<p><strong>ರಾಮನಗರ :</strong> ಸಮಾಜದ ಅಭಿವೃದ್ಧಿಗೆ ಮಾರಕವಾಗಿರುವ ಜಾತಿ ಪದ್ಧತಿ ಸೇರಿದಂತೆ ಸಾಮಾಜಿಕ ಪಿಡುಗಗಳು ತೊಲಗಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಾಹಿತ್ಯವನ್ನು ರಚಿಸಬೇಕಾದ ಅವಶ್ಯಕತೆಯಿದೆ ಎಂದು ಕನ್ನಡ ವಿಷಯದ ಸಹ ಪ್ರಾಧ್ಯಾಪಕ ಜಿ.ಶಿವಣ್ಣ ತಿಳಿಸಿದರು. <br /> <br /> ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಾಹಿತ್ಯ ವೇದಿಕೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಧು ಪಬ್ಲಿಕೇಷನ್ಸ್ನ `ಋತುಮಾನದ ಹುಡುಗಿ~ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.<br /> <br /> ಸಮಾಜದಲ್ಲಿ ಜನರು ಶಾಂತಿ, ನೆಮ್ಮದಿ, ಸಮಾನತೆಯ ಜೀವನ ನಡೆಸಬೇಕಾದರೆ ಸಾಮಾಜಿಕ ಮೌಢ್ಯತೆಗಳು ಹಾಗೂ ಆಚಾರ, ವಿಚಾರಗಳನ್ನು ಧಿಕ್ಕರಿಸಿ ಮುನ್ನಡೆಯಬೇಕು. ಪ್ರಶ್ನೆ ಮಾಡದೇ ಯಾವುದೇ ವಿಚಾರವನ್ನು ಒಪ್ಪಿಕೊಳ್ಳಬಾರದು. <br /> <br /> ವಿಶ್ವಕ್ಕೆ ಮಾದರಿಯಾದ ಸಂಸ್ಕೃತಿಯನ್ನು ಹೊಂದಿರುವ ಭಾರತೀಯರು ಬೆಳೆದು ದೊಡ್ಡವರಾದಂತೆಲ್ಲಾ ವಿಶ್ವಮಾನವರಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದ ಆಶಯದಂತೆ ಜೀವನ ನಡೆಸದೇ ಸ್ವಾರ್ಥಿಗಳಾಗಿ ಬದುಕು ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಡಿ.ರಂಗಸ್ವಾಮಿಗೌಡ, ಪ್ರೊ.ಜಯಣ್ಣ, ಪ್ರೊ.ವಿ.ಎಚ್.ರಾಜಶೇಖರ್ ಮಾತನಾಡಿದರು. ಪ್ರಾಂಶುಪಾಲರಾದ ಪ್ರೊ. ಎಂ.ಎಸ್. ಮಹದೇವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಪ್ರೊ. ಎಲ್.ಸಿ.ರಾಜು, ವೀಣಾ, ಡಾ.ಸರ್ವಮಂಗಳ, ವೆಂಕಾಟಾಚಲಯ್ಯ, ಹೇಮಾವತಿ, ಸುಲೋಚನಾ, ಪ್ರಕಾಶಕ ಡಾ.ಅಂಕನಹಳ್ಳಿ ಪಾರ್ಥ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ :</strong> ಸಮಾಜದ ಅಭಿವೃದ್ಧಿಗೆ ಮಾರಕವಾಗಿರುವ ಜಾತಿ ಪದ್ಧತಿ ಸೇರಿದಂತೆ ಸಾಮಾಜಿಕ ಪಿಡುಗಗಳು ತೊಲಗಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಾಹಿತ್ಯವನ್ನು ರಚಿಸಬೇಕಾದ ಅವಶ್ಯಕತೆಯಿದೆ ಎಂದು ಕನ್ನಡ ವಿಷಯದ ಸಹ ಪ್ರಾಧ್ಯಾಪಕ ಜಿ.ಶಿವಣ್ಣ ತಿಳಿಸಿದರು. <br /> <br /> ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಾಹಿತ್ಯ ವೇದಿಕೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಧು ಪಬ್ಲಿಕೇಷನ್ಸ್ನ `ಋತುಮಾನದ ಹುಡುಗಿ~ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.<br /> <br /> ಸಮಾಜದಲ್ಲಿ ಜನರು ಶಾಂತಿ, ನೆಮ್ಮದಿ, ಸಮಾನತೆಯ ಜೀವನ ನಡೆಸಬೇಕಾದರೆ ಸಾಮಾಜಿಕ ಮೌಢ್ಯತೆಗಳು ಹಾಗೂ ಆಚಾರ, ವಿಚಾರಗಳನ್ನು ಧಿಕ್ಕರಿಸಿ ಮುನ್ನಡೆಯಬೇಕು. ಪ್ರಶ್ನೆ ಮಾಡದೇ ಯಾವುದೇ ವಿಚಾರವನ್ನು ಒಪ್ಪಿಕೊಳ್ಳಬಾರದು. <br /> <br /> ವಿಶ್ವಕ್ಕೆ ಮಾದರಿಯಾದ ಸಂಸ್ಕೃತಿಯನ್ನು ಹೊಂದಿರುವ ಭಾರತೀಯರು ಬೆಳೆದು ದೊಡ್ಡವರಾದಂತೆಲ್ಲಾ ವಿಶ್ವಮಾನವರಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದ ಆಶಯದಂತೆ ಜೀವನ ನಡೆಸದೇ ಸ್ವಾರ್ಥಿಗಳಾಗಿ ಬದುಕು ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಡಿ.ರಂಗಸ್ವಾಮಿಗೌಡ, ಪ್ರೊ.ಜಯಣ್ಣ, ಪ್ರೊ.ವಿ.ಎಚ್.ರಾಜಶೇಖರ್ ಮಾತನಾಡಿದರು. ಪ್ರಾಂಶುಪಾಲರಾದ ಪ್ರೊ. ಎಂ.ಎಸ್. ಮಹದೇವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಪ್ರೊ. ಎಲ್.ಸಿ.ರಾಜು, ವೀಣಾ, ಡಾ.ಸರ್ವಮಂಗಳ, ವೆಂಕಾಟಾಚಲಯ್ಯ, ಹೇಮಾವತಿ, ಸುಲೋಚನಾ, ಪ್ರಕಾಶಕ ಡಾ.ಅಂಕನಹಳ್ಳಿ ಪಾರ್ಥ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>