<p><strong>ನವದೆಹಲಿ: </strong>ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜುಗಳು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪೂರ್ವಾನುಮತಿ ಪಡೆಯುವುದು ಕಡ್ಡಾಯವಲ್ಲ ಎಂಬ ತನ್ನ ಈ ಮೊದಲಿನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಳ್ಳಿಹಾಕಿದೆ.<br /> <br /> ಎಂಬಿಎ ಸ್ನಾತಕೋತ್ತರ ಪದವಿ ತಾಂತ್ರಿಕ ಕೋರ್ಸ್ ವ್ಯಾಪ್ತಿಗೆ ಒಳಪಡುವುದಿಲ್ಲ. ಎಂಸಿಎ ತಾಂತ್ರಿಕ ಕೋರ್ಸ್ ವ್ಯಾಪ್ತಿಗೆ ಒಳಪಟ್ಟರೂ ಎಐಸಿಟಿಇ ಕೇವಲ ಸಲಹೆಗಳನ್ನು ನೀಡಬಹುದೇ ಹೊರತು ಕೋರ್ಸ್ ಆರಂಭಿಸಲು ಅನುಮತಿ ಕಡ್ಡಾಯ ಅಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.<br /> <br /> ಕಳೆದ ಏಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಎಐಸಿಟಿಇ ಈ ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ತಿರಸ್ಕರಿಸುವ ಮೂಲಕ ಸುಪ್ರೀಂಕೋರ್ಟ್ ತನ್ನ ಈ ಮೊದಲಿನ ಆದೇಶವನ್ನು ಎತ್ತಿ ಹಿಡಿದಿದ್ದು, ಎಐಸಿಟಿಇಗೆ ತೀವ್ರ ಹಿನ್ನಡೆಯಾಗಿದೆ.<br /> <br /> ಆದರೆ, ಅದರ ಕಾನೂನು ಹೋರಾಟ ಇಲ್ಲಿಗೆ ಮುಕ್ತಾಯವಾಗಿಲ್ಲ. ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಕೊನೆಯ ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜುಗಳು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪೂರ್ವಾನುಮತಿ ಪಡೆಯುವುದು ಕಡ್ಡಾಯವಲ್ಲ ಎಂಬ ತನ್ನ ಈ ಮೊದಲಿನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಳ್ಳಿಹಾಕಿದೆ.<br /> <br /> ಎಂಬಿಎ ಸ್ನಾತಕೋತ್ತರ ಪದವಿ ತಾಂತ್ರಿಕ ಕೋರ್ಸ್ ವ್ಯಾಪ್ತಿಗೆ ಒಳಪಡುವುದಿಲ್ಲ. ಎಂಸಿಎ ತಾಂತ್ರಿಕ ಕೋರ್ಸ್ ವ್ಯಾಪ್ತಿಗೆ ಒಳಪಟ್ಟರೂ ಎಐಸಿಟಿಇ ಕೇವಲ ಸಲಹೆಗಳನ್ನು ನೀಡಬಹುದೇ ಹೊರತು ಕೋರ್ಸ್ ಆರಂಭಿಸಲು ಅನುಮತಿ ಕಡ್ಡಾಯ ಅಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.<br /> <br /> ಕಳೆದ ಏಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಎಐಸಿಟಿಇ ಈ ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ತಿರಸ್ಕರಿಸುವ ಮೂಲಕ ಸುಪ್ರೀಂಕೋರ್ಟ್ ತನ್ನ ಈ ಮೊದಲಿನ ಆದೇಶವನ್ನು ಎತ್ತಿ ಹಿಡಿದಿದ್ದು, ಎಐಸಿಟಿಇಗೆ ತೀವ್ರ ಹಿನ್ನಡೆಯಾಗಿದೆ.<br /> <br /> ಆದರೆ, ಅದರ ಕಾನೂನು ಹೋರಾಟ ಇಲ್ಲಿಗೆ ಮುಕ್ತಾಯವಾಗಿಲ್ಲ. ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಕೊನೆಯ ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>