<p><strong>ಮುಂಡರಗಿ:</strong> `ಉನ್ನತ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ ಯುವಕ, ಯುವತಿಯರಿಗೆ ಇಂದು ಜಗತ್ತಿನಾದ್ಯಂತ ವಿಫುಲ ಉದ್ಯೋಗಾವಕಾಶಗಳಿವೆ ಎಂದು ಕವಿವಿಯ ಉದ್ಯೋಗ, ಮಾಹಿತಿ ಮತ್ತು ಮಾರ್ಗದರ್ಶನದ ಮುಖ್ಯಸ್ಥ ಡಾ.ಎಸ್.ವಿ.ಹಿತ್ತಲಮನಿ ತಿಳಿಸಿದರು.<br /> <br /> ಧಾರವಾಡದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಸ್ಥಳೀಯ ಕ.ರಾ.ಬೆಲ್ಲದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರಗಳು ಈಚೆಗೆ ಕ.ರಾ.ಬೆಲ್ಲದ ಕಾಲೇಜಿನಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ವೃತ್ತಿ ಸಾಹಿತ್ಯ ಪ್ರದರ್ಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> `ವಿದ್ಯಾಭ್ಯಾಸದ ನಂತರ ಯುವಕ ಯುವತಿಯರಿಗೆ ವೃತ್ತಿ ಕೌಶಲಕ್ಕೆ ಸಂಬಂಧಿಸಿದಂತೆ ಸ್ಪೋಕನ್ ಇಂಗ್ಲಿಷ್, ವ್ಯಕ್ತಿತ್ವ ವಿಕಸನ, ಸಂವಹನ ಕಲೆ ಕುರಿತಂತೆ ಉದ್ಯೋಗ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರ್ಯಾಗಾರ, ತರಬೇತಿ, ಮಾರ್ಗದರ್ಶನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾವಂತ ನಿರುದ್ಯೋಗಿಗಳು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಅವರು ಸಲಹೆ ನೀಡಿದರು.<br /> <br /> `ಉನ್ನತ ಶಿಕ್ಷಣ ಪಡೆದುಕೊಂಡಿರುವ ವಿದ್ಯಾವಂತ ಯುವಕ ಯುವತಿಯರು ತಮಗೆ ದೊರೆತ ಕೆಲಸವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ವಿವಿಧ ರಂಗಗಳಲ್ಲಿ ಸ್ವಉದ್ಯೋಗ ಪಡೆದುಕೊಂಡು ಜೀವನದಲ್ಲಿ ಮುಂದೆ ಬರಬೇಕು~ ಎಂದು ಸಾನ್ನಿಧ್ಯ ವಹಿಸಿದ್ದ ಡಾ.ಅನ್ನದಾನೀಶ್ವರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.<br /> <br /> `ಕೆಲಸದಲ್ಲಿ ನಿಷ್ಠೆ ಇರುವವರಿಗೆ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ವೃತಿ ಕೌಶಲವನ್ನು ಹೊಂದಿದವರಿಗೆ ಎಲ್ಲಿ ಬೇಕಾದರೂ ಕೆಲಸ ದೊರೆಯುತ್ತವೆ. ಪ್ರಸ್ತುತ ಇಂದು ಕೆಲಸ ಗಿಟ್ಟಿಸಿಕೊಳ್ಳಲು ಬೇಕಾಗುವ ಎಲ್ಲ ತರಬೇತಿಯನ್ನು ಯುವಕರು ಪಡೆದುಕೊಳ್ಳುವುದು ಉತ್ತಮ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಕಾರ್ಯ ಶ್ಲಾಘನೀಯ~ ಎಂದು ಅಧ್ಯಕ್ಷತೆ ವಹಿಸಿದ್ದ ಆರ್.ಬಿ.ಡಂಬಳಮಠ ತಿಳಿಸಿದರು.<br /> <br /> ಎ.ಕೆ. ಬೆಲ್ಲದ ಸಮಾರಂಭವನ್ನು ಉದ್ಘಾಟಿಸಿದರು. ಡಾ.ಎಸ್.ಪಿ.ಹಳ್ಳಾಳ ಮಾತನಾಡಿದರು. ಪ್ರಾಚಾರ್ಯ ಎಸ್.ಬಿ. ಕರಿಭರಮಗೌಡರ ಸ್ವಾಗತಿದರು. ಡಾ.ಎಂ.ಬಿ.ಬೆಳವಟಗಿಮಠ ನಿರೂಪಿಸಿದರು.<br /> <br /> ನಂತರ ಡಾ.ಎಸ್.ಪಿ.ಹಳ್ಳಾಳ `ವ್ಯಕ್ತಿತ್ವ ವಿಕಸನ~, ಪ್ರತಿಭಾ ಮಠ `ಸಂವಹನ ಕಲೆ, ರೆಜ್ಯೂಮ ರೈಟಿಂಗ್ ಮತ್ತು ಸಂದರ್ಶನ~, ಆರ್.ಬಿ.ವನಹಳ್ಳಿ `ವೃತ್ತಿ ಮಾರ್ಗದರ್ಶನ~ ಹಾಗೂ ಶ್ಯಾಮಲಾ ವೈದ್ಯ `ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ?~ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> `ಉನ್ನತ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ ಯುವಕ, ಯುವತಿಯರಿಗೆ ಇಂದು ಜಗತ್ತಿನಾದ್ಯಂತ ವಿಫುಲ ಉದ್ಯೋಗಾವಕಾಶಗಳಿವೆ ಎಂದು ಕವಿವಿಯ ಉದ್ಯೋಗ, ಮಾಹಿತಿ ಮತ್ತು ಮಾರ್ಗದರ್ಶನದ ಮುಖ್ಯಸ್ಥ ಡಾ.ಎಸ್.ವಿ.ಹಿತ್ತಲಮನಿ ತಿಳಿಸಿದರು.<br /> <br /> ಧಾರವಾಡದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಸ್ಥಳೀಯ ಕ.ರಾ.ಬೆಲ್ಲದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರಗಳು ಈಚೆಗೆ ಕ.ರಾ.ಬೆಲ್ಲದ ಕಾಲೇಜಿನಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ವೃತ್ತಿ ಸಾಹಿತ್ಯ ಪ್ರದರ್ಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> `ವಿದ್ಯಾಭ್ಯಾಸದ ನಂತರ ಯುವಕ ಯುವತಿಯರಿಗೆ ವೃತ್ತಿ ಕೌಶಲಕ್ಕೆ ಸಂಬಂಧಿಸಿದಂತೆ ಸ್ಪೋಕನ್ ಇಂಗ್ಲಿಷ್, ವ್ಯಕ್ತಿತ್ವ ವಿಕಸನ, ಸಂವಹನ ಕಲೆ ಕುರಿತಂತೆ ಉದ್ಯೋಗ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರ್ಯಾಗಾರ, ತರಬೇತಿ, ಮಾರ್ಗದರ್ಶನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾವಂತ ನಿರುದ್ಯೋಗಿಗಳು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಅವರು ಸಲಹೆ ನೀಡಿದರು.<br /> <br /> `ಉನ್ನತ ಶಿಕ್ಷಣ ಪಡೆದುಕೊಂಡಿರುವ ವಿದ್ಯಾವಂತ ಯುವಕ ಯುವತಿಯರು ತಮಗೆ ದೊರೆತ ಕೆಲಸವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ವಿವಿಧ ರಂಗಗಳಲ್ಲಿ ಸ್ವಉದ್ಯೋಗ ಪಡೆದುಕೊಂಡು ಜೀವನದಲ್ಲಿ ಮುಂದೆ ಬರಬೇಕು~ ಎಂದು ಸಾನ್ನಿಧ್ಯ ವಹಿಸಿದ್ದ ಡಾ.ಅನ್ನದಾನೀಶ್ವರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.<br /> <br /> `ಕೆಲಸದಲ್ಲಿ ನಿಷ್ಠೆ ಇರುವವರಿಗೆ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ವೃತಿ ಕೌಶಲವನ್ನು ಹೊಂದಿದವರಿಗೆ ಎಲ್ಲಿ ಬೇಕಾದರೂ ಕೆಲಸ ದೊರೆಯುತ್ತವೆ. ಪ್ರಸ್ತುತ ಇಂದು ಕೆಲಸ ಗಿಟ್ಟಿಸಿಕೊಳ್ಳಲು ಬೇಕಾಗುವ ಎಲ್ಲ ತರಬೇತಿಯನ್ನು ಯುವಕರು ಪಡೆದುಕೊಳ್ಳುವುದು ಉತ್ತಮ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಕಾರ್ಯ ಶ್ಲಾಘನೀಯ~ ಎಂದು ಅಧ್ಯಕ್ಷತೆ ವಹಿಸಿದ್ದ ಆರ್.ಬಿ.ಡಂಬಳಮಠ ತಿಳಿಸಿದರು.<br /> <br /> ಎ.ಕೆ. ಬೆಲ್ಲದ ಸಮಾರಂಭವನ್ನು ಉದ್ಘಾಟಿಸಿದರು. ಡಾ.ಎಸ್.ಪಿ.ಹಳ್ಳಾಳ ಮಾತನಾಡಿದರು. ಪ್ರಾಚಾರ್ಯ ಎಸ್.ಬಿ. ಕರಿಭರಮಗೌಡರ ಸ್ವಾಗತಿದರು. ಡಾ.ಎಂ.ಬಿ.ಬೆಳವಟಗಿಮಠ ನಿರೂಪಿಸಿದರು.<br /> <br /> ನಂತರ ಡಾ.ಎಸ್.ಪಿ.ಹಳ್ಳಾಳ `ವ್ಯಕ್ತಿತ್ವ ವಿಕಸನ~, ಪ್ರತಿಭಾ ಮಠ `ಸಂವಹನ ಕಲೆ, ರೆಜ್ಯೂಮ ರೈಟಿಂಗ್ ಮತ್ತು ಸಂದರ್ಶನ~, ಆರ್.ಬಿ.ವನಹಳ್ಳಿ `ವೃತ್ತಿ ಮಾರ್ಗದರ್ಶನ~ ಹಾಗೂ ಶ್ಯಾಮಲಾ ವೈದ್ಯ `ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ?~ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>