<p>ದೇಶದ ಅತಿ ದೊಡ್ಡ ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾದ ಮಾನೇಸರ್ ಘಟಕದಲ್ಲಿನ ಕಾರ್ಮಿಕರ ಅಶಾಂತಿಯು ಒಬ್ಬ ಹಿರಿಯ ಅಧಿಕಾರಿಯ ಅಮಾನುಷ ಸಾವಿನಲ್ಲಿ ಪರ್ಯವಸಾನಗೊಂಡಿರುವುದು ಆಘಾತಕಾರಿಯಾಗಿದೆ.<br /> <br /> ಈ ತಿಂಗಳ 18ರಂದು ಘಟಕದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಪ್ರಧಾನ ವ್ಯವಸ್ಥಾಪಕ ಅವನೀಶ್ ಕುಮಾರ್ ಅವರನ್ನು ಸಜೀವವಾಗಿ ದಹಿಸಿ ದಾರುಣವಾಗಿ ಕಗ್ಗೊಲೆ ಮಾಡಿದ್ದು ಅಮಾನುಷ ಮತ್ತು ಖಂಡನಾರ್ಹ ಕೃತ್ಯ. <br /> <br /> ಘಟನೆಯಲ್ಲಿ ಇನ್ನೂ ಕೆಲವು ಅಧಿಕಾರಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ತಯಾರಿಕಾ ಘಟಕದಲ್ಲಿ ಹೋದ ವರ್ಷವೂ ಮುಷ್ಕರ ನಡೆದಿತ್ತು. ಗುತ್ತಿಗೆ ಕಾರ್ಮಿಕರ ನೇಮಕ, ವೇತನ ಪರಿಷ್ಕರಣೆ, ಹೊಸ ಕಾರ್ಮಿಕ ಸಂಘಟನೆ ರಚನೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ಮುಷ್ಕರ ನಡೆಸಿದ್ದರು.<br /> <br /> ಸಂಧಾನ ಮಾತುಕತೆ ಮೂಲಕ ಬಿಕ್ಕಟ್ಟು ಕೊನೆಗೊಂಡಿದ್ದರೂ, ಕಾರ್ಮಿಕರಲ್ಲಿನ ಅಸಮಾಧಾನವು ಬೂದಿ ಮುಚ್ಚಿದ ಕೆಂಡದಂತಿತ್ತು ಎನ್ನುವುದಕ್ಕೆ ಈ ಅಮಾನವೀಯ ಘಟನೆ ಸಾಕ್ಷಿಯಾಗಿದೆ. ಕ್ಷುಲ್ಲಕ ಜಗಳವೊಂದು ಕಾರ್ಮಿಕರ ಅಮಾನತಿಗೆ ಕಾರಣವಾದದ್ದೇ ಈ ದೊಡ್ಡ ದುರಂತಕ್ಕೆ ಕಿಡಿ ಹೊತ್ತಿಸಿತು ಎನ್ನಲಾಗಿದ್ದು ಇದನ್ನು ತಡೆಯಬಹುದಾಗಿತ್ತು. <br /> <br /> ರೋಷತಪ್ತ ಕಾರ್ಮಿಕರು ಕಂಪೆನಿಯ ಮ್ಯಾನೇಜರ್ನನ್ನು ಜೀವಂತವಾಗಿ ದಹಿಸಲು ಬೇರೆ ಪ್ರಚೋದನೆಗಳೂ ಇರಬಹುದು. ಕಾರ್ಮಿಕರ ದೊಂಬಿಯಲ್ಲಿ ನಕ್ಸಲಿಯರ ಕೈವಾಡ ಇರುವ ಬಗ್ಗೆಯೂ ಶಂಕೆಗಳು ಮೂಡಿರುವುದು ಇನ್ನೊಂದು ಆತಂಕಕಾರಿ ಬೆಳವಣಿಗೆ.<br /> <br /> ಇಂತಹ ಬೆಳವಣಿಗೆಗಳನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕಾಗಿದೆ. ಗುಡ್ಗಾಂವ್ - ಮಾನೆಸರ್ ಕೈಗಾರಿಕಾ ವಲಯದಲ್ಲಿ ನಕ್ಸಲರು ಕಾರ್ಮಿಕ ಸಂಘಟನೆಯ ಮೇಲೆ ಹಿಡಿತ ಸಾಧಿಸುವುದು ಕೈಗಾರಿಕೆಗಳ ಬೆಳವಣಿಗೆಗೂ ಅಪಾಯಕಾರಿಯಾಗಿ ಪರಿಣಮಿಸಬಹುದು. <br /> <br /> ಕಾರ್ಮಿಕರ ಈ ಪರಿ ದೊಂಬಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ ಗಂಟೆಯಾಗಿರುವುದರ ಜತೆಗೆ ಉದ್ಯಮಿಗಳಲ್ಲೂ ಆತಂಕ ಮೂಡಿಸಿದೆ. ಹರಿಯಾಣ ಸರ್ಕಾರ ಎಚ್ಚೆತ್ತುಕೊಂಡು ಕಾರ್ಮಿಕರ ಅಸಹನೆ ನಿವಾರಣೆಗೆ ಮುಂದಾಗಿದ್ದರೆ ಈ ದುರಂತ ತಪ್ಪಿಸಬಹುದಾಗಿತ್ತು. <br /> <br /> ಇತ್ತೀಚಿನ ದಿನಗಳಲ್ಲಿ ಉದ್ಯಮಿಗಳು ಮತ್ತು ಕಾರ್ಮಿಕರ ಮಧ್ಯೆ ಸಂಘರ್ಷ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಕೆಲ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಕಾರ್ಮಿಕ ಸಂಘಟನೆಗಳ ಅಸ್ತಿತ್ವವೇ ಪಥ್ಯವಾಗುತ್ತಿಲ್ಲ. ಗುತ್ತಿಗೆ ಕಾರ್ಮಿಕರ ನೇಮಕಕ್ಕೆ ಆದ್ಯತೆ ನೀಡುತ್ತಿವೆ.<br /> <br /> ಕೇಂದ್ರೋದ್ಯಮಗಳು ಮತ್ತು ಖಾಸಗಿ ಕೈಗಾರಿಕೆಗಳು ಹೆಚ್ಚಿರುವ ಕಡೆಗಳಲ್ಲಿ ಹೆಚ್ಚುತ್ತಿರುವ ಕಾರ್ಮಿಕರ ಅಶಾಂತಿಯು, ಸಮಾಜದ ಸ್ವಾಸ್ಥ್ಯ ಮತ್ತು ಆರ್ಥಿಕ ಬೆಳವಣಿಗೆಗೂ ಪೂರಕವಲ್ಲ. <br /> <br /> ಸರ್ಕಾರ, ಉದ್ಯಮಿಗಳು ಮತ್ತು ಕಾರ್ಮಿಕ ಸಂಘಟನೆಗಳ ತ್ರಿಪಕ್ಷೀಯ ಸಂಧಾನ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದರಲ್ಲಿಯೇ ಎಲ್ಲರ ಹಿತ ಅಡಗಿದೆ. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕಾಗಿದೆ. <br /> <br /> ಕಾರ್ಮಿಕರ ಹಿತಾಸಕ್ತಿ ರಕ್ಷಿಸುವಂತಹ ವಿವೇಕಯುತ ಕಾರ್ಮಿಕ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದರಿಂದ ಮಾತ್ರ ಕೈಗಾರಿಕಾ ಬಾಂಧವ್ಯ ಸುಧಾರಿಸಬಹುದು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಡಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇಶದ ಅತಿ ದೊಡ್ಡ ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾದ ಮಾನೇಸರ್ ಘಟಕದಲ್ಲಿನ ಕಾರ್ಮಿಕರ ಅಶಾಂತಿಯು ಒಬ್ಬ ಹಿರಿಯ ಅಧಿಕಾರಿಯ ಅಮಾನುಷ ಸಾವಿನಲ್ಲಿ ಪರ್ಯವಸಾನಗೊಂಡಿರುವುದು ಆಘಾತಕಾರಿಯಾಗಿದೆ.<br /> <br /> ಈ ತಿಂಗಳ 18ರಂದು ಘಟಕದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಪ್ರಧಾನ ವ್ಯವಸ್ಥಾಪಕ ಅವನೀಶ್ ಕುಮಾರ್ ಅವರನ್ನು ಸಜೀವವಾಗಿ ದಹಿಸಿ ದಾರುಣವಾಗಿ ಕಗ್ಗೊಲೆ ಮಾಡಿದ್ದು ಅಮಾನುಷ ಮತ್ತು ಖಂಡನಾರ್ಹ ಕೃತ್ಯ. <br /> <br /> ಘಟನೆಯಲ್ಲಿ ಇನ್ನೂ ಕೆಲವು ಅಧಿಕಾರಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ತಯಾರಿಕಾ ಘಟಕದಲ್ಲಿ ಹೋದ ವರ್ಷವೂ ಮುಷ್ಕರ ನಡೆದಿತ್ತು. ಗುತ್ತಿಗೆ ಕಾರ್ಮಿಕರ ನೇಮಕ, ವೇತನ ಪರಿಷ್ಕರಣೆ, ಹೊಸ ಕಾರ್ಮಿಕ ಸಂಘಟನೆ ರಚನೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ಮುಷ್ಕರ ನಡೆಸಿದ್ದರು.<br /> <br /> ಸಂಧಾನ ಮಾತುಕತೆ ಮೂಲಕ ಬಿಕ್ಕಟ್ಟು ಕೊನೆಗೊಂಡಿದ್ದರೂ, ಕಾರ್ಮಿಕರಲ್ಲಿನ ಅಸಮಾಧಾನವು ಬೂದಿ ಮುಚ್ಚಿದ ಕೆಂಡದಂತಿತ್ತು ಎನ್ನುವುದಕ್ಕೆ ಈ ಅಮಾನವೀಯ ಘಟನೆ ಸಾಕ್ಷಿಯಾಗಿದೆ. ಕ್ಷುಲ್ಲಕ ಜಗಳವೊಂದು ಕಾರ್ಮಿಕರ ಅಮಾನತಿಗೆ ಕಾರಣವಾದದ್ದೇ ಈ ದೊಡ್ಡ ದುರಂತಕ್ಕೆ ಕಿಡಿ ಹೊತ್ತಿಸಿತು ಎನ್ನಲಾಗಿದ್ದು ಇದನ್ನು ತಡೆಯಬಹುದಾಗಿತ್ತು. <br /> <br /> ರೋಷತಪ್ತ ಕಾರ್ಮಿಕರು ಕಂಪೆನಿಯ ಮ್ಯಾನೇಜರ್ನನ್ನು ಜೀವಂತವಾಗಿ ದಹಿಸಲು ಬೇರೆ ಪ್ರಚೋದನೆಗಳೂ ಇರಬಹುದು. ಕಾರ್ಮಿಕರ ದೊಂಬಿಯಲ್ಲಿ ನಕ್ಸಲಿಯರ ಕೈವಾಡ ಇರುವ ಬಗ್ಗೆಯೂ ಶಂಕೆಗಳು ಮೂಡಿರುವುದು ಇನ್ನೊಂದು ಆತಂಕಕಾರಿ ಬೆಳವಣಿಗೆ.<br /> <br /> ಇಂತಹ ಬೆಳವಣಿಗೆಗಳನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕಾಗಿದೆ. ಗುಡ್ಗಾಂವ್ - ಮಾನೆಸರ್ ಕೈಗಾರಿಕಾ ವಲಯದಲ್ಲಿ ನಕ್ಸಲರು ಕಾರ್ಮಿಕ ಸಂಘಟನೆಯ ಮೇಲೆ ಹಿಡಿತ ಸಾಧಿಸುವುದು ಕೈಗಾರಿಕೆಗಳ ಬೆಳವಣಿಗೆಗೂ ಅಪಾಯಕಾರಿಯಾಗಿ ಪರಿಣಮಿಸಬಹುದು. <br /> <br /> ಕಾರ್ಮಿಕರ ಈ ಪರಿ ದೊಂಬಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ ಗಂಟೆಯಾಗಿರುವುದರ ಜತೆಗೆ ಉದ್ಯಮಿಗಳಲ್ಲೂ ಆತಂಕ ಮೂಡಿಸಿದೆ. ಹರಿಯಾಣ ಸರ್ಕಾರ ಎಚ್ಚೆತ್ತುಕೊಂಡು ಕಾರ್ಮಿಕರ ಅಸಹನೆ ನಿವಾರಣೆಗೆ ಮುಂದಾಗಿದ್ದರೆ ಈ ದುರಂತ ತಪ್ಪಿಸಬಹುದಾಗಿತ್ತು. <br /> <br /> ಇತ್ತೀಚಿನ ದಿನಗಳಲ್ಲಿ ಉದ್ಯಮಿಗಳು ಮತ್ತು ಕಾರ್ಮಿಕರ ಮಧ್ಯೆ ಸಂಘರ್ಷ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಕೆಲ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಕಾರ್ಮಿಕ ಸಂಘಟನೆಗಳ ಅಸ್ತಿತ್ವವೇ ಪಥ್ಯವಾಗುತ್ತಿಲ್ಲ. ಗುತ್ತಿಗೆ ಕಾರ್ಮಿಕರ ನೇಮಕಕ್ಕೆ ಆದ್ಯತೆ ನೀಡುತ್ತಿವೆ.<br /> <br /> ಕೇಂದ್ರೋದ್ಯಮಗಳು ಮತ್ತು ಖಾಸಗಿ ಕೈಗಾರಿಕೆಗಳು ಹೆಚ್ಚಿರುವ ಕಡೆಗಳಲ್ಲಿ ಹೆಚ್ಚುತ್ತಿರುವ ಕಾರ್ಮಿಕರ ಅಶಾಂತಿಯು, ಸಮಾಜದ ಸ್ವಾಸ್ಥ್ಯ ಮತ್ತು ಆರ್ಥಿಕ ಬೆಳವಣಿಗೆಗೂ ಪೂರಕವಲ್ಲ. <br /> <br /> ಸರ್ಕಾರ, ಉದ್ಯಮಿಗಳು ಮತ್ತು ಕಾರ್ಮಿಕ ಸಂಘಟನೆಗಳ ತ್ರಿಪಕ್ಷೀಯ ಸಂಧಾನ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದರಲ್ಲಿಯೇ ಎಲ್ಲರ ಹಿತ ಅಡಗಿದೆ. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕಾಗಿದೆ. <br /> <br /> ಕಾರ್ಮಿಕರ ಹಿತಾಸಕ್ತಿ ರಕ್ಷಿಸುವಂತಹ ವಿವೇಕಯುತ ಕಾರ್ಮಿಕ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದರಿಂದ ಮಾತ್ರ ಕೈಗಾರಿಕಾ ಬಾಂಧವ್ಯ ಸುಧಾರಿಸಬಹುದು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಡಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>