<p><strong>ಬೆಂಗಳೂರು: </strong>‘ಎಚ್ಐವಿ ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಾದ ಅಗತ್ಯವಿದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಎಂ.ತಿಮ್ಮಪ್ಪರೆಡ್ಡಿ ಹೇಳಿದರು. <br /> <br /> ಕರ್ನಾಟಕ ರಾಜ್ಯ ಎಚ್ಐವಿ ಸೋಂಕಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 5ನೇ ಸದ್ಭಾವನ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಎಚ್ಐವಿ ಸೋಂಕು ತಗುಲಿದೆ ಎಂದು ತಿಳಿದ ನಂತರ ಸೋಂಕಿತರು ಮಾನಸಿಕವಾಗಿ ಕುಗ್ಗುತ್ತಾರೆ. ಆದ್ದರಿಂದ ಕುಟುಂಬದ ಸದಸ್ಯರು ಅವರಲ್ಲಿ ಧೈರ್ಯ ತುಂಬಬೇಕು. ಸಮಾಜದಲ್ಲಿ ಅವರನ್ನು ಸಹಜ ವ್ಯಕ್ತಿಗಳಂತೆ ಕಾಣಬೇಕು ಎಂದು ಹೇಳಿದರು.<br /> <br /> ಸಂಘದ ಅಧ್ಯಕ್ಷ ವಿ.ಎ.ನಾಗರಾಜು ಮಾತನಾಡಿ, ಎಚ್ಐವಿ ಸೋಂಕಿತರಿಗೆ ಎಆರ್ಟಿ ಸೆಂಟರ್ನಲ್ಲಿ ಪೌಷ್ಟಿಕ ಆಹಾರ ನೀಡಬೇಕು. ಆಸ್ಪತ್ರೆ ಗಳಲ್ಲಿ ದಾಖಲಾಗುವ ರೋಗಿಗಳಿಗೆ ಉಚಿತ ಔಷಧಿಗಳನ್ನು ವಿತರಿಸಬೇಕು ಎಂದರು.<br /> <br /> ಸ್ವ–ಉದ್ಯೋಗ ಮಾಡಲು ಇಚ್ಛಿಸುವವರಿಗೆ ₨1 ಲಕ್ಷ ಸಾಲ ನೀಡಬೇಕು. ಸೋಂಕಿತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಎಚ್ಐವಿ ಸೋಂಕಿತರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಾದ ಅಗತ್ಯವಿದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಎಂ.ತಿಮ್ಮಪ್ಪರೆಡ್ಡಿ ಹೇಳಿದರು. <br /> <br /> ಕರ್ನಾಟಕ ರಾಜ್ಯ ಎಚ್ಐವಿ ಸೋಂಕಿತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ 5ನೇ ಸದ್ಭಾವನ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಎಚ್ಐವಿ ಸೋಂಕು ತಗುಲಿದೆ ಎಂದು ತಿಳಿದ ನಂತರ ಸೋಂಕಿತರು ಮಾನಸಿಕವಾಗಿ ಕುಗ್ಗುತ್ತಾರೆ. ಆದ್ದರಿಂದ ಕುಟುಂಬದ ಸದಸ್ಯರು ಅವರಲ್ಲಿ ಧೈರ್ಯ ತುಂಬಬೇಕು. ಸಮಾಜದಲ್ಲಿ ಅವರನ್ನು ಸಹಜ ವ್ಯಕ್ತಿಗಳಂತೆ ಕಾಣಬೇಕು ಎಂದು ಹೇಳಿದರು.<br /> <br /> ಸಂಘದ ಅಧ್ಯಕ್ಷ ವಿ.ಎ.ನಾಗರಾಜು ಮಾತನಾಡಿ, ಎಚ್ಐವಿ ಸೋಂಕಿತರಿಗೆ ಎಆರ್ಟಿ ಸೆಂಟರ್ನಲ್ಲಿ ಪೌಷ್ಟಿಕ ಆಹಾರ ನೀಡಬೇಕು. ಆಸ್ಪತ್ರೆ ಗಳಲ್ಲಿ ದಾಖಲಾಗುವ ರೋಗಿಗಳಿಗೆ ಉಚಿತ ಔಷಧಿಗಳನ್ನು ವಿತರಿಸಬೇಕು ಎಂದರು.<br /> <br /> ಸ್ವ–ಉದ್ಯೋಗ ಮಾಡಲು ಇಚ್ಛಿಸುವವರಿಗೆ ₨1 ಲಕ್ಷ ಸಾಲ ನೀಡಬೇಕು. ಸೋಂಕಿತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>