<p><strong>ಬೆಂಗಳೂರು:</strong> ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಉತ್ತರ ಕರ್ನಾಟಕ ಭಾಗ ಕಾದ ಬಾಣಲೆಯಂತಾಗುವುದು ಸಹಜ. ಆದರೆ, ಈ ವರ್ಷ ಮಾರ್ಚ್ ತಿಂಗಳಿನಲ್ಲೇ ರಾಜಧಾನಿ ಹಾಗೂ ಕರಾವಳಿಯಲ್ಲಿ ಕೆಂಡದಂತಹ ಬಿಸಿಲು ಕಾಣಿಸಿಕೊಂಡಿದೆ.<br /> <br /> ಸಾಮಾನ್ಯವಾಗಿ ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬಿಸಿಲಿನ ತಾಪ ಹೆಚ್ಚುತ್ತದೆ. ಆದರೆ, ಈ ಬಾರಿ ಮಾರ್ಚ್ ಮೊದಲನೇ ವಾರದಿಂದಲೇ ಏರುತ್ತಿರುವ ಬಿಸಿಲಿನ ಕಾವು ಸರಾಸರಿ ಉಷ್ಣಾಂಶವನ್ನೇ ಮೀರಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.<br /> <br /> ಈ ಬಗ್ಗೆ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಹವಾಮಾನ ಇಲಾಖೆ ನಿರ್ದೇಶಕ ಬಿ.ಪುಟ್ಟಣ್ಣ, ‘ಪ್ರಾಕೃತಿಕ ಅಸಮತೋಲನದಿಂದಾಗಿ ಬೇಸಿಗೆಯ ತಾಪಮಾನ ಈ ಬಾರಿ ಹೆಚ್ಚಾಗಿದ್ದು, ಮಹಾನಗರಗಳಲ್ಲಿ ಸರಾಸರಿಗಿಂತಲೂ ಹೆಚ್ಚಿನ ಉಷ್ಣಾಂಶ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಉಷ್ಣಾಂಶ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ’ ಎಂದು ಮಾಹಿತಿ ನೀಡಿದರು.<br /> <br /> ‘ಭೂಮಟ್ಟದಿಂದಲೇ ಉಷ್ಣಾಂಶ ಏರಿಕೆಯಾಗುವುದರಿಂದ ತಾಪಮಾನ ಹೆಚ್ಚುತ್ತದೆ. ಪೂರ್ವದಿಂದ ಪಶ್ಚಿಮಕ್ಕೆ ಚಲಿಸುವ ಮಾರುತಗಳಲ್ಲಿ ವಾಯುಭಾರ ಕುಸಿತ ಉಂಟಾದಾಗ ಉಷ್ಣಾಂಶವು ಇಳಿಕೆಯಾಗುವ ಸಾಧ್ಯತೆಯಿದೆ’ ಎಂದು ಹೇಳಿದರು.<br /> <br /> ಏಪ್ರಿಲ್ ಮಧ್ಯಭಾಗದಲ್ಲಿ ಹೆಚ್ಚಾಗುವ ಸಾಧ್ಯತೆ: ‘ಏಪ್ರಿಲ್ ತಿಂಗಳಿನ ಮಧ್ಯಭಾಗದಲ್ಲಿ ಉತ್ತರ ಕರ್ನಾಟಕದ ಬೀದರ್, ಯಾದಗಿರಿ, ಗುಲ್ಬರ್ಗ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ಉಷ್ಣಮಾರುತದ ಪ್ರಭಾವ ಹೆಚ್ಚಾಗಬಹುದು’ ಎಂದು ಅವರು ಎಚ್ಚರಿಸಿದರು.<br /> <br /> ‘ಸಾಮಾನ್ಯವಾಗಿ ಈ ಭಾಗಗಳಲ್ಲಿ ಸರಾಸರಿ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್. ಆದರೆ, ಇದಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾದಾಗ ಉಷ್ಣಗಾಳಿ ಬೀಸುತ್ತದೆ. ಅತಿಯಾದ ಬಿಸಿಗಾಳಿ ಬೀಸುವುದರಿಂದ ಸಾವು–ನೋವುಗಳಾಗಬಹುದು’ ಎಂದು ವಿಶ್ಲೇಷಿಸಿದರು.<br /> <br /> ‘ಪ್ರತಿ ಬಾರಿಯೂ ಉಷ್ಣ ಮಾರುತಗಳ ಪ್ರಭಾವವಿರುತ್ತದೆ. ಈ ಸಂದರ್ಭಗಳಲ್ಲಿ ಇಲಾಖೆಯು ಮುನ್ನಚ್ಚರಿಕೆಯ ಕ್ರಮಗಳನ್ನು ಅನುಸರಿಸುವಂತೆ ಸೂಚಿಸುತ್ತದೆ. ಈ ಬಾರಿ ಬೀಸುವ ಉಷ್ಣಾಂಶದ ಗಾಳಿ ಕಳೆದ ಬಾರಿಗಿಂತಲೂ ಪ್ರಭಾವಶಾಲಿ ಯಾಗಿರಲಿದೆ’ ಎಂದು ತಿಳಿಸಿದರು.<br /> <br /> ಬಿಸಿಲು ಕಾದರೆ ಮಾತ್ರ ಉತ್ತಮ ಮಳೆ: ‘ಈಗ ಉಷ್ಣಾಂಶದಲ್ಲಿ ಏರಿಕೆಯಾಗಿದ್ದರೂ, ಇದು ಅನೈಸರ್ಗಿಕವಲ್ಲ. ಹತ್ತು ವರ್ಷಗಳಿಂದೀಚೆಗೆ ತಾಪಮಾನದಲ್ಲಿ ಸತತ ಏರಿಕೆ ಕಂಡುಬಂದಿದೆ. ಬೇಸಿಗೆಯಲ್ಲಿ ಭೂಮಿ ಚೆನ್ನಾಗಿ ಕಾದರೆ ಮಾತ್ರ ಉತ್ತಮ ಮಳೆಯನ್ನು ನಿರೀಕ್ಷಿಸಬಹುದು. ಬಿಸಿಲ ಝಳಕ್ಕೂ, ಉತ್ತಮ ಮಳೆಗೂ ಸಂಬಂಧವಿದೆ’ ಎಂದರು.<br /> <br /> ಕಡಿಮೆಗೊಳ್ಳಲಿದೆ ಬಿಸಿಲ ಧಗೆ: ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಬಿ.ರಾಜೇಗೌಡ, ‘ಬೇಸಿಗೆ ಮಳೆಯು ಅವಧಿಗೆ ಮುನ್ನವೇ ಬಂದಿರುವುದರಿಂದ ಏರುತ್ತಿರುವ ಬಿಸಿಲಿನ ಕಾವು ಕುಸಿಯುವ ಸಾಧ್ಯತೆಯಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಸಾಮಾನ್ಯವಾಗಿ ಮಾರ್ಚ್ 15 ರಿಂದ ಮೇ ತಿಂಗಳ ಕೊನೆಯವರೆಗೆ ಬೇಸಿಗೆ ಮಳೆಯ (ಪೂರ್ವ ಮುಂಗಾರು) ಅವಧಿ ಎಂದು ಪರಿಗಣಿಸಲಾಗುತ್ತದೆ. ಆದರೆ, ಈ ಬಾರಿ ಫೆಬ್ರುವರಿ ಕೊನೆಯ ವಾರದಲ್ಲಿಯೇ ಬೇಸಿಗೆ ಮಳೆ ಆರಂಭಗೊಂಡಿರುವುದರಿಂದ ವಾತಾವರಣದಲ್ಲಿ ಉಷ್ಣಾಂಶ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಉತ್ತರ ಕರ್ನಾಟಕ ಭಾಗ ಕಾದ ಬಾಣಲೆಯಂತಾಗುವುದು ಸಹಜ. ಆದರೆ, ಈ ವರ್ಷ ಮಾರ್ಚ್ ತಿಂಗಳಿನಲ್ಲೇ ರಾಜಧಾನಿ ಹಾಗೂ ಕರಾವಳಿಯಲ್ಲಿ ಕೆಂಡದಂತಹ ಬಿಸಿಲು ಕಾಣಿಸಿಕೊಂಡಿದೆ.<br /> <br /> ಸಾಮಾನ್ಯವಾಗಿ ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬಿಸಿಲಿನ ತಾಪ ಹೆಚ್ಚುತ್ತದೆ. ಆದರೆ, ಈ ಬಾರಿ ಮಾರ್ಚ್ ಮೊದಲನೇ ವಾರದಿಂದಲೇ ಏರುತ್ತಿರುವ ಬಿಸಿಲಿನ ಕಾವು ಸರಾಸರಿ ಉಷ್ಣಾಂಶವನ್ನೇ ಮೀರಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.<br /> <br /> ಈ ಬಗ್ಗೆ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಹವಾಮಾನ ಇಲಾಖೆ ನಿರ್ದೇಶಕ ಬಿ.ಪುಟ್ಟಣ್ಣ, ‘ಪ್ರಾಕೃತಿಕ ಅಸಮತೋಲನದಿಂದಾಗಿ ಬೇಸಿಗೆಯ ತಾಪಮಾನ ಈ ಬಾರಿ ಹೆಚ್ಚಾಗಿದ್ದು, ಮಹಾನಗರಗಳಲ್ಲಿ ಸರಾಸರಿಗಿಂತಲೂ ಹೆಚ್ಚಿನ ಉಷ್ಣಾಂಶ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಉಷ್ಣಾಂಶ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ’ ಎಂದು ಮಾಹಿತಿ ನೀಡಿದರು.<br /> <br /> ‘ಭೂಮಟ್ಟದಿಂದಲೇ ಉಷ್ಣಾಂಶ ಏರಿಕೆಯಾಗುವುದರಿಂದ ತಾಪಮಾನ ಹೆಚ್ಚುತ್ತದೆ. ಪೂರ್ವದಿಂದ ಪಶ್ಚಿಮಕ್ಕೆ ಚಲಿಸುವ ಮಾರುತಗಳಲ್ಲಿ ವಾಯುಭಾರ ಕುಸಿತ ಉಂಟಾದಾಗ ಉಷ್ಣಾಂಶವು ಇಳಿಕೆಯಾಗುವ ಸಾಧ್ಯತೆಯಿದೆ’ ಎಂದು ಹೇಳಿದರು.<br /> <br /> ಏಪ್ರಿಲ್ ಮಧ್ಯಭಾಗದಲ್ಲಿ ಹೆಚ್ಚಾಗುವ ಸಾಧ್ಯತೆ: ‘ಏಪ್ರಿಲ್ ತಿಂಗಳಿನ ಮಧ್ಯಭಾಗದಲ್ಲಿ ಉತ್ತರ ಕರ್ನಾಟಕದ ಬೀದರ್, ಯಾದಗಿರಿ, ಗುಲ್ಬರ್ಗ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ಉಷ್ಣಮಾರುತದ ಪ್ರಭಾವ ಹೆಚ್ಚಾಗಬಹುದು’ ಎಂದು ಅವರು ಎಚ್ಚರಿಸಿದರು.<br /> <br /> ‘ಸಾಮಾನ್ಯವಾಗಿ ಈ ಭಾಗಗಳಲ್ಲಿ ಸರಾಸರಿ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್. ಆದರೆ, ಇದಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾದಾಗ ಉಷ್ಣಗಾಳಿ ಬೀಸುತ್ತದೆ. ಅತಿಯಾದ ಬಿಸಿಗಾಳಿ ಬೀಸುವುದರಿಂದ ಸಾವು–ನೋವುಗಳಾಗಬಹುದು’ ಎಂದು ವಿಶ್ಲೇಷಿಸಿದರು.<br /> <br /> ‘ಪ್ರತಿ ಬಾರಿಯೂ ಉಷ್ಣ ಮಾರುತಗಳ ಪ್ರಭಾವವಿರುತ್ತದೆ. ಈ ಸಂದರ್ಭಗಳಲ್ಲಿ ಇಲಾಖೆಯು ಮುನ್ನಚ್ಚರಿಕೆಯ ಕ್ರಮಗಳನ್ನು ಅನುಸರಿಸುವಂತೆ ಸೂಚಿಸುತ್ತದೆ. ಈ ಬಾರಿ ಬೀಸುವ ಉಷ್ಣಾಂಶದ ಗಾಳಿ ಕಳೆದ ಬಾರಿಗಿಂತಲೂ ಪ್ರಭಾವಶಾಲಿ ಯಾಗಿರಲಿದೆ’ ಎಂದು ತಿಳಿಸಿದರು.<br /> <br /> ಬಿಸಿಲು ಕಾದರೆ ಮಾತ್ರ ಉತ್ತಮ ಮಳೆ: ‘ಈಗ ಉಷ್ಣಾಂಶದಲ್ಲಿ ಏರಿಕೆಯಾಗಿದ್ದರೂ, ಇದು ಅನೈಸರ್ಗಿಕವಲ್ಲ. ಹತ್ತು ವರ್ಷಗಳಿಂದೀಚೆಗೆ ತಾಪಮಾನದಲ್ಲಿ ಸತತ ಏರಿಕೆ ಕಂಡುಬಂದಿದೆ. ಬೇಸಿಗೆಯಲ್ಲಿ ಭೂಮಿ ಚೆನ್ನಾಗಿ ಕಾದರೆ ಮಾತ್ರ ಉತ್ತಮ ಮಳೆಯನ್ನು ನಿರೀಕ್ಷಿಸಬಹುದು. ಬಿಸಿಲ ಝಳಕ್ಕೂ, ಉತ್ತಮ ಮಳೆಗೂ ಸಂಬಂಧವಿದೆ’ ಎಂದರು.<br /> <br /> ಕಡಿಮೆಗೊಳ್ಳಲಿದೆ ಬಿಸಿಲ ಧಗೆ: ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಬಿ.ರಾಜೇಗೌಡ, ‘ಬೇಸಿಗೆ ಮಳೆಯು ಅವಧಿಗೆ ಮುನ್ನವೇ ಬಂದಿರುವುದರಿಂದ ಏರುತ್ತಿರುವ ಬಿಸಿಲಿನ ಕಾವು ಕುಸಿಯುವ ಸಾಧ್ಯತೆಯಿದೆ’ ಎಂದು ಅಭಿಪ್ರಾಯಪಟ್ಟರು.<br /> <br /> ‘ಸಾಮಾನ್ಯವಾಗಿ ಮಾರ್ಚ್ 15 ರಿಂದ ಮೇ ತಿಂಗಳ ಕೊನೆಯವರೆಗೆ ಬೇಸಿಗೆ ಮಳೆಯ (ಪೂರ್ವ ಮುಂಗಾರು) ಅವಧಿ ಎಂದು ಪರಿಗಣಿಸಲಾಗುತ್ತದೆ. ಆದರೆ, ಈ ಬಾರಿ ಫೆಬ್ರುವರಿ ಕೊನೆಯ ವಾರದಲ್ಲಿಯೇ ಬೇಸಿಗೆ ಮಳೆ ಆರಂಭಗೊಂಡಿರುವುದರಿಂದ ವಾತಾವರಣದಲ್ಲಿ ಉಷ್ಣಾಂಶ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>