರಾಜಪುರ ತಾಲ್ಲೂಕಿನ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಕೃಷ್ಣರಾಜಪುರ ಉಪ ನೋಂದಣಿ ಕಚೇರಿಗೆ ತೆರಳಿದ ಉಪ ಲೋಕಾಯುಕ್ತರು, ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ದಾಖಲೆಗಳು ಮತ್ತು ಕಡತಗಳ ನಿರ್ವಹಣೆ ಅಸಮರ್ಪಕವಾಗಿದ್ದುದನ್ನು ಗುರುತಿಸಿದ ನ್ಯಾ.ಮಜಗೆ, ಅಲ್ಲಿನ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.<br /> <br /> ನೋಂದಣಿ ಕಚೇರಿಯ ಖಜಾನೆಗೂ ಭೇಟಿ ನೀಡಿದ ಅವರು, ಹಣಕಾಸು ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ನೋಂದಣಿ ಪ್ರಕ್ರಿಯೆ, ಅಲ್ಲಿನ ನಿಯಮಗಳು ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು.<br /> <br /> ನೆಮ್ಮದಿ ಕೇಂದ್ರ, ತಾಲ್ಲೂಕು ಕಚೇರಿಗಳಿಗೂ ಭೇಟಿ ನೀಡಿದ ಉಪ ಲೋಕಾಯುಕ್ತರು, ಪರಿಶೀಲನೆ ನಡೆಸಿದರು. ಈ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಸಾರ್ವಜನಿಕರ ಅಹವಾಲು ಆಲಿಸಿದರು. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಕೃಷ್ಣರಾಜಪುರ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಿರುವ ಸಂತೆ ಮೈದಾನದ ದುರವಸ್ಥೆಯನ್ನು ಸರಿಪಡಿಸಲು ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಈ ಸಂದರ್ಭದಲ್ಲಿ ಉಪ ಲೋಕಾಯುಕ್ತರಿಗೆ ದೂರು ಸಲ್ಲಿಸಿದರು. ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.<br /> <br /> <strong>ಆರ್.ಗುರುರಾಜನ್ ಭೇಟಿ:</strong> ಮತ್ತೊಬ್ಬ ಉಪ ಲೋಕಾಯುಕ್ತ ನ್ಯಾಯಮೂರ್ತಿ ಆರ್.ಗುರುರಾಜನ್ ಅವರು ಬುಧವಾರ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿದರು. ಎರಡೂ ತಾಲ್ಲೂಕುಗಳಲ್ಲಿ ವಿವಿಧ ಸ್ಥಳಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರ ಅಹವಾಲು ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಪ ಲೋಕಾಯುಕ್ತ ನ್ಯಾಯಮೂರ್ತಿ ಎಸ್.ಬಿ.ಮಜಗೆ ಅವರು ಬುಧವಾರ ಕೃಷ್ಣರಾಜಪುರ ತಾಲ್ಲೂಕಿನ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.<br /> <br /> ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಕೃಷ್ಣರಾಜಪುರ ಉಪ ನೋಂದಣಿ ಕಚೇರಿಗೆ ತೆರಳಿದ ಉಪ ಲೋಕಾಯುಕ್ತರು, ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ದಾಖಲೆಗಳು ಮತ್ತು ಕಡತಗಳ ನಿರ್ವಹಣೆ ಅಸಮರ್ಪಕವಾಗಿದ್ದುದನ್ನು ಗುರುತಿಸಿದ ನ್ಯಾ.ಮಜಗೆ, ಅಲ್ಲಿನ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.<br /> <br /> ನೋಂದಣಿ ಕಚೇರಿಯ ಖಜಾನೆಗೂ ಭೇಟಿ ನೀಡಿದ ಅವರು, ಹಣಕಾಸು ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ನೋಂದಣಿ ಪ್ರಕ್ರಿಯೆ, ಅಲ್ಲಿನ ನಿಯಮಗಳು ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು.<br /> <br /> ನೆಮ್ಮದಿ ಕೇಂದ್ರ, ತಾಲ್ಲೂಕು ಕಚೇರಿಗಳಿಗೂ ಭೇಟಿ ನೀಡಿದ ಉಪ ಲೋಕಾಯುಕ್ತರು, ಪರಿಶೀಲನೆ ನಡೆಸಿದರು. ಈ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಸಾರ್ವಜನಿಕರ ಅಹವಾಲು ಆಲಿಸಿದರು. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಕೃಷ್ಣರಾಜಪುರ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಿರುವ ಸಂತೆ ಮೈದಾನದ ದುರವಸ್ಥೆಯನ್ನು ಸರಿಪಡಿಸಲು ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಈ ಸಂದರ್ಭದಲ್ಲಿ ಉಪ ಲೋಕಾಯುಕ್ತರಿಗೆ ದೂರು ಸಲ್ಲಿಸಿದರು. ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.<br /> <br /> <strong>ಆರ್.ಗುರುರಾಜನ್ ಭೇಟಿ:</strong> ಮತ್ತೊಬ್ಬ ಉಪ ಲೋಕಾಯುಕ್ತ ನ್ಯಾಯಮೂರ್ತಿ ಆರ್.ಗುರುರಾಜನ್ ಅವರು ಬುಧವಾರ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿದರು. ಎರಡೂ ತಾಲ್ಲೂಕುಗಳಲ್ಲಿ ವಿವಿಧ ಸ್ಥಳಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರ ಅಹವಾಲು ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>