<p><strong>ಚಿತ್ರದುರ್ಗ:</strong> ಮಾಜಿ ಶಾಸಕ ಎ.ವಿ. ಉಮಾಪತಿ ಅವರು ಕಾಂಗ್ರೆಸ್ ತ್ಯಜಿಸಿರುವುದರಿಂದ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗಿಲ್ಲ ಎಂದು ಮಾಜಿ ಸಚಿವ ಎ. ಕೃಷ್ಣಪ್ಪ ತಿಳಿಸಿದ್ದಾರೆ.<br /> <br /> ಉಮಾಪತಿ ಅವರು ಪಕ್ಷ ತ್ಯಜಿಸಿದ ಮಾತ್ರಕ್ಕೆ ಅಲ್ಲೋಲಕಲ್ಲೋಲವಾಗಿಲ್ಲ. ಅವರ ಸಾಮರ್ಥ್ಯ ಏನು ಎನ್ನುವುದು ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಸಾಬೀತಾಗಿದೆ. ಸ್ವಂತ ಮಗನನ್ನೇ ಈ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಅವರಿಂದ ಸಾಧ್ಯವಾಗಿಲ್ಲ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಲೇವಡಿ ಮಾಡಿದರು.<br /> <br /> ವಿಧಾನಸಭೆ ಚುನಾವಣೆಯಲ್ಲಿ ಹಿರಿಯೂರಿನಿಂದ ಸ್ಪರ್ಧಿಸಿದ್ದ ಉಮಾಪತಿ ಕೇವಲ 1,400 ಮತಗಳನ್ನು ಪಡೆದು ಠೇವಣಿಯೂ ಸಿಗದೆ ಹೀನಾಯವಾಗಿ ಸೋತಿದ್ದಾರೆ. ಇದರಿಂದ ಗೊತ್ತಾಗುತ್ತದೆ ಅವರ ಶಕ್ತಿ ಏನು ಎಂಬುದು ಎಂದು ಕಿಡಿಕಾರಿದರು.<br /> <br /> ರಾಜ್ಯದಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಯಶಸ್ಸಿಯಾಗಿ ನಡೆಯುತ್ತಿದ್ದು, ಕಾರ್ಯಕರ್ತರು ಉತ್ಸಾಹದಿಂದ ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ನುಡಿದರು.<br /> <br /> ನೋಂದಣಿ ಕಾರ್ಯ ಭರದಿಂದ ಸಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಆಯಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಸದಸ್ಯತ್ವ ನೋಂದಣಿ ಕೆಲಸ ನಡೆಯುತ್ತಿದೆ. ಮಾಜಿ ಮತ್ತು ಹಾಲಿ ಶಾಸಕರು ಹಾಗೂ ಪಕ್ಷದ ಮುಖಂಡರು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.<br /> <br /> ಯುವ ಕಾಂಗ್ರೆಸ್ ಅನ್ನು ಶಕ್ತಿಯುತವಾಗಿ ಬೆಳೆಸಲು ಇದು ಸಹಕಾರಿಯಾಗಲಿದೆ. ಪಕ್ಷದ ಬೆಳವಣಿಗೆಗೂ ಇದು ಪೂರಕವಾಗಿದೆ ಎಂದರು.<br /> <br /> ಚಿತ್ರದುರ್ಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇರುವುದು ಸತ್ಯ. ಇದರಿಂದ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರದು ಎಂದು ಕೃಷ್ಣಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸಿ. ಮಹಾಲಿಂಗಪ್ಪ, ಮುಖಂಡರಾದ ಬಿ.ಟಿ.ಜಗದೀಶ್, ಸಂಪತ್ ಕುಮಾರ್, ಲಕ್ಷ್ಮೀಕಾಂತ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಮಾಜಿ ಶಾಸಕ ಎ.ವಿ. ಉಮಾಪತಿ ಅವರು ಕಾಂಗ್ರೆಸ್ ತ್ಯಜಿಸಿರುವುದರಿಂದ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗಿಲ್ಲ ಎಂದು ಮಾಜಿ ಸಚಿವ ಎ. ಕೃಷ್ಣಪ್ಪ ತಿಳಿಸಿದ್ದಾರೆ.<br /> <br /> ಉಮಾಪತಿ ಅವರು ಪಕ್ಷ ತ್ಯಜಿಸಿದ ಮಾತ್ರಕ್ಕೆ ಅಲ್ಲೋಲಕಲ್ಲೋಲವಾಗಿಲ್ಲ. ಅವರ ಸಾಮರ್ಥ್ಯ ಏನು ಎನ್ನುವುದು ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಸಾಬೀತಾಗಿದೆ. ಸ್ವಂತ ಮಗನನ್ನೇ ಈ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಅವರಿಂದ ಸಾಧ್ಯವಾಗಿಲ್ಲ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಲೇವಡಿ ಮಾಡಿದರು.<br /> <br /> ವಿಧಾನಸಭೆ ಚುನಾವಣೆಯಲ್ಲಿ ಹಿರಿಯೂರಿನಿಂದ ಸ್ಪರ್ಧಿಸಿದ್ದ ಉಮಾಪತಿ ಕೇವಲ 1,400 ಮತಗಳನ್ನು ಪಡೆದು ಠೇವಣಿಯೂ ಸಿಗದೆ ಹೀನಾಯವಾಗಿ ಸೋತಿದ್ದಾರೆ. ಇದರಿಂದ ಗೊತ್ತಾಗುತ್ತದೆ ಅವರ ಶಕ್ತಿ ಏನು ಎಂಬುದು ಎಂದು ಕಿಡಿಕಾರಿದರು.<br /> <br /> ರಾಜ್ಯದಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಯಶಸ್ಸಿಯಾಗಿ ನಡೆಯುತ್ತಿದ್ದು, ಕಾರ್ಯಕರ್ತರು ಉತ್ಸಾಹದಿಂದ ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ನುಡಿದರು.<br /> <br /> ನೋಂದಣಿ ಕಾರ್ಯ ಭರದಿಂದ ಸಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿಯೂ ಆಯಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಸದಸ್ಯತ್ವ ನೋಂದಣಿ ಕೆಲಸ ನಡೆಯುತ್ತಿದೆ. ಮಾಜಿ ಮತ್ತು ಹಾಲಿ ಶಾಸಕರು ಹಾಗೂ ಪಕ್ಷದ ಮುಖಂಡರು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.<br /> <br /> ಯುವ ಕಾಂಗ್ರೆಸ್ ಅನ್ನು ಶಕ್ತಿಯುತವಾಗಿ ಬೆಳೆಸಲು ಇದು ಸಹಕಾರಿಯಾಗಲಿದೆ. ಪಕ್ಷದ ಬೆಳವಣಿಗೆಗೂ ಇದು ಪೂರಕವಾಗಿದೆ ಎಂದರು.<br /> <br /> ಚಿತ್ರದುರ್ಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇರುವುದು ಸತ್ಯ. ಇದರಿಂದ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರದು ಎಂದು ಕೃಷ್ಣಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸಿ. ಮಹಾಲಿಂಗಪ್ಪ, ಮುಖಂಡರಾದ ಬಿ.ಟಿ.ಜಗದೀಶ್, ಸಂಪತ್ ಕುಮಾರ್, ಲಕ್ಷ್ಮೀಕಾಂತ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>