<p><strong>ನವದೆಹಲಿ (ಪಿಟಿಐ): </strong>ಸುಧಾರಣೆಗಳನ್ನು ತರುವಾಗ ಪ್ರಜಾಪ್ರಭುತ್ವದ ಅಂಗ ಸಂಸ್ಥೆಗಳ ಮಹತ್ವ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಹೇಳಿದ್ದಾರೆ.<br /> <br /> 63ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬುಧವಾರ ರಾತ್ರಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಅವರು ಈ ಸಲಹೆ ನೀಡಿದ್ದಾರೆ. ಪ್ರಬಲ ಲೋಕಪಾಲ ಮಸೂದೆಗೆ ಸಂಬಂಧಿಸಿದ ಜನಾಂದೋಲನವನ್ನು ಪರೋಕ್ಷವಾಗಿ ಉಲ್ಲೇಖಿಸಿದ ಅವರು, `ಮರದಲ್ಲಿನ ಕೆಟ್ಟ ಹಣ್ಣನ್ನು ಕೆಡವಲು ಮರವನ್ನೇ ಉರುಳಿಸುವುದು ಸರಿಯಲ್ಲ~ ಎಂದರು.<br /> <br /> `ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ನಾವು ಹೆಮ್ಮೆ ಪಡಬಹುದು. ಆದರೆ ಯಾವುದೇ ಸಕ್ರಿಯ ಪ್ರಜಾಪ್ರಭುತ್ವ ವ್ಯವಸ್ಥೆ ಒತ್ತಡ ಮತ್ತು ಸವಾಲುಗಳನ್ನು ಎದುರಿಸುತ್ತಲೇ ಇರುತ್ತದೆ. ತಾತ್ಕಾಲಿಕ ಒತ್ತಡಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ದೀರ್ಫಕಾಲೀನ ಗುರಿಗಳನ್ನು ಮರೆಯಬಾರದು. ರಾಷ್ಟ್ರೀಯ ಹಿತಾಸಕ್ತಿಯತ್ತ ಎಲ್ಲರೂ ಕೈಜೋಡಿಸಿ ದುಡಿಯಬೇಕು~ ಎಂದು ಅವರು ಕರೆ ನೀಡಿದರು.<br /> <br /> ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಮತ್ತೊಬ್ಬರ ದೃಷ್ಟಿಕೋನವನ್ನು ಗೌರವಿಸಬೇಕು. ಭಾರತದ ಬೃಹತ್ ದೇಶದಲ್ಲಿ ಭಿನ್ನಾಭಿಪ್ರಾಯಕ್ಕಿಂತ ಒಗ್ಗಟ್ಟು ಮೂಲಮಂತ್ರವಾಗಬೇಕು ಎಂದು ರಾಷ್ಟ್ರಪತಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಸುಧಾರಣೆಗಳನ್ನು ತರುವಾಗ ಪ್ರಜಾಪ್ರಭುತ್ವದ ಅಂಗ ಸಂಸ್ಥೆಗಳ ಮಹತ್ವ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಹೇಳಿದ್ದಾರೆ.<br /> <br /> 63ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬುಧವಾರ ರಾತ್ರಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಅವರು ಈ ಸಲಹೆ ನೀಡಿದ್ದಾರೆ. ಪ್ರಬಲ ಲೋಕಪಾಲ ಮಸೂದೆಗೆ ಸಂಬಂಧಿಸಿದ ಜನಾಂದೋಲನವನ್ನು ಪರೋಕ್ಷವಾಗಿ ಉಲ್ಲೇಖಿಸಿದ ಅವರು, `ಮರದಲ್ಲಿನ ಕೆಟ್ಟ ಹಣ್ಣನ್ನು ಕೆಡವಲು ಮರವನ್ನೇ ಉರುಳಿಸುವುದು ಸರಿಯಲ್ಲ~ ಎಂದರು.<br /> <br /> `ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ನಾವು ಹೆಮ್ಮೆ ಪಡಬಹುದು. ಆದರೆ ಯಾವುದೇ ಸಕ್ರಿಯ ಪ್ರಜಾಪ್ರಭುತ್ವ ವ್ಯವಸ್ಥೆ ಒತ್ತಡ ಮತ್ತು ಸವಾಲುಗಳನ್ನು ಎದುರಿಸುತ್ತಲೇ ಇರುತ್ತದೆ. ತಾತ್ಕಾಲಿಕ ಒತ್ತಡಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ದೀರ್ಫಕಾಲೀನ ಗುರಿಗಳನ್ನು ಮರೆಯಬಾರದು. ರಾಷ್ಟ್ರೀಯ ಹಿತಾಸಕ್ತಿಯತ್ತ ಎಲ್ಲರೂ ಕೈಜೋಡಿಸಿ ದುಡಿಯಬೇಕು~ ಎಂದು ಅವರು ಕರೆ ನೀಡಿದರು.<br /> <br /> ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ಮತ್ತೊಬ್ಬರ ದೃಷ್ಟಿಕೋನವನ್ನು ಗೌರವಿಸಬೇಕು. ಭಾರತದ ಬೃಹತ್ ದೇಶದಲ್ಲಿ ಭಿನ್ನಾಭಿಪ್ರಾಯಕ್ಕಿಂತ ಒಗ್ಗಟ್ಟು ಮೂಲಮಂತ್ರವಾಗಬೇಕು ಎಂದು ರಾಷ್ಟ್ರಪತಿ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>