<p><strong>ಬೆಂಗಳೂರು:</strong> ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ವಸೂಲಿ ಮಾಡಿ ರಸೀದಿ ನೀಡದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬಸವನಗುಡಿ ಸಂಚಾರ ಠಾಣೆ ಎಎಸ್ಐ ರಮೇಶ್ ಅವರನ್ನು ಹಿರಿಯ ಅಧಿಕಾರಿಗಳು ಶನಿವಾರ ಅಮಾನತು ಮಾಡಿದ್ದಾರೆ.<br /> <br /> ಡಿವಿಜಿ ರಸ್ತೆಯ ವಾಹನ ನಿಲುಗಡೆ ನಿರ್ಬಂಧಿತ ಸ್ಥಳದಲ್ಲಿ ನಿಂತಿದ್ದ ವಾಹನಗಳನ್ನು ರಮೇಶ್ ಅವರು ‘ಟೈಗರ್’ ವಾಹನದ ಮೂಲಕ ಶುಕ್ರವಾರ ಠಾಣೆಗೆ ಎಳೆದುಕೊಂಡು ಬಂದಿದ್ದರು.<br /> <br /> ನಂತರ ಠಾಣೆಗೆ ಬಂದ ಆ ವಾಹನಗಳ ಮಾಲೀಕರಿಂದ ದಂಡ ಪಡೆದಿದ್ದ ರಮೇಶ್ ಅವರು ಪ್ರತಿಯಾಗಿ ರಸೀದಿ ಕೊಟ್ಟಿರಲಿಲ್ಲ. ಈ ಸಂಬಂಧ ಹಾಲಸ್ವಾಮಿ ಎಂಬುವರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಎಸ್.ಗಿರೀಶ್ ಅವರಿಗೆ ದೂರು ಕೊಟ್ಟಿದ್ದರು.<br /> <br /> ಈ ದೂರಿನ ಬಗ್ಗೆ ತನಿಖೆ ನಡೆಸಿದ ಗಿರೀಶ್ ಅವರು ರಮೇಶ್ ಅವರನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ವಸೂಲಿ ಮಾಡಿ ರಸೀದಿ ನೀಡದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬಸವನಗುಡಿ ಸಂಚಾರ ಠಾಣೆ ಎಎಸ್ಐ ರಮೇಶ್ ಅವರನ್ನು ಹಿರಿಯ ಅಧಿಕಾರಿಗಳು ಶನಿವಾರ ಅಮಾನತು ಮಾಡಿದ್ದಾರೆ.<br /> <br /> ಡಿವಿಜಿ ರಸ್ತೆಯ ವಾಹನ ನಿಲುಗಡೆ ನಿರ್ಬಂಧಿತ ಸ್ಥಳದಲ್ಲಿ ನಿಂತಿದ್ದ ವಾಹನಗಳನ್ನು ರಮೇಶ್ ಅವರು ‘ಟೈಗರ್’ ವಾಹನದ ಮೂಲಕ ಶುಕ್ರವಾರ ಠಾಣೆಗೆ ಎಳೆದುಕೊಂಡು ಬಂದಿದ್ದರು.<br /> <br /> ನಂತರ ಠಾಣೆಗೆ ಬಂದ ಆ ವಾಹನಗಳ ಮಾಲೀಕರಿಂದ ದಂಡ ಪಡೆದಿದ್ದ ರಮೇಶ್ ಅವರು ಪ್ರತಿಯಾಗಿ ರಸೀದಿ ಕೊಟ್ಟಿರಲಿಲ್ಲ. ಈ ಸಂಬಂಧ ಹಾಲಸ್ವಾಮಿ ಎಂಬುವರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಎಸ್.ಗಿರೀಶ್ ಅವರಿಗೆ ದೂರು ಕೊಟ್ಟಿದ್ದರು.<br /> <br /> ಈ ದೂರಿನ ಬಗ್ಗೆ ತನಿಖೆ ನಡೆಸಿದ ಗಿರೀಶ್ ಅವರು ರಮೇಶ್ ಅವರನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>