<p><strong>ತಿಪಟೂರು: </strong>ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ ತಾಲ್ಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಶಾಲೆಯ 200ಕ್ಕೂ ಹೆಚ್ಚು ಮಕ್ಕಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಘಟನೆ ಶನಿವಾರ ನಡೆದಿದೆ.<br /> <br /> ಕಾಡಸಿದ್ದೇಶ್ವರ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಊಟ ಸೇವಿಸುವಾಗ ಒಬ್ಬ ವಿದ್ಯಾರ್ಥಿಗೆ ಹಲ್ಲಿ ಸಿಕ್ಕಿದ್ದರಿಂದ ಆತನೊಂದಿಗೆ ಐದಾರು ಮಕ್ಕಳಿಗೆ ವಾಂತಿ ಕಾಣಿಸಿಕೊಂಡಿತು. ಇದರಿಂದ ಘಾಸಿಗೊಂಡ ಇತರ ಮಕ್ಕಳೂ ಅಸ್ವಸ್ಥ ಮನಸ್ಥಿತಿ ತಲುಪಿದರು.<br /> <br /> ಕೂಡಲೇ ಎಲ್ಲರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಯಿಸಲಾಯಿತು. ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂಬ ಸುದ್ದಿ ತಿಳಿದು ಗಾಬರಿಗೊಂಡ ಪೋಷಕರು ಆಸ್ಪತ್ರೆಗೆ ದೌಡಾಯಿಸಿದರು. ಸಂಜೆ ವೇಳೆಗೆ ಎಲ್ಲ ಮಕ್ಕಳನ್ನು ಆಸ್ಪತ್ರೆಯಿಂದ ಕಳುಹಿಸಲಾಯಿತು. <br /> <br /> <strong>ಆರೋಪ: </strong>ಹಲ್ಲಿ ಸಿಕ್ಕಿದ್ದನ್ನು ತೋರಿಸಿದ ಬಾಲಕನಿಗೆ ಶಾಲೆಯ ಶಿಕ್ಷಕರೊಬ್ಬರು ಹೊಡೆದಿದ್ದಲ್ಲದೆ ವಿಷಯ ಬಹಿರಂಗ ಪಡಿಸದಂತೆ ಒತ್ತಡ ಹಾಕಿದರು. ಐದಾರು ಮಕ್ಕಳು ವಾಂತಿ ಮಾಡಿಕೊಳ್ಳುತ್ತಿದ್ದರೂ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಧಾವಂತ ತೋರದೆ ಶಿಕ್ಷಕರು ನಿರ್ಲಕ್ಷ್ಯ ವಹಿಸಿದ್ದರು ಎಂದು ಹಲವು ಪೋಷಕರು ಆಸ್ಪತ್ರೆಯಲ್ಲಿ ದೂರಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ ತಾಲ್ಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಶಾಲೆಯ 200ಕ್ಕೂ ಹೆಚ್ಚು ಮಕ್ಕಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಘಟನೆ ಶನಿವಾರ ನಡೆದಿದೆ.<br /> <br /> ಕಾಡಸಿದ್ದೇಶ್ವರ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಊಟ ಸೇವಿಸುವಾಗ ಒಬ್ಬ ವಿದ್ಯಾರ್ಥಿಗೆ ಹಲ್ಲಿ ಸಿಕ್ಕಿದ್ದರಿಂದ ಆತನೊಂದಿಗೆ ಐದಾರು ಮಕ್ಕಳಿಗೆ ವಾಂತಿ ಕಾಣಿಸಿಕೊಂಡಿತು. ಇದರಿಂದ ಘಾಸಿಗೊಂಡ ಇತರ ಮಕ್ಕಳೂ ಅಸ್ವಸ್ಥ ಮನಸ್ಥಿತಿ ತಲುಪಿದರು.<br /> <br /> ಕೂಡಲೇ ಎಲ್ಲರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಯಿಸಲಾಯಿತು. ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂಬ ಸುದ್ದಿ ತಿಳಿದು ಗಾಬರಿಗೊಂಡ ಪೋಷಕರು ಆಸ್ಪತ್ರೆಗೆ ದೌಡಾಯಿಸಿದರು. ಸಂಜೆ ವೇಳೆಗೆ ಎಲ್ಲ ಮಕ್ಕಳನ್ನು ಆಸ್ಪತ್ರೆಯಿಂದ ಕಳುಹಿಸಲಾಯಿತು. <br /> <br /> <strong>ಆರೋಪ: </strong>ಹಲ್ಲಿ ಸಿಕ್ಕಿದ್ದನ್ನು ತೋರಿಸಿದ ಬಾಲಕನಿಗೆ ಶಾಲೆಯ ಶಿಕ್ಷಕರೊಬ್ಬರು ಹೊಡೆದಿದ್ದಲ್ಲದೆ ವಿಷಯ ಬಹಿರಂಗ ಪಡಿಸದಂತೆ ಒತ್ತಡ ಹಾಕಿದರು. ಐದಾರು ಮಕ್ಕಳು ವಾಂತಿ ಮಾಡಿಕೊಳ್ಳುತ್ತಿದ್ದರೂ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಧಾವಂತ ತೋರದೆ ಶಿಕ್ಷಕರು ನಿರ್ಲಕ್ಷ್ಯ ವಹಿಸಿದ್ದರು ಎಂದು ಹಲವು ಪೋಷಕರು ಆಸ್ಪತ್ರೆಯಲ್ಲಿ ದೂರಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>