<p>ಬಾಗಲಕೋಟೆ: ವಿಜಾಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಕೂಡಗಿಯಲ್ಲಿ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ ಕೈಬಿಡದಿದ್ದರೆ ಮುಂಬರುವ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ಉಪ ನಾಯಕ ಎಸ್.ಆರ್. ಪಾಟೀಲ ಎಚ್ಚರಿಕೆ ನೀಡಿದ್ದಾರೆ.<br /> <br /> ನೆಲ-ಜಲ-ಪರಿಸರ ರಕ್ಷಣೆಗಾಗಿ ಬಾಪೂಜಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಬಸವನ ಬಾಗೇವಾಡಿಯಿಂದ ಶನಿವಾರ `ಜನಜಾಗೃತಿ ನಡಿಗೆ~ ಆರಂಭಿಸಿ, ಭಾನುವಾರ ಮಧ್ಯಾಹ್ನ ಮನಹಳ್ಳಿಗೆ ಆಗಮಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಉಷ್ಣ ವಿದ್ಯುತ್ ಸ್ಥಾವರದಿಂದ ಹೊರಸೂಸುವ ಹಾರುಬೂದಿಯಿಂದ ಪರಿಸರಕ್ಕೆ ತೀವ್ರ ಹಾನಿಯಾಗುವುದಲ್ಲದೇ ಅವಳಿ ಜಿಲ್ಲೆಯ ಕೃಷಿ ಚಟುವಟಿಕೆಗಳು ಹಾಗೂ ಜಗತ್ಪ್ರಸಿದ್ಧ ಐತಿಹಾಸಿಕ ಪ್ರವಾಸಿತಾಣಗಳಿಗೆ ಧಕ್ಕೆಯಾಗಲಿರುವುದರಿಂದ ಸರ್ಕಾರ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.<br /> <br /> ಬಸವಣ್ಣನ ಜನ್ಮಸ್ಥಳ ಬಸವನಬಾಗೇವಾಡಿ, ಐಕ್ಯಸ್ಥಳ ಕೂಡಲಸಂಗಮ, ಜಗತ್ಪ್ರಸಿದ್ಧ ಗುಮ್ಮಟಗಳು ಕೂಡಗಿ ಗ್ರಾಮದಿಂದ 25 ಕಿ.ಮೀ. ವ್ಯಾಪ್ತಿಯಲ್ಲಿದ್ದು, ಸ್ಥಾವರ ಸ್ಥಾಪನೆಯಿಂದ ಇವುಗಳ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ ಎಂದು ಅವರು ವಿವರಿಸಿದರು.<br /> <strong><br /> ನೀರು ಕಬಳಿಕೆ</strong><br /> ರೈತರ ಹೊಲಗಳಿಗೆ ನೀರು ಹರಿಸಲು ಹಾಗೂ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯ ನಿರ್ಮಿಸಲಾಗಿದೆ. ಆದರೆ ಈ ಜಲಾಶಯಗಳ ಸುತ್ತಮುತ್ತ ಬೃಹತ್ ಕೈಗಾರಿಕೆ ಆರಂಭಿಸುವ ಮೂಲಕ ರೈತರ ನೀರು ಕಬಳಿಸುವ ಹುನ್ನಾರ ನಡೆದಿದೆ ಎಂದು ಎಸ್.ಆರ್. ಪಾಟೀಲ ಆರೋಪಿಸಿದರು.<br /> <br /> ಬೃಹತ್ ಕೈಗಾರಿಗಳನ್ನು ಸ್ಥಾಪಿಸಿ ಅವುಗಳಿಗೆ ನೀರು ನೀಡಿದರೆ ನೀರಾವರಿ ನೆಚ್ಚಿಕೊಂಡಿರುವ ಲಕ್ಷಾಂತರ ರೈತರ ಪಾಡೇನು ಎಂದು ಪ್ರಶ್ನಿಸಿದರು.<br /> <br /> ಸ್ವಾಧೀನಪಡಿಸಿಕೊಂಡ ರೈತರ ಜಮೀನುಗಳಿಗೆ ಅತೀ ಕಡಿಮೆ ಪರಿಹಾರ ನೀಡುವ ಮೂಲಕ ವಂಚನೆ ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡ ಪ್ರತಿ ಎಕರೆ ಜಮೀನಿಗೆ 22 ಲಕ್ಷ ನೀಡಿದರೆ ಅವಳಿಜಿಲ್ಲೆಯ ಫಲವತ್ತಾದ ಜಮೀನುಗಳಿಗೆ ಅತೀ ಕಡಿಮೆ ಪರಿಹಾರ ನಿಗದಿಪಡಿಸಲಾಗುತ್ತಿದೆ. ಇದರ ಬಗ್ಗೆ ರೈತರು ಜಾಗೃತರಾಗಬೇಕು ಎಂದು ಮನವಿ ಮಾಡಿಕೊಂಡರು.<br /> <br /> <strong>ಕಾಂಗ್ರೆಸ್ ಬೆಂಬಲ-ವಿಶ್ವಾಸ</strong><br /> ಅವಳಿಜಿಲ್ಲೆಯ ನೆಲ-ಜಲ-ಪರಿಸರ ರಕ್ಷಣೆ ಉದ್ದೇಶದಿಂದ ಪಕ್ಷಾತೀತವಾದ ಹೋರಾಟ ನಡೆಸಲಾಗುತ್ತಿದೆ. ಇದು ಜನಪರ ಹಾಗೂ ರೈತಪರ ಹೋರಾಟ ಆಗಿರುವುದರಿಂದ ಮುಂದಿನ ಹಂತದಲ್ಲಿ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ `ಕೈ~ಜೋಡಿಸಬಹುದು ಎಂದು ಎಸ್.ಆರ್.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸದನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದು ಹೇಳಿದ ಅವರು, ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಕೂಡ ಬದಲಾಗಲಿದೆ ಎಂದರು.<br /> <br /> ಮಾಜಿ ಸಚಿವರಾದ ಅಜಯಕುಮಾರ ಸರನಾಯಕ, ಎಚ್.ವೈ. ಮೇಟಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಜಿಪಂ ಸದಸ್ಯ ಬಸವರಾಜ ಮೇಟಿ ಸೇರಿದಂತೆ ನೂರಾರು ಜನರು ಕಾಲ್ನಡಿಗೆಯಲ್ಲಿ ಪಾಲ್ಗೊಂಡಿದ್ದರು.<br /> <br /> ಭಾನುವಾರ ಮಧ್ಯಾಹ್ನ ಮನಹಳ್ಳಿಯಲ್ಲಿ ಕೆಲಕಾಲ ತಂಗಿದ ಪಾದಯಾತ್ರಿಗಳು ರಾತ್ರಿ ನಾಯನೇಗಲಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದರು.<br /> <br /> ಸೋಮವಾರ ಮಧ್ಯಾಹ್ನ ಕೂಡಲಸಂಗಮದಲ್ಲಿ `ಜನಜಾಗೃತಿ ಕಾಲ್ನಡಿಗೆ~ ಸಮಾರೋಪಗೊಳ್ಳಲಿದೆ ಎಂದು ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ವಿಜಾಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಕೂಡಗಿಯಲ್ಲಿ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ ಕೈಬಿಡದಿದ್ದರೆ ಮುಂಬರುವ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷದ ಉಪ ನಾಯಕ ಎಸ್.ಆರ್. ಪಾಟೀಲ ಎಚ್ಚರಿಕೆ ನೀಡಿದ್ದಾರೆ.<br /> <br /> ನೆಲ-ಜಲ-ಪರಿಸರ ರಕ್ಷಣೆಗಾಗಿ ಬಾಪೂಜಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಬಸವನ ಬಾಗೇವಾಡಿಯಿಂದ ಶನಿವಾರ `ಜನಜಾಗೃತಿ ನಡಿಗೆ~ ಆರಂಭಿಸಿ, ಭಾನುವಾರ ಮಧ್ಯಾಹ್ನ ಮನಹಳ್ಳಿಗೆ ಆಗಮಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಉಷ್ಣ ವಿದ್ಯುತ್ ಸ್ಥಾವರದಿಂದ ಹೊರಸೂಸುವ ಹಾರುಬೂದಿಯಿಂದ ಪರಿಸರಕ್ಕೆ ತೀವ್ರ ಹಾನಿಯಾಗುವುದಲ್ಲದೇ ಅವಳಿ ಜಿಲ್ಲೆಯ ಕೃಷಿ ಚಟುವಟಿಕೆಗಳು ಹಾಗೂ ಜಗತ್ಪ್ರಸಿದ್ಧ ಐತಿಹಾಸಿಕ ಪ್ರವಾಸಿತಾಣಗಳಿಗೆ ಧಕ್ಕೆಯಾಗಲಿರುವುದರಿಂದ ಸರ್ಕಾರ ಈ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.<br /> <br /> ಬಸವಣ್ಣನ ಜನ್ಮಸ್ಥಳ ಬಸವನಬಾಗೇವಾಡಿ, ಐಕ್ಯಸ್ಥಳ ಕೂಡಲಸಂಗಮ, ಜಗತ್ಪ್ರಸಿದ್ಧ ಗುಮ್ಮಟಗಳು ಕೂಡಗಿ ಗ್ರಾಮದಿಂದ 25 ಕಿ.ಮೀ. ವ್ಯಾಪ್ತಿಯಲ್ಲಿದ್ದು, ಸ್ಥಾವರ ಸ್ಥಾಪನೆಯಿಂದ ಇವುಗಳ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ ಎಂದು ಅವರು ವಿವರಿಸಿದರು.<br /> <strong><br /> ನೀರು ಕಬಳಿಕೆ</strong><br /> ರೈತರ ಹೊಲಗಳಿಗೆ ನೀರು ಹರಿಸಲು ಹಾಗೂ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯ ನಿರ್ಮಿಸಲಾಗಿದೆ. ಆದರೆ ಈ ಜಲಾಶಯಗಳ ಸುತ್ತಮುತ್ತ ಬೃಹತ್ ಕೈಗಾರಿಕೆ ಆರಂಭಿಸುವ ಮೂಲಕ ರೈತರ ನೀರು ಕಬಳಿಸುವ ಹುನ್ನಾರ ನಡೆದಿದೆ ಎಂದು ಎಸ್.ಆರ್. ಪಾಟೀಲ ಆರೋಪಿಸಿದರು.<br /> <br /> ಬೃಹತ್ ಕೈಗಾರಿಗಳನ್ನು ಸ್ಥಾಪಿಸಿ ಅವುಗಳಿಗೆ ನೀರು ನೀಡಿದರೆ ನೀರಾವರಿ ನೆಚ್ಚಿಕೊಂಡಿರುವ ಲಕ್ಷಾಂತರ ರೈತರ ಪಾಡೇನು ಎಂದು ಪ್ರಶ್ನಿಸಿದರು.<br /> <br /> ಸ್ವಾಧೀನಪಡಿಸಿಕೊಂಡ ರೈತರ ಜಮೀನುಗಳಿಗೆ ಅತೀ ಕಡಿಮೆ ಪರಿಹಾರ ನೀಡುವ ಮೂಲಕ ವಂಚನೆ ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡ ಪ್ರತಿ ಎಕರೆ ಜಮೀನಿಗೆ 22 ಲಕ್ಷ ನೀಡಿದರೆ ಅವಳಿಜಿಲ್ಲೆಯ ಫಲವತ್ತಾದ ಜಮೀನುಗಳಿಗೆ ಅತೀ ಕಡಿಮೆ ಪರಿಹಾರ ನಿಗದಿಪಡಿಸಲಾಗುತ್ತಿದೆ. ಇದರ ಬಗ್ಗೆ ರೈತರು ಜಾಗೃತರಾಗಬೇಕು ಎಂದು ಮನವಿ ಮಾಡಿಕೊಂಡರು.<br /> <br /> <strong>ಕಾಂಗ್ರೆಸ್ ಬೆಂಬಲ-ವಿಶ್ವಾಸ</strong><br /> ಅವಳಿಜಿಲ್ಲೆಯ ನೆಲ-ಜಲ-ಪರಿಸರ ರಕ್ಷಣೆ ಉದ್ದೇಶದಿಂದ ಪಕ್ಷಾತೀತವಾದ ಹೋರಾಟ ನಡೆಸಲಾಗುತ್ತಿದೆ. ಇದು ಜನಪರ ಹಾಗೂ ರೈತಪರ ಹೋರಾಟ ಆಗಿರುವುದರಿಂದ ಮುಂದಿನ ಹಂತದಲ್ಲಿ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ `ಕೈ~ಜೋಡಿಸಬಹುದು ಎಂದು ಎಸ್.ಆರ್.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸದನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದು ಹೇಳಿದ ಅವರು, ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಕೂಡ ಬದಲಾಗಲಿದೆ ಎಂದರು.<br /> <br /> ಮಾಜಿ ಸಚಿವರಾದ ಅಜಯಕುಮಾರ ಸರನಾಯಕ, ಎಚ್.ವೈ. ಮೇಟಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಜಿಪಂ ಸದಸ್ಯ ಬಸವರಾಜ ಮೇಟಿ ಸೇರಿದಂತೆ ನೂರಾರು ಜನರು ಕಾಲ್ನಡಿಗೆಯಲ್ಲಿ ಪಾಲ್ಗೊಂಡಿದ್ದರು.<br /> <br /> ಭಾನುವಾರ ಮಧ್ಯಾಹ್ನ ಮನಹಳ್ಳಿಯಲ್ಲಿ ಕೆಲಕಾಲ ತಂಗಿದ ಪಾದಯಾತ್ರಿಗಳು ರಾತ್ರಿ ನಾಯನೇಗಲಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದರು.<br /> <br /> ಸೋಮವಾರ ಮಧ್ಯಾಹ್ನ ಕೂಡಲಸಂಗಮದಲ್ಲಿ `ಜನಜಾಗೃತಿ ಕಾಲ್ನಡಿಗೆ~ ಸಮಾರೋಪಗೊಳ್ಳಲಿದೆ ಎಂದು ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>