<p>ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ಸಂಘಟನೆಯ ಸದಸ್ಯರು ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ತಮಟೆ ಚಳವಳಿ ನಡೆಸಿದರು.<br /> <br /> `ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗ ವರದಿ ಸಲ್ಲಿಸಿ ಬಹು ಸಮಯವೇ ಕಳೆದಿದ್ದರೂ, ವರದಿಯನ್ನು ಜಾರಿ ಮಾಡಲು ಸರ್ಕಾರ ಮುಂದಾಗಿಲ್ಲ. ಆಯೋಗದ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> `ಪರಿಶಿಷ್ಟ ಜಾತಿಯ ಶೇ 15ರಷ್ಟು ಮೀಸಲಾತಿಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿರುವ ಆಯೋಗ ಹಿಂದುಳಿದ ವರ್ಗಗಳಿಗೆ ಸಮನಾಗಿ ಹಂಚಿಕೆ ಮಾಡಿದೆ. ಆಯೋಗವು ನಿಸ್ಪಕ್ಷಪಾತ ಸಮೀಕ್ಷೆ ನಡೆಸಿ 200 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಸರ್ಕಾರ ವರದಿಯನ್ನು ಮೂಲೆಗುಂಪು ಮಾಡಿದೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ಸಂಘಟನೆಯ ಸದಸ್ಯರು ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ತಮಟೆ ಚಳವಳಿ ನಡೆಸಿದರು.<br /> <br /> `ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಉದ್ದೇಶದಿಂದ ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗ ವರದಿ ಸಲ್ಲಿಸಿ ಬಹು ಸಮಯವೇ ಕಳೆದಿದ್ದರೂ, ವರದಿಯನ್ನು ಜಾರಿ ಮಾಡಲು ಸರ್ಕಾರ ಮುಂದಾಗಿಲ್ಲ. ಆಯೋಗದ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> `ಪರಿಶಿಷ್ಟ ಜಾತಿಯ ಶೇ 15ರಷ್ಟು ಮೀಸಲಾತಿಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿರುವ ಆಯೋಗ ಹಿಂದುಳಿದ ವರ್ಗಗಳಿಗೆ ಸಮನಾಗಿ ಹಂಚಿಕೆ ಮಾಡಿದೆ. ಆಯೋಗವು ನಿಸ್ಪಕ್ಷಪಾತ ಸಮೀಕ್ಷೆ ನಡೆಸಿ 200 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಸರ್ಕಾರ ವರದಿಯನ್ನು ಮೂಲೆಗುಂಪು ಮಾಡಿದೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>