<p><strong>ಬೆಂಗಳೂರು:</strong> ನಗರದ ನಾಗಶೆಟ್ಟಿಹಳ್ಳಿ ಬಸ್ ನಿಲ್ದಾಣದ ಬಳಿಯ ಕೆನರಾ ಬ್ಯಾಂಕ್ ಎಟಿಎಂ ಘಟಕದಲ್ಲಿನ ಎಟಿಎಂ ಯಂತ್ರವನ್ನು ಕತ್ತರಿಸಿ ರೂ. 19.86 ಲಕ್ಷ ಹಣ ದೋಚಿದ್ದ ಆರೋಪಿಗಳನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.<br /> <br /> ಬನಶಂಕರಿ ಬಳಿಯ ಶಾರದಾನಗರದ ರಘು (34), ಹಾಸನದ ಮಹೇಶ (40) ಮತ್ತು ರಾಮನಾಥಪುರದ ಸುನಿಲ್ (32) ಬಂಧಿತರು. ಆರೋಪಿಗಳು ದೋಚಿದ್ದ ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.<br /> <br /> `ಪ್ರಕರಣವನ್ನು ಶೀಘ್ರವೇ ಭೇದಿಸಿ ಉತ್ತಮ ಕೆಲಸ ಮಾಡಿರುವ ಸಿಬ್ಬಂದಿಗೆ 25 ಸಾವಿರ ನಗದು ಬಹುಮಾನ ನೀಡಲಾಗುತ್ತದೆ' ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಮೂಲತಃ ಹಾಸನ ಜಿಲ್ಲೆಯ ರಘು, ಪಿಯುಸಿ ಓದಿದ್ದಾನೆ. ಹಾಸನದ ಖಾಸಗಿ ಡೇರಿಯಲ್ಲಿ ಉದ್ಯೋಗಿಯಾಗಿದ್ದ ಆತ ಆ ಕೆಲಸ ಬಿಟ್ಟು ನಾಲ್ಕು ವರ್ಷಗಳ ಹಿಂದೆ `ಚೆಕ್ ಮೇಟ್' ಸೆಕ್ಯುರಿಟಿ ಏಜೆನ್ಸಿಯ ಇಂದಿರಾನಗರ ಶಾಖೆಯಲ್ಲಿ ಸಹಾಯಕ ಕ್ಷೇತ್ರಾಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದ. ಏಜೆನ್ಸಿಯಲ್ಲಿ ಎಟಿಎಂ ಘಟಕಗಳಿಗೆ ಹಣ ತುಂಬುವ ಕೆಲಸಗಾರರು ರಜೆಯಲ್ಲಿದ್ದಾಗ ಆತನೇ ಆ ಕೆಲಸ ನಿರ್ವಹಿಸುತ್ತಿದ್ದ. ಅದೇ ರೀತಿ ಆತ ಮೇ 25ರಿಂದ 29ರವರೆಗೆ ಇತರೆ ಸಿಬ್ಬಂದಿ ಜತೆ ನಾಗಶೆಟ್ಟಿಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂ ಘಟಕಕ್ಕೆ ಹೋಗಿ ಹಣ ತುಂಬಿ ಬಂದಿದ್ದ. ಆ ಎಟಿಎಂ ಘಟಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬರುವುದಿಲ್ಲ ಎಂಬ ಸಂಗತಿಯನ್ನು ತಿಳಿದ ಆತ, ಇತರೆ ಆರೋಪಿಗಳ ಜತೆ ಸೇರಿ ಹಣ ದೋಚಲು ಸಂಚು ರೂಪಿಸಿದ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಪೂರ್ವಯೋಜಿತ ಸಂಚಿನಂತೆ ಜೂ.8ರಂದು ಸಂಜೆ 6.30ರ ಸುಮಾರಿಗೆ ಎಟಿಎಂ ಘಟಕಕ್ಕೆ ನುಗ್ಗಿದ ಆರೋಪಿಗಳು, ಘಟಕದ ಎರಡೂ ಬಾಗಿಲುಗಳನ್ನು ಸಂಪೂರ್ಣ ಮುಚ್ಚಿ ಕೃತ್ಯ ಎಸಗಿದ್ದರು. ಗ್ಯಾಸ್ ಕಟರ್ನ ಸಹಾಯದಿಂದ ಎಟಿಎಂ ಯಂತ್ರವನ್ನು ಕತ್ತರಿಸಿದ ಅವರು ಹಣ ದೋಚಿ ಪರಾರಿಯಾಗಿದ್ದರು.<br /> <br /> ಆ ಹಣದಲ್ಲಿ ರೂ. 1.90 ಲಕ್ಷವನ್ನು ಖರ್ಚು ಮಾಡಿ ಉಳಿದ ಹಣವನ್ನು ರಘುನ ಮನೆಯಲ್ಲಿ ಇಟ್ಟಿದ್ದರು. ಆರೋಪಿಗಳಾದ ಸುನಿಲ್ ಮತ್ತು ಮಹೇಶ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> `ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅವರು ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯಗಳನ್ನು ಎಸಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ' ಎಂದು ಉತ್ತರ ವಿಭಾಗದ ಡಿಸಿಪಿ ಎಸ್.ಎನ್.ಸಿದ್ದರಾಮಪ್ಪ `ಪ್ರಜಾವಾಣಿ'ಗೆ ತಿಳಿಸಿದರು.<br /> ಡಿಸಿಪಿ ಸಿದ್ದರಾಮಪ್ಪ ಅವರ ಮಾರ್ಗದರ್ಶನದಲ್ಲಿ ಸಂಜಯನಗರ ಇನ್ಸ್ಪೆಕ್ಟರ್ ಗೋಪಾಲಕೃಷ್ಣೇಗೌಡ, ಜೆ.ಸಿ.ನಗರ ಇನ್ಸ್ಪೆಕ್ಟರ್ ಸಿ.ಗೋಪಾಲ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> <strong>ಸುಳಿವು ನೀಡಿದ ಮೊಬೈಲ್</strong><br /> `ಪ್ರಕರಣ ಸಂಬಂಧ ಚೆಕ್ ಮೇಟ್ ಸೆಕ್ಯುರಿಟಿ ಏಜೆನ್ಸಿ ಇಂದಿರಾನಗರ ಶಾಖೆಯಲ್ಲಿ ಎಟಿಎಂ ಘಟಕಗಳಿಗೆ ಹಣ ತುಂಬುವ ಕೆಲಸ ನಿರ್ವಹಿಸುವ 12 ಮಂದಿ ಕೆಲಸಗಾರರ ವಿಚಾರಣೆ ನಡೆಸಲಾಯಿತು. ಅಲ್ಲದೇ, ಅವರ ಮೊಬೈಲ್ ಸಂಖ್ಯೆಗಳು ಹಾಗೂ ಕರೆಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಯಿತು.<br /> <br /> ಆ ಮಾಹಿತಿ ಆಧರಿಸಿ ತನಿಖೆ ಮುಂದುವರಿಸಿದಾಗ ಘಟನಾ ಸಂದರ್ಭದಲ್ಲಿ ಆರೋಪಿ ರಘುನ ಮೊಬೈಲ್ ನಾಗಶೆಟ್ಟಿಹಳ್ಳಿ ಸುತ್ತಮುತ್ತಲಿನ ಮೊಬೈಲ್ ಗೋಪುರಗಳ (ಟವರ್) ವ್ಯಾಪ್ತಿಯಲ್ಲಿ ಇದ್ದ ಸಂಗತಿ ಗೊತ್ತಾಯಿತು. ಆ ಸುಳಿವು ಆಧರಿಸಿ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಸ್ನೇಹಿತರ ಜತೆ ಸೇರಿಕೊಂಡು ಹಣ ದೋಚಿದ್ದಾಗಿ ಒಪ್ಪಿಕೊಂಡ' ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ನಾಗಶೆಟ್ಟಿಹಳ್ಳಿ ಬಸ್ ನಿಲ್ದಾಣದ ಬಳಿಯ ಕೆನರಾ ಬ್ಯಾಂಕ್ ಎಟಿಎಂ ಘಟಕದಲ್ಲಿನ ಎಟಿಎಂ ಯಂತ್ರವನ್ನು ಕತ್ತರಿಸಿ ರೂ. 19.86 ಲಕ್ಷ ಹಣ ದೋಚಿದ್ದ ಆರೋಪಿಗಳನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.<br /> <br /> ಬನಶಂಕರಿ ಬಳಿಯ ಶಾರದಾನಗರದ ರಘು (34), ಹಾಸನದ ಮಹೇಶ (40) ಮತ್ತು ರಾಮನಾಥಪುರದ ಸುನಿಲ್ (32) ಬಂಧಿತರು. ಆರೋಪಿಗಳು ದೋಚಿದ್ದ ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.<br /> <br /> `ಪ್ರಕರಣವನ್ನು ಶೀಘ್ರವೇ ಭೇದಿಸಿ ಉತ್ತಮ ಕೆಲಸ ಮಾಡಿರುವ ಸಿಬ್ಬಂದಿಗೆ 25 ಸಾವಿರ ನಗದು ಬಹುಮಾನ ನೀಡಲಾಗುತ್ತದೆ' ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಮೂಲತಃ ಹಾಸನ ಜಿಲ್ಲೆಯ ರಘು, ಪಿಯುಸಿ ಓದಿದ್ದಾನೆ. ಹಾಸನದ ಖಾಸಗಿ ಡೇರಿಯಲ್ಲಿ ಉದ್ಯೋಗಿಯಾಗಿದ್ದ ಆತ ಆ ಕೆಲಸ ಬಿಟ್ಟು ನಾಲ್ಕು ವರ್ಷಗಳ ಹಿಂದೆ `ಚೆಕ್ ಮೇಟ್' ಸೆಕ್ಯುರಿಟಿ ಏಜೆನ್ಸಿಯ ಇಂದಿರಾನಗರ ಶಾಖೆಯಲ್ಲಿ ಸಹಾಯಕ ಕ್ಷೇತ್ರಾಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದ. ಏಜೆನ್ಸಿಯಲ್ಲಿ ಎಟಿಎಂ ಘಟಕಗಳಿಗೆ ಹಣ ತುಂಬುವ ಕೆಲಸಗಾರರು ರಜೆಯಲ್ಲಿದ್ದಾಗ ಆತನೇ ಆ ಕೆಲಸ ನಿರ್ವಹಿಸುತ್ತಿದ್ದ. ಅದೇ ರೀತಿ ಆತ ಮೇ 25ರಿಂದ 29ರವರೆಗೆ ಇತರೆ ಸಿಬ್ಬಂದಿ ಜತೆ ನಾಗಶೆಟ್ಟಿಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂ ಘಟಕಕ್ಕೆ ಹೋಗಿ ಹಣ ತುಂಬಿ ಬಂದಿದ್ದ. ಆ ಎಟಿಎಂ ಘಟಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬರುವುದಿಲ್ಲ ಎಂಬ ಸಂಗತಿಯನ್ನು ತಿಳಿದ ಆತ, ಇತರೆ ಆರೋಪಿಗಳ ಜತೆ ಸೇರಿ ಹಣ ದೋಚಲು ಸಂಚು ರೂಪಿಸಿದ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಪೂರ್ವಯೋಜಿತ ಸಂಚಿನಂತೆ ಜೂ.8ರಂದು ಸಂಜೆ 6.30ರ ಸುಮಾರಿಗೆ ಎಟಿಎಂ ಘಟಕಕ್ಕೆ ನುಗ್ಗಿದ ಆರೋಪಿಗಳು, ಘಟಕದ ಎರಡೂ ಬಾಗಿಲುಗಳನ್ನು ಸಂಪೂರ್ಣ ಮುಚ್ಚಿ ಕೃತ್ಯ ಎಸಗಿದ್ದರು. ಗ್ಯಾಸ್ ಕಟರ್ನ ಸಹಾಯದಿಂದ ಎಟಿಎಂ ಯಂತ್ರವನ್ನು ಕತ್ತರಿಸಿದ ಅವರು ಹಣ ದೋಚಿ ಪರಾರಿಯಾಗಿದ್ದರು.<br /> <br /> ಆ ಹಣದಲ್ಲಿ ರೂ. 1.90 ಲಕ್ಷವನ್ನು ಖರ್ಚು ಮಾಡಿ ಉಳಿದ ಹಣವನ್ನು ರಘುನ ಮನೆಯಲ್ಲಿ ಇಟ್ಟಿದ್ದರು. ಆರೋಪಿಗಳಾದ ಸುನಿಲ್ ಮತ್ತು ಮಹೇಶ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> `ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅವರು ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯಗಳನ್ನು ಎಸಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ' ಎಂದು ಉತ್ತರ ವಿಭಾಗದ ಡಿಸಿಪಿ ಎಸ್.ಎನ್.ಸಿದ್ದರಾಮಪ್ಪ `ಪ್ರಜಾವಾಣಿ'ಗೆ ತಿಳಿಸಿದರು.<br /> ಡಿಸಿಪಿ ಸಿದ್ದರಾಮಪ್ಪ ಅವರ ಮಾರ್ಗದರ್ಶನದಲ್ಲಿ ಸಂಜಯನಗರ ಇನ್ಸ್ಪೆಕ್ಟರ್ ಗೋಪಾಲಕೃಷ್ಣೇಗೌಡ, ಜೆ.ಸಿ.ನಗರ ಇನ್ಸ್ಪೆಕ್ಟರ್ ಸಿ.ಗೋಪಾಲ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> <strong>ಸುಳಿವು ನೀಡಿದ ಮೊಬೈಲ್</strong><br /> `ಪ್ರಕರಣ ಸಂಬಂಧ ಚೆಕ್ ಮೇಟ್ ಸೆಕ್ಯುರಿಟಿ ಏಜೆನ್ಸಿ ಇಂದಿರಾನಗರ ಶಾಖೆಯಲ್ಲಿ ಎಟಿಎಂ ಘಟಕಗಳಿಗೆ ಹಣ ತುಂಬುವ ಕೆಲಸ ನಿರ್ವಹಿಸುವ 12 ಮಂದಿ ಕೆಲಸಗಾರರ ವಿಚಾರಣೆ ನಡೆಸಲಾಯಿತು. ಅಲ್ಲದೇ, ಅವರ ಮೊಬೈಲ್ ಸಂಖ್ಯೆಗಳು ಹಾಗೂ ಕರೆಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಯಿತು.<br /> <br /> ಆ ಮಾಹಿತಿ ಆಧರಿಸಿ ತನಿಖೆ ಮುಂದುವರಿಸಿದಾಗ ಘಟನಾ ಸಂದರ್ಭದಲ್ಲಿ ಆರೋಪಿ ರಘುನ ಮೊಬೈಲ್ ನಾಗಶೆಟ್ಟಿಹಳ್ಳಿ ಸುತ್ತಮುತ್ತಲಿನ ಮೊಬೈಲ್ ಗೋಪುರಗಳ (ಟವರ್) ವ್ಯಾಪ್ತಿಯಲ್ಲಿ ಇದ್ದ ಸಂಗತಿ ಗೊತ್ತಾಯಿತು. ಆ ಸುಳಿವು ಆಧರಿಸಿ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಸ್ನೇಹಿತರ ಜತೆ ಸೇರಿಕೊಂಡು ಹಣ ದೋಚಿದ್ದಾಗಿ ಒಪ್ಪಿಕೊಂಡ' ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>