ಎಂ.ಎಸ್. ಸುಬ್ಬುಲಕ್ಷ್ಮಿ ಗೌರವಾರ್ಥ ವಿಶ್ವಸಂಸ್ಥೆಯಿಂದ ಅಂಚೆ ಚೀಟಿ

ವಿಶ್ವಸಂಸ್ಥೆ (ಪಿಟಿಐ): ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮ ಶತಮಾನೋತ್ಸವದ ಗೌರವಾರ್ಥ ವಿಶ್ವಸಂಸ್ಥೆಯು ವಿಶೇಷ ಅಂಚೆ ಚೀಟಿ ಹೊರ ತರಲಿದೆ.
ಭಾರತದ 70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಆಗಸ್ಟ್ 15ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ವಿಶ್ವಸಂಸ್ಥೆಯ ಅಂಚೆ ಆಡಳಿತ ವಿಭಾಗವು ಈ ಅಂಚೆ ಚೀಟಿಯನ್ನು ಪ್ರಕಟಿಸಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ.
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿರುವವರಲ್ಲಿ ರೆಹಮಾನ್ ಎರಡನೇ ಕಲಾವಿದರಾಗಿದ್ದಾರೆ.
ಈ ಮೊದಲು ಸುಬ್ಬುಲಕ್ಷ್ಮಿ ಅವರು ಸಂಗಿತ ಕಾರ್ಯಕ್ರಮ ನೀಡಿದ್ದರು.
ಸುಬ್ಬುಲಕ್ಷ್ಮಿ ಅವರು 1966ರಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದರು. ಈ ವರ್ಷ ಆ ಕಾರ್ಯಕ್ರಮ ನೀಡಿ 50 ವರ್ಷವಾಗುತ್ತದೆ. ಹೀಗಾಗಿ ಸುಬ್ಬುಲಕ್ಷ್ಮಿ ಅವರ ಜೀವನ ಮತ್ತು ಸಾಧನೆಯನ್ನು ಬಿಂಬಿಸುವ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.
ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಕಚೇರಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್ ಭಾಗವಹಿಸಲಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.