<p><strong>ಹುಬ್ಬಳ್ಳಿ: </strong>ಒಂದೆಡೆ ಭೀಕರ ಬರದ ಛಾಯೆ, ಇನ್ನೊಂದೆಡೆ ದಿನೇ ದಿನೇ ತೀವ್ರಗತಿಯಲ್ಲಿ ಏರುತ್ತಿರುವ ಉಷ್ಣಾಂಶ ಉತ್ತರ ಕರ್ನಾಟಕ ಭಾಗದ ಜನತೆಯ ನಿತ್ಯದ ಬದುಕನ್ನು ಹೈರಾಣಾಗಿಸಿದೆ.<br /> <br /> ಕಳೆದ ವರ್ಷಕ್ಕೆ ಹೋಲಿಸಿದರೆ ಉಷ್ಣಾಂಶ ಸರಾಸರಿ 2.5 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿಯವರೆಗೆ ಹೆಚ್ಚಳಗೊಂಡಿದೆ ಎಂದು ಹವಾಮಾನ ಇಲಾಖೆ ವರದಿಗಳು ಹೇಳುತ್ತಿವೆ. ಬಿಸಿಲ ತಾಪಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕೆರೆ-ಕೊಳ್ಳಗಳು ಬತ್ತಿಹೋಗಿವೆ. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. <br /> <br /> ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಏಪ್ರಿಲ್ 9ರಂದು ಧಾರವಾಡದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಗುಲ್ಬರ್ಗದಲ್ಲಿ ಅತಿ ಹೆಚ್ಚು 41.3 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 41.0 ಹಾಗೂ ಬೀದರ್ನಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. <br /> <br /> ಕಚೇರಿ ವೇಳೆ ಬದಲಾವಣೆ: ಬಿಜಾಪುರ, ಬಾಗಲಕೋಟೆ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ಬಿಸಿಲ ಬೇಗೆಯ ಹಿನ್ನೆಲೆಯಲ್ಲಿ ಏ.1 ರಿಂದ ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲಾಯಿಸಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಿಸಿಲ ಝಳ ಹೆಚ್ಚಳಗೊಂಡಂತೆ ದನಗಳಲ್ಲಿ ಕಾಲುಬಾಯಿ ಬೇನೆ ಕೂಡ ತೀವ್ರಗೊಳ್ಳುತ್ತಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಒಂದೆಡೆ ಭೀಕರ ಬರದ ಛಾಯೆ, ಇನ್ನೊಂದೆಡೆ ದಿನೇ ದಿನೇ ತೀವ್ರಗತಿಯಲ್ಲಿ ಏರುತ್ತಿರುವ ಉಷ್ಣಾಂಶ ಉತ್ತರ ಕರ್ನಾಟಕ ಭಾಗದ ಜನತೆಯ ನಿತ್ಯದ ಬದುಕನ್ನು ಹೈರಾಣಾಗಿಸಿದೆ.<br /> <br /> ಕಳೆದ ವರ್ಷಕ್ಕೆ ಹೋಲಿಸಿದರೆ ಉಷ್ಣಾಂಶ ಸರಾಸರಿ 2.5 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿಯವರೆಗೆ ಹೆಚ್ಚಳಗೊಂಡಿದೆ ಎಂದು ಹವಾಮಾನ ಇಲಾಖೆ ವರದಿಗಳು ಹೇಳುತ್ತಿವೆ. ಬಿಸಿಲ ತಾಪಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕೆರೆ-ಕೊಳ್ಳಗಳು ಬತ್ತಿಹೋಗಿವೆ. ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. <br /> <br /> ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಏಪ್ರಿಲ್ 9ರಂದು ಧಾರವಾಡದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಗುಲ್ಬರ್ಗದಲ್ಲಿ ಅತಿ ಹೆಚ್ಚು 41.3 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 41.0 ಹಾಗೂ ಬೀದರ್ನಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. <br /> <br /> ಕಚೇರಿ ವೇಳೆ ಬದಲಾವಣೆ: ಬಿಜಾಪುರ, ಬಾಗಲಕೋಟೆ ಹಾಗೂ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ಬಿಸಿಲ ಬೇಗೆಯ ಹಿನ್ನೆಲೆಯಲ್ಲಿ ಏ.1 ರಿಂದ ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲಾಯಿಸಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರ ವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಿಸಿಲ ಝಳ ಹೆಚ್ಚಳಗೊಂಡಂತೆ ದನಗಳಲ್ಲಿ ಕಾಲುಬಾಯಿ ಬೇನೆ ಕೂಡ ತೀವ್ರಗೊಳ್ಳುತ್ತಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>