<p><strong>ಭದ್ರಾವತಿ:</strong> ‘ಜೆಡಿಎಸ್ನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ’ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಹೇಳಿದರು.<br /> ಇಲ್ಲಿನ ಹಳೇ ನಗರದಲ್ಲಿ ಬುಧವಾರ ಜರುಗಿದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನಾನು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದೆ. ಇನ್ನೊಮ್ಮೆ ಅದರ ಮೇಲೆ ನನಗೆ ಆಸಕ್ತಿ ಇಲ್ಲ. ಯುವಕರಾದ ಕುಮಾರ ಸ್ವಾಮಿ ಈ ರಾಜ್ಯದ ಅಧಿಕಾರ ಹಿಡಿಯಬೇಕು ಎಂಬುದು ನಮ್ಮೆಲ್ಲರ ಆಸೆ ಎಂದರು.<br /> <br /> ‘ನನಗೆ ಈಗ 78ವಯಸ್ಸು, ನನಗಿಂತ ದೇವೇಗೌಡರು ಇನ್ನೂ ಆರು ತಿಂಗಳು ದೊಡ್ಡವರು, ನಮ್ಮಿಬ್ಬರಿಗೂ ಬೇಕಿರುವುದು ಹೊಸ ನಾಯಕತ್ವ ಕೊಡಿಸುವ ಜವಾಬ್ದಾರಿ ಹಾಗಾಗಿ, ಈ ವಯಸ್ಸಿನಲ್ಲಿ ರಾಜ್ಯಾದ್ಯಂತ ಪ್ರವಾಸ ನಡೆಸಿದ್ದೇವೆ’ ಎಂದು ತಮ್ಮ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ಕಾರ್ಯಕರ್ತರಿಗೆ ಹುರುಪು ತುಂಬಿದರು. ರಾಜ್ಯದಲ್ಲಿ ಬಿಜೆಪಿ ಸಂಕಷ್ಟದಲ್ಲಿದೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಜೆಡಿಎಸ್ಗೆ ಇದು ಸಕಾಲ ಇದನ್ನು ಬಳಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.<br /> <br /> ಕೇಂದ್ರ ಯುಪಿಎ ಸರ್ಕಾರ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರ ಕೃಷಿ ಬಜೆಟ್ ನೆಪದಲ್ಲಿ ರೈತರಿಗೆ ವಂಚಿಸಲು ಸಿದ್ಧವಾಗಿದೆ. ಇವೆಲ್ಲವನ್ನು ನೋಡಿ ಬೇಸತ್ತಿರುವ ಜನಕ್ಕೆ ಹೊಸ ನಾಯಕತ್ವ ಬೇಕಿದೆ. ಅದಕ್ಕಾಗಿ ಪಕ್ಷ ಬಲಪಡಿಸೋಣ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ‘ಜೆಡಿಎಸ್ನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ’ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಹೇಳಿದರು.<br /> ಇಲ್ಲಿನ ಹಳೇ ನಗರದಲ್ಲಿ ಬುಧವಾರ ಜರುಗಿದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನಾನು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದೆ. ಇನ್ನೊಮ್ಮೆ ಅದರ ಮೇಲೆ ನನಗೆ ಆಸಕ್ತಿ ಇಲ್ಲ. ಯುವಕರಾದ ಕುಮಾರ ಸ್ವಾಮಿ ಈ ರಾಜ್ಯದ ಅಧಿಕಾರ ಹಿಡಿಯಬೇಕು ಎಂಬುದು ನಮ್ಮೆಲ್ಲರ ಆಸೆ ಎಂದರು.<br /> <br /> ‘ನನಗೆ ಈಗ 78ವಯಸ್ಸು, ನನಗಿಂತ ದೇವೇಗೌಡರು ಇನ್ನೂ ಆರು ತಿಂಗಳು ದೊಡ್ಡವರು, ನಮ್ಮಿಬ್ಬರಿಗೂ ಬೇಕಿರುವುದು ಹೊಸ ನಾಯಕತ್ವ ಕೊಡಿಸುವ ಜವಾಬ್ದಾರಿ ಹಾಗಾಗಿ, ಈ ವಯಸ್ಸಿನಲ್ಲಿ ರಾಜ್ಯಾದ್ಯಂತ ಪ್ರವಾಸ ನಡೆಸಿದ್ದೇವೆ’ ಎಂದು ತಮ್ಮ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ಕಾರ್ಯಕರ್ತರಿಗೆ ಹುರುಪು ತುಂಬಿದರು. ರಾಜ್ಯದಲ್ಲಿ ಬಿಜೆಪಿ ಸಂಕಷ್ಟದಲ್ಲಿದೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಜೆಡಿಎಸ್ಗೆ ಇದು ಸಕಾಲ ಇದನ್ನು ಬಳಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.<br /> <br /> ಕೇಂದ್ರ ಯುಪಿಎ ಸರ್ಕಾರ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರ ಕೃಷಿ ಬಜೆಟ್ ನೆಪದಲ್ಲಿ ರೈತರಿಗೆ ವಂಚಿಸಲು ಸಿದ್ಧವಾಗಿದೆ. ಇವೆಲ್ಲವನ್ನು ನೋಡಿ ಬೇಸತ್ತಿರುವ ಜನಕ್ಕೆ ಹೊಸ ನಾಯಕತ್ವ ಬೇಕಿದೆ. ಅದಕ್ಕಾಗಿ ಪಕ್ಷ ಬಲಪಡಿಸೋಣ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>