<p><strong>ಬೆಂಗಳೂರು:</strong> ಕಾಟನ್ಪೇಟೆ ಮುಖ್ಯರಸ್ತೆಯ ಪಂಕಜಾ ಪ್ಯಾರಡೈಸ್ ವಸತಿಗೃಹದಲ್ಲಿ ವೆಂಕಟ್ಗಿರೀಶ್ (39) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ಮೂಲತಃ ಮೈಸೂರಿನ ವೆಂಕಟ್ಗಿರೀಶ್, ನಗರದ ಕೋರಮಂಗಲದಲ್ಲಿರುವ ಆದಿತ್ಯ ಬಿರ್ಲಾ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಎಂಸಿಎ ಪದವೀಧರರಾಗಿದ್ದ ಅವರು ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು.<br /> <br /> ಸೋಮವಾರ (ಡಿ.9) ಪಂಕಜಾ ಪ್ಯಾರಡೈಸ್ ವಸತಿಗೃಹಕ್ಕೆ ಬಂದಿದ್ದ ವೆಂಕಟ್ಗಿರೀಶ್, ಕೊಠಡಿಯೊಂದನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಆ ದಿನ ರಾತ್ರಿ ಕೊಠಡಿಯೊಳಗೆ ಹೋಗಿದ್ದ ಅವರು ನಂತರ ಹೊರಗೆ ಬಂದಿರಲಿಲ್ಲ. ಅವರ ಕೊಠಡಿಯಿಂದ ಕೆಟ್ಟ ವಾಸನೆ ಬರುತ್ತಿದ್ದುದನ್ನು ಗಮನಿಸಿದ ವಸತಿಗೃಹದ ಕೆಲಸಗಾರರು ಠಾಣೆಗೆ ಶುಕ್ರವಾರ ಮಾಹಿತಿ ನೀಡಿದರು. ಆ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂತು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾಟನ್ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> <strong>ಸರಗಳ್ಳರ ಬಂಧನ</strong><br /> ಸರಗಳ್ಳರನ್ನು ಬಂಧಿಸಿರುವ ಹೆಣ್ಣೂರು ಪೊಲೀಸರು ಚಿನ್ನಾಭರಣ ಸೇರಿದಂತೆ ರೂ 10.61 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.<br /> <br /> ದೊಡ್ಡನೆಕ್ಕುಂದಿಯ ವಿಶ್ವ (20), ಸಂದೀಪ್ (22), ಚಿಂತಾಮಣಿ ತಾಲ್ಲೂಕಿನ ಮಂಜುನಾಥ (27), ಆತನ ತಮ್ಮ ನಾಗೇಶ್ (21) ಮತ್ತು ವೆಂಕಟೇಶ್ (22) ಬಂಧಿತರು.<br /> <br /> ಆರೋಪಿಗಳಿಂದ 350 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸುತ್ತಿದ್ದ ನಾಲ್ಕು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.<br /> ಬಂಧಿತರು ಹೆಣ್ಣೂರು, ಕೆ.ಆರ್.ಪುರ, ಎಚ್ಎಸ್ಆರ್ ಲೇಔಟ್, ಮಹದೇವಪುರ, ರಾಮಮೂರ್ತಿನಗರ, ಇಂದಿರಾ-ನಗರ, ಜೀವನ್ಬಿಮಾನಗರ, ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಸರಗಳನ್ನು ದೋಚಿದ್ದರು.</p>.<p>ಆ ಸರಗಳನ್ನು ಚಿಂತಾಮಣಿ ಹಾಗೂ ಆಂಧ್ರಪ್ರದೇಶದಲ್ಲಿ ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ನಾಗೇಶ್ನನ್ನು ಒಂದೂವರೆ ವರ್ಷದ ಹಿಂದೆ ಕೋರಮಂಗಲ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ. ಆರೋಪಿಗಳ ಬಂಧನದಿಂದ 16 ಸರಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಹೆಣ್ಣೂರು ಇನ್ಸ್ಪೆಕ್ಟರ್ ಎಚ್.ಲಕ್ಷ್ಮೀನಾರಾಯಣಪ್ರಸಾದ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> <strong>ವಿದ್ಯಾರ್ಥಿ ಸಾವು</strong><br /> ಮಲ್ಲೇಶ್ವರ ಎಂಟನೇ ಮುಖ್ಯರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೌಶಿಕ್ (19) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.<br /> <br /> ಆತ ಸ್ನೇಹಿತನನ್ನು ಭೇಟಿಯಾಗಲು ಬೈಕ್ನಲ್ಲಿ ಮಲ್ಲೇಶ್ವರಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.<br /> ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಆತನ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಟನ್ಪೇಟೆ ಮುಖ್ಯರಸ್ತೆಯ ಪಂಕಜಾ ಪ್ಯಾರಡೈಸ್ ವಸತಿಗೃಹದಲ್ಲಿ ವೆಂಕಟ್ಗಿರೀಶ್ (39) ಎಂಬುವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ಮೂಲತಃ ಮೈಸೂರಿನ ವೆಂಕಟ್ಗಿರೀಶ್, ನಗರದ ಕೋರಮಂಗಲದಲ್ಲಿರುವ ಆದಿತ್ಯ ಬಿರ್ಲಾ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಎಂಸಿಎ ಪದವೀಧರರಾಗಿದ್ದ ಅವರು ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು.<br /> <br /> ಸೋಮವಾರ (ಡಿ.9) ಪಂಕಜಾ ಪ್ಯಾರಡೈಸ್ ವಸತಿಗೃಹಕ್ಕೆ ಬಂದಿದ್ದ ವೆಂಕಟ್ಗಿರೀಶ್, ಕೊಠಡಿಯೊಂದನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಆ ದಿನ ರಾತ್ರಿ ಕೊಠಡಿಯೊಳಗೆ ಹೋಗಿದ್ದ ಅವರು ನಂತರ ಹೊರಗೆ ಬಂದಿರಲಿಲ್ಲ. ಅವರ ಕೊಠಡಿಯಿಂದ ಕೆಟ್ಟ ವಾಸನೆ ಬರುತ್ತಿದ್ದುದನ್ನು ಗಮನಿಸಿದ ವಸತಿಗೃಹದ ಕೆಲಸಗಾರರು ಠಾಣೆಗೆ ಶುಕ್ರವಾರ ಮಾಹಿತಿ ನೀಡಿದರು. ಆ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂತು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾಟನ್ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> <strong>ಸರಗಳ್ಳರ ಬಂಧನ</strong><br /> ಸರಗಳ್ಳರನ್ನು ಬಂಧಿಸಿರುವ ಹೆಣ್ಣೂರು ಪೊಲೀಸರು ಚಿನ್ನಾಭರಣ ಸೇರಿದಂತೆ ರೂ 10.61 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.<br /> <br /> ದೊಡ್ಡನೆಕ್ಕುಂದಿಯ ವಿಶ್ವ (20), ಸಂದೀಪ್ (22), ಚಿಂತಾಮಣಿ ತಾಲ್ಲೂಕಿನ ಮಂಜುನಾಥ (27), ಆತನ ತಮ್ಮ ನಾಗೇಶ್ (21) ಮತ್ತು ವೆಂಕಟೇಶ್ (22) ಬಂಧಿತರು.<br /> <br /> ಆರೋಪಿಗಳಿಂದ 350 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸುತ್ತಿದ್ದ ನಾಲ್ಕು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.<br /> ಬಂಧಿತರು ಹೆಣ್ಣೂರು, ಕೆ.ಆರ್.ಪುರ, ಎಚ್ಎಸ್ಆರ್ ಲೇಔಟ್, ಮಹದೇವಪುರ, ರಾಮಮೂರ್ತಿನಗರ, ಇಂದಿರಾ-ನಗರ, ಜೀವನ್ಬಿಮಾನಗರ, ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಸರಗಳನ್ನು ದೋಚಿದ್ದರು.</p>.<p>ಆ ಸರಗಳನ್ನು ಚಿಂತಾಮಣಿ ಹಾಗೂ ಆಂಧ್ರಪ್ರದೇಶದಲ್ಲಿ ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ನಾಗೇಶ್ನನ್ನು ಒಂದೂವರೆ ವರ್ಷದ ಹಿಂದೆ ಕೋರಮಂಗಲ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಅಪರಾಧ ಕೃತ್ಯಗಳನ್ನು ಮುಂದುವರಿಸಿದ್ದ. ಆರೋಪಿಗಳ ಬಂಧನದಿಂದ 16 ಸರಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಹೆಣ್ಣೂರು ಇನ್ಸ್ಪೆಕ್ಟರ್ ಎಚ್.ಲಕ್ಷ್ಮೀನಾರಾಯಣಪ್ರಸಾದ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> <strong>ವಿದ್ಯಾರ್ಥಿ ಸಾವು</strong><br /> ಮಲ್ಲೇಶ್ವರ ಎಂಟನೇ ಮುಖ್ಯರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೌಶಿಕ್ (19) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.<br /> <br /> ಆತ ಸ್ನೇಹಿತನನ್ನು ಭೇಟಿಯಾಗಲು ಬೈಕ್ನಲ್ಲಿ ಮಲ್ಲೇಶ್ವರಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.<br /> ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಆತನ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>