<p><strong>ಚಿಕ್ಕಮಗಳೂರು:</strong> ಜಿಲ್ಲಾಡಳಿತದ ಕ್ರಮ ಉಲ್ಲಂಘಿಸಿ ತಾಲ್ಲೂಕಿನ ಬಾಬಾಬುಡನ್ಗಿರಿಯಲ್ಲಿ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾದಲ್ಲಿ ಉರುಸ್ ನಡೆಸಲು ಯತ್ನಿಸಿದ ದರ್ಗಾದ ‘ಸಜ್ಜಾದ ನಶೀನ್’ ಆಗಿರುವ ಸಯ್ಯದ್ ಗೌಸ್ ಮೊಹಿದ್ದೀನ್ ಶಾಖಾದ್ರಿ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಚಿಕ್ಕಮಗಳೂರು ನಗರದಲ್ಲಿ ಬಂಧಿಸಿದರು.<br /> <br /> ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ನೂರಾರು ಫಕೀರರು ಉರುಸ್ ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಘೋಷಣೆ ಕೂಗಿದರು. ನಗರದ ಬಡಾ ಮಕಾನ್ ಪ್ರದೇಶದಲ್ಲಿ ಉರುಸ್ ಆಚರಣೆಗೆ ಸಂಬಂಧಿಸಿದ ಧಾರ್ಮಿಕ ವಿದಿವಿಧಾನಗಳು ಜರುಗಿದವು. <br /> <br /> ಕಳೆದ ನಾಲ್ಕು ವರ್ಷಗಳಿಂದ ಉರುಸ್ ಆಚರಿಸುತ್ತಿದ್ದ ಹಂಗಾಮಿ ಉರುಸ್ ಸಮಿತಿ ಮತ್ತು ನಗರದ ಮುಸ್ಲಿಮರು ಈ ಬಾರಿ ಶಾಖಾದ್ರಿ ಮತ್ತು ಜಿಲ್ಲಾಡಳಿತದ ನಡುವಿನ ಮುಸುಕಿನ ಗುದ್ದಾಟದಿಂದಾಗಿ ದರ್ಗಾದ ವಾರ್ಷಿಕ ಉರುಸ್ನಿಂದ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಭಾನುವಾರದಂದು ಜಿಲ್ಲಾಡಳಿತವೇ ಮುಂದೆ ನಿಂತು ಉರುಸ್ ನಡೆಸಿತ್ತು. ಆ ಸಂಧರ್ಭದಲ್ಲಿ ಶಾಖಾದ್ರಿ ಶನಿವಾರ (ಮಾ26) ರಂದು ಉರುಸ್ ಆಚರಿಸುವುದಾಗಿ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲಾಡಳಿತದ ಕ್ರಮ ಉಲ್ಲಂಘಿಸಿ ತಾಲ್ಲೂಕಿನ ಬಾಬಾಬುಡನ್ಗಿರಿಯಲ್ಲಿ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾದಲ್ಲಿ ಉರುಸ್ ನಡೆಸಲು ಯತ್ನಿಸಿದ ದರ್ಗಾದ ‘ಸಜ್ಜಾದ ನಶೀನ್’ ಆಗಿರುವ ಸಯ್ಯದ್ ಗೌಸ್ ಮೊಹಿದ್ದೀನ್ ಶಾಖಾದ್ರಿ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಚಿಕ್ಕಮಗಳೂರು ನಗರದಲ್ಲಿ ಬಂಧಿಸಿದರು.<br /> <br /> ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದ ನೂರಾರು ಫಕೀರರು ಉರುಸ್ ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಘೋಷಣೆ ಕೂಗಿದರು. ನಗರದ ಬಡಾ ಮಕಾನ್ ಪ್ರದೇಶದಲ್ಲಿ ಉರುಸ್ ಆಚರಣೆಗೆ ಸಂಬಂಧಿಸಿದ ಧಾರ್ಮಿಕ ವಿದಿವಿಧಾನಗಳು ಜರುಗಿದವು. <br /> <br /> ಕಳೆದ ನಾಲ್ಕು ವರ್ಷಗಳಿಂದ ಉರುಸ್ ಆಚರಿಸುತ್ತಿದ್ದ ಹಂಗಾಮಿ ಉರುಸ್ ಸಮಿತಿ ಮತ್ತು ನಗರದ ಮುಸ್ಲಿಮರು ಈ ಬಾರಿ ಶಾಖಾದ್ರಿ ಮತ್ತು ಜಿಲ್ಲಾಡಳಿತದ ನಡುವಿನ ಮುಸುಕಿನ ಗುದ್ದಾಟದಿಂದಾಗಿ ದರ್ಗಾದ ವಾರ್ಷಿಕ ಉರುಸ್ನಿಂದ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಭಾನುವಾರದಂದು ಜಿಲ್ಲಾಡಳಿತವೇ ಮುಂದೆ ನಿಂತು ಉರುಸ್ ನಡೆಸಿತ್ತು. ಆ ಸಂಧರ್ಭದಲ್ಲಿ ಶಾಖಾದ್ರಿ ಶನಿವಾರ (ಮಾ26) ರಂದು ಉರುಸ್ ಆಚರಿಸುವುದಾಗಿ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>