<p><strong>ನವದೆಹಲಿ (ಪಿಟಿಐ</strong>): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಯೋಗೇಂದ್ರ ಯಾದವ್ ಮುಖಕ್ಕೆ ವ್ಯಕ್ತಿಯೊಬ್ಬ ಮಸಿ ಎರಚಿದ ಘಟನೆ ಶನಿವಾರ ನಡೆಯಿತು.<br /> <br /> ಎಎಪಿಯ ಟೊಪ್ಪಿ ಮತ್ತು ಲಾಂಛನ ಧರಿಸಿ, ಭಾರತ ಮಾತೆಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಿದ್ದ ಯುವಕ ಈ ಕೃತ್ಯ ಎಸಗಿದ್ದಾನೆ. ಆತನನ್ನು ದೆಹಲಿಯ ಶಾಲಿಮಾರ್ ಬಾಗ್ನ ಸಾಗರ್ ಭಂಡಾರಿ (28) ಎಂದು ಗುರತಿಸಲಾಗಿದ್ದು, ತಾನೊಬ್ಬ ಅತೃಪ್ತ ಎಎಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.<br /> <br /> ಘಟನೆಯಿಂದ ರೊಚ್ಚಿಗೆದ್ದ ಪಕ್ಷದ ಕಾರ್ಯಕರ್ತರು ಸಾಗರ್ ಭಂಡಾರಿಯನ್ನು ಹಿಗ್ಗಾಮುಗ್ಗಾ ಥಳಿಸಿದರು. ನಂತರ ಸಂಸತ್ ಸ್ಟ್ರೀಟ್ ಠಾಣೆ ಪೊಲೀಸರು ಕರೆದೊಯ್ದುರು. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಪೊಲೀಸರು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದರು.<br /> <br /> ‘ಆ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ದಾಳಿಗೆ ಒಳಗಾದ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದೆ. ಈ ಸಲ ಅವನು ಹಿಂದಿನಿಂದ ಬಂದು ದಾಳಿ ನಡೆಸಿದ್ದಾನೆ. ಮುಂದಿನ ದಿಗಳಲ್ಲಿ ನೇರವಾಗಿ ದಾಳಿ ನಡೆಸಬಹುದು’ ಎಂದು ಯಾದವ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಯೋಗೇಂದ್ರ ಯಾದವ್ ಮುಖಕ್ಕೆ ವ್ಯಕ್ತಿಯೊಬ್ಬ ಮಸಿ ಎರಚಿದ ಘಟನೆ ಶನಿವಾರ ನಡೆಯಿತು.<br /> <br /> ಎಎಪಿಯ ಟೊಪ್ಪಿ ಮತ್ತು ಲಾಂಛನ ಧರಿಸಿ, ಭಾರತ ಮಾತೆಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಿದ್ದ ಯುವಕ ಈ ಕೃತ್ಯ ಎಸಗಿದ್ದಾನೆ. ಆತನನ್ನು ದೆಹಲಿಯ ಶಾಲಿಮಾರ್ ಬಾಗ್ನ ಸಾಗರ್ ಭಂಡಾರಿ (28) ಎಂದು ಗುರತಿಸಲಾಗಿದ್ದು, ತಾನೊಬ್ಬ ಅತೃಪ್ತ ಎಎಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.<br /> <br /> ಘಟನೆಯಿಂದ ರೊಚ್ಚಿಗೆದ್ದ ಪಕ್ಷದ ಕಾರ್ಯಕರ್ತರು ಸಾಗರ್ ಭಂಡಾರಿಯನ್ನು ಹಿಗ್ಗಾಮುಗ್ಗಾ ಥಳಿಸಿದರು. ನಂತರ ಸಂಸತ್ ಸ್ಟ್ರೀಟ್ ಠಾಣೆ ಪೊಲೀಸರು ಕರೆದೊಯ್ದುರು. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಪೊಲೀಸರು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದರು.<br /> <br /> ‘ಆ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ದಾಳಿಗೆ ಒಳಗಾದ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದೆ. ಈ ಸಲ ಅವನು ಹಿಂದಿನಿಂದ ಬಂದು ದಾಳಿ ನಡೆಸಿದ್ದಾನೆ. ಮುಂದಿನ ದಿಗಳಲ್ಲಿ ನೇರವಾಗಿ ದಾಳಿ ನಡೆಸಬಹುದು’ ಎಂದು ಯಾದವ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>