<p><strong>ಬೆಂಗಳೂರು: </strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರ ಸ್ಥಾನಮಾನ ನೀಡಲಾಗಿದೆ ಎಂದು ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಘೋಷಿಸಿದರು.<br /> <br /> ಬಿಜೆಪಿ, ಜೆಡಿಎಸ್ ಸದನದಲ್ಲಿ ಸಮಬಲ ಹೊಂದಿವೆ. ಜೆಡಿಎಸ್ನ 40 ಶಾಸಕರು ಪಡೆದಿರುವ ಮತಗಳು, ಬಿಜೆಪಿ ಶಾಸಕರ ಮತಗಳಿಗಿಂತ ಹೆಚ್ಚಾಗಿವೆ. ಹೀಗಾಗಿ ನಿಯಮಾವಳಿ ಪ್ರಕಾರ ಜೆಡಿಎಸ್ಗೆ ಅಧಿಕೃತ ವಿರೋಧ ಪಕ್ಷದ ಮಾನ್ಯತೆ ನೀಡಲಾಗಿದೆ ಎಂದು ತಿಮ್ಮಪ್ಪ ಅವರು ಶುಕ್ರವಾರ ಸದನದಲ್ಲಿ ಪ್ರಕಟಿಸಿದರು.<br /> <br /> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ಆಯ್ಕೆಯಾಗಿರುವ ಪತ್ರವನ್ನು ಆ ಪಕ್ಷದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ನೀಡಿದ್ದಾರೆ. ಅದನ್ನು ಆಧರಿಸಿ ಕುಮಾರಸ್ವಾಮಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲಾಗಿದೆ ಎಂದರು.<br /> <br /> ಜಗದೀಶ್ ಶೆಟ್ಟರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ, ಆರ್. ಅಶೋಕ ಅವರು ಉಪ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅದೇ ರೀತಿ ಬಿ.ಎಸ್.ಯಡಿಯೂರಪ್ಪ ಅವರು ಕೆಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ಬಿ.ಆರ್.ಪಾಟೀಲ ಅವರು ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಸದನಕ್ಕೆ ತಿಳಿಸಿದರು.<br /> <br /> <strong>ಸಂಬಳ ಪಡೆಯಲ್ಲ: </strong>ಹಿಂದೆ ಸಚಿವರಾಗಿದ್ದಾಗಲೂ ವೇತನ ಪಡೆದಿರಲಿಲ್ಲ. ಈಗ ಶಾಸಕನಾಗಿಯೂ ವೇತನ ಪಡೆಯುವುದಿಲ್ಲ ಎಂದು ಕಾಂಗ್ರೆಸ್ನ ಬಸವರಾಜ ರಾಯರೆಡ್ಡಿ ತಿಳಿಸಿದರು. ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಹೋಗುವುದು ಸರಿಯಲ್ಲ. ಅದರಿಂದ ಉಪಯೋಗ ಆಗುವುದಿಲ್ಲ ಎಂದು ಅವರು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರ ಸ್ಥಾನಮಾನ ನೀಡಲಾಗಿದೆ ಎಂದು ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಘೋಷಿಸಿದರು.<br /> <br /> ಬಿಜೆಪಿ, ಜೆಡಿಎಸ್ ಸದನದಲ್ಲಿ ಸಮಬಲ ಹೊಂದಿವೆ. ಜೆಡಿಎಸ್ನ 40 ಶಾಸಕರು ಪಡೆದಿರುವ ಮತಗಳು, ಬಿಜೆಪಿ ಶಾಸಕರ ಮತಗಳಿಗಿಂತ ಹೆಚ್ಚಾಗಿವೆ. ಹೀಗಾಗಿ ನಿಯಮಾವಳಿ ಪ್ರಕಾರ ಜೆಡಿಎಸ್ಗೆ ಅಧಿಕೃತ ವಿರೋಧ ಪಕ್ಷದ ಮಾನ್ಯತೆ ನೀಡಲಾಗಿದೆ ಎಂದು ತಿಮ್ಮಪ್ಪ ಅವರು ಶುಕ್ರವಾರ ಸದನದಲ್ಲಿ ಪ್ರಕಟಿಸಿದರು.<br /> <br /> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ಆಯ್ಕೆಯಾಗಿರುವ ಪತ್ರವನ್ನು ಆ ಪಕ್ಷದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ನೀಡಿದ್ದಾರೆ. ಅದನ್ನು ಆಧರಿಸಿ ಕುಮಾರಸ್ವಾಮಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲಾಗಿದೆ ಎಂದರು.<br /> <br /> ಜಗದೀಶ್ ಶೆಟ್ಟರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ, ಆರ್. ಅಶೋಕ ಅವರು ಉಪ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅದೇ ರೀತಿ ಬಿ.ಎಸ್.ಯಡಿಯೂರಪ್ಪ ಅವರು ಕೆಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ಬಿ.ಆರ್.ಪಾಟೀಲ ಅವರು ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಸದನಕ್ಕೆ ತಿಳಿಸಿದರು.<br /> <br /> <strong>ಸಂಬಳ ಪಡೆಯಲ್ಲ: </strong>ಹಿಂದೆ ಸಚಿವರಾಗಿದ್ದಾಗಲೂ ವೇತನ ಪಡೆದಿರಲಿಲ್ಲ. ಈಗ ಶಾಸಕನಾಗಿಯೂ ವೇತನ ಪಡೆಯುವುದಿಲ್ಲ ಎಂದು ಕಾಂಗ್ರೆಸ್ನ ಬಸವರಾಜ ರಾಯರೆಡ್ಡಿ ತಿಳಿಸಿದರು. ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಹೋಗುವುದು ಸರಿಯಲ್ಲ. ಅದರಿಂದ ಉಪಯೋಗ ಆಗುವುದಿಲ್ಲ ಎಂದು ಅವರು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>