<p><strong>ಬೆಂಗಳೂರು: </strong>ನಗರದ ಮಡಿವಾಳ ಮತ್ತು ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಪತ್ನಿ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> ಸುಬ್ಬಣ್ಣ ಗಾರ್ಡನ್ ಐದನೇ `ಎ~ ಅಡ್ಡರಸ್ತೆಯಲ್ಲಿ ವಾಸವಿರುವ ಸಾಫ್ಟ್ವೇರ್ ಎಂಜಿನಿಯರ್ ವಿಜಯ್ಕುಮಾರ್ ಎಂಬುವರ ಪತ್ನಿ ವಿಜಯಲಕ್ಷ್ಮಿ (23) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ಮೂಲತಃ ಬಾಗಲಕೋಟೆ ಜಿಲ್ಲೆ ಬನಹಟ್ಟಿ ಗ್ರಾಮದ ವಿಜಯಲಕ್ಷ್ಮಿ, ವಿಜಯ್ಕುಮಾರ್ ಪರಸ್ಪರ ಪ್ರೀತಿಸಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ವರ್ಷಿಣಿ ಎಂಬ ಎರಡು ವರ್ಷದ ಮಗಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಪತಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಮಗು ವರ್ಷಿಣಿ ಅಳುತ್ತಿದ್ದನ್ನು ಗಮನಿಸಿದ ನೆರೆಹೊರೆಯವರು ವಿಜಯ್ಕುಮಾರ್ರವರ ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಮೃತರ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಅವರು ನಗರಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> ಮತ್ತೊಂದು ಪ್ರಕರಣ: ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿವಾಳ ಸಮೀಪದ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. ಹೆಬ್ಬಗೋಡಿ ಬಳಿಯ ಶಿಕಾರಿಪಾಳ್ಯ ನಿವಾಸಿ ಮುನಿಯಪ್ಪ ಎಂಬುವರ ಪುತ್ರ ಮದನ್ರಾಜ್ (20) ಆತ್ಮಹತ್ಯೆ ಮಾಡಿಕೊಂಡವರು. <br /> <br /> ಫೈನಾನ್ಸ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು ಎಂದು ಮಡಿವಾಳ ಪೊಲೀಸರು ಹೇಳಿದ್ದಾರೆ.<br /> <br /> ಮಂಗಮ್ಮನಪಾಳ್ಯ ನಿವಾಸಿಯಾದ ನಂದೀಶ್ ಮತ್ತು ಅವರ ಪತ್ನಿ ಸುಮಾ ಎಂಬುವರು ಮದನ್ರಾಜ್ ಕೆಲಸ ಮಾಡುತ್ತಿದ್ದ ಫೈನಾನ್ಸ್ ಕಂಪೆನಿಗೆ ಹಣ ಕಟ್ಟುತ್ತಿದ್ದರು. ಮದನ್ರಾಜ್ ಹಣ ಪಡೆದುಕೊಳ್ಳಲು ಆಗಾಗ್ಗೆ ಆ ದಂಪತಿಯ ಮನೆಗೆ ಬರುತ್ತಿದ್ದರು. ಅಂತೆಯೇ ಅವರು ಬೆಳಿಗ್ಗೆ ದಂಪತಿಯ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ನಂದೀಶ್ ಕೆಲಸಕ್ಕೆ ಹೋಗಿದ್ದರು. ಅವರ ಮನೆಯಲ್ಲೇ ತಿಂಡಿ ಸೇವಿಸಿದ ಮದನ್ರಾಜ್ ಕೋಣೆಗೆ ತೆರಳಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಮಡಿವಾಳ ಮತ್ತು ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಪತ್ನಿ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> ಸುಬ್ಬಣ್ಣ ಗಾರ್ಡನ್ ಐದನೇ `ಎ~ ಅಡ್ಡರಸ್ತೆಯಲ್ಲಿ ವಾಸವಿರುವ ಸಾಫ್ಟ್ವೇರ್ ಎಂಜಿನಿಯರ್ ವಿಜಯ್ಕುಮಾರ್ ಎಂಬುವರ ಪತ್ನಿ ವಿಜಯಲಕ್ಷ್ಮಿ (23) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ಮೂಲತಃ ಬಾಗಲಕೋಟೆ ಜಿಲ್ಲೆ ಬನಹಟ್ಟಿ ಗ್ರಾಮದ ವಿಜಯಲಕ್ಷ್ಮಿ, ವಿಜಯ್ಕುಮಾರ್ ಪರಸ್ಪರ ಪ್ರೀತಿಸಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ವರ್ಷಿಣಿ ಎಂಬ ಎರಡು ವರ್ಷದ ಮಗಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಪತಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಮಗು ವರ್ಷಿಣಿ ಅಳುತ್ತಿದ್ದನ್ನು ಗಮನಿಸಿದ ನೆರೆಹೊರೆಯವರು ವಿಜಯ್ಕುಮಾರ್ರವರ ಮನೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಮೃತರ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಅವರು ನಗರಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> ಮತ್ತೊಂದು ಪ್ರಕರಣ: ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿವಾಳ ಸಮೀಪದ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. ಹೆಬ್ಬಗೋಡಿ ಬಳಿಯ ಶಿಕಾರಿಪಾಳ್ಯ ನಿವಾಸಿ ಮುನಿಯಪ್ಪ ಎಂಬುವರ ಪುತ್ರ ಮದನ್ರಾಜ್ (20) ಆತ್ಮಹತ್ಯೆ ಮಾಡಿಕೊಂಡವರು. <br /> <br /> ಫೈನಾನ್ಸ್ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು ಎಂದು ಮಡಿವಾಳ ಪೊಲೀಸರು ಹೇಳಿದ್ದಾರೆ.<br /> <br /> ಮಂಗಮ್ಮನಪಾಳ್ಯ ನಿವಾಸಿಯಾದ ನಂದೀಶ್ ಮತ್ತು ಅವರ ಪತ್ನಿ ಸುಮಾ ಎಂಬುವರು ಮದನ್ರಾಜ್ ಕೆಲಸ ಮಾಡುತ್ತಿದ್ದ ಫೈನಾನ್ಸ್ ಕಂಪೆನಿಗೆ ಹಣ ಕಟ್ಟುತ್ತಿದ್ದರು. ಮದನ್ರಾಜ್ ಹಣ ಪಡೆದುಕೊಳ್ಳಲು ಆಗಾಗ್ಗೆ ಆ ದಂಪತಿಯ ಮನೆಗೆ ಬರುತ್ತಿದ್ದರು. ಅಂತೆಯೇ ಅವರು ಬೆಳಿಗ್ಗೆ ದಂಪತಿಯ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ನಂದೀಶ್ ಕೆಲಸಕ್ಕೆ ಹೋಗಿದ್ದರು. ಅವರ ಮನೆಯಲ್ಲೇ ತಿಂಡಿ ಸೇವಿಸಿದ ಮದನ್ರಾಜ್ ಕೋಣೆಗೆ ತೆರಳಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>