<p><strong>ಕೋಲ್ಕತ್ತ/ಚೆನ್ನೈ (ಪಿಟಿಐ): </strong>ದೇಶದಲ್ಲಿ ಎಡಪಕ್ಷಗಳನ್ನು ಹೊರತುಪಡಿಸಿ ಪರ್ಯಾಯ ರಾಜಕೀಯ ಶಕ್ತಿ ಅಸ್ತಿತ್ವಕ್ಕೆ ಬರಲು ಅಸಾಧ್ಯ ಎಂದಿರುವ ಸಿಪಿಎಂ ಪಾಲಿಟ್ಬ್ಯೂರೊ ಸದಸ್ಯ ಸೀತಾರಾಮ್ ಯೆಚೂರಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಉದ್ದೇಶಿತ ಒಕ್ಕೂಟ ವೇದಿಕೆ ರಚನೆ ವಿಚಾರವನ್ನು ತಳ್ಳಿ ಹಾಕಿದ್ದಾರೆ.<br /> <br /> `ಸಾಮಾನ್ಯ ಕಾರ್ಯಕ್ರಮಗಳು ಮತ್ತು ಪರ್ಯಾಯ ನೀತಿಗಳ ಆಧಾರದ ಮೇಲೆ ಯಾವುದಾದರೂ ವೇದಿಕೆ ಅಥವಾ ರಂಗ ರಚಿಸಿದರೆ ಅದು ಯಶಸ್ವಿಯಾಗಬಹುದು. ಕೇವಲ ಘೋಷಣೆ ಮಾಡುವುದರಿಂದ ಒಕ್ಕೂಟ ವೇದಿಕೆ ರಚನೆಯಾಗುವುದಿಲ್ಲ' ಎಂದು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.<br /> <br /> ಧರ್ಮ ಮತ್ತು ಜಾತಿ ಆಧಾರದ ಮೇಲೆ ರಾಜಕೀಯ ಪಕ್ಷಗಳು ಹಂಚಿ ಹೋಗಿರುವ ಹಿನ್ನೆಲೆಯಲ್ಲಿ ಪರ್ಯಾಯ ವೇದಿಕೆ ರಚನೆ ಸವಾಲಿನ ಕೆಲಸ ಎಂದು ಸಿಪಿಐಎಂ ಮುಖಂಡ ಬುದ್ಧದೇವ್ ಭಟ್ಟಾಚಾರ್ಯ ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆದಾಗ, `ಹೌದು, ಅವರ ಹೇಳಿಕೆ ವಾಸ್ತವಾಂಶದಿಂದ ಕೂಡಿದೆ' ಎಂದು ಚುಟುಕಾಗಿ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ/ಚೆನ್ನೈ (ಪಿಟಿಐ): </strong>ದೇಶದಲ್ಲಿ ಎಡಪಕ್ಷಗಳನ್ನು ಹೊರತುಪಡಿಸಿ ಪರ್ಯಾಯ ರಾಜಕೀಯ ಶಕ್ತಿ ಅಸ್ತಿತ್ವಕ್ಕೆ ಬರಲು ಅಸಾಧ್ಯ ಎಂದಿರುವ ಸಿಪಿಎಂ ಪಾಲಿಟ್ಬ್ಯೂರೊ ಸದಸ್ಯ ಸೀತಾರಾಮ್ ಯೆಚೂರಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಉದ್ದೇಶಿತ ಒಕ್ಕೂಟ ವೇದಿಕೆ ರಚನೆ ವಿಚಾರವನ್ನು ತಳ್ಳಿ ಹಾಕಿದ್ದಾರೆ.<br /> <br /> `ಸಾಮಾನ್ಯ ಕಾರ್ಯಕ್ರಮಗಳು ಮತ್ತು ಪರ್ಯಾಯ ನೀತಿಗಳ ಆಧಾರದ ಮೇಲೆ ಯಾವುದಾದರೂ ವೇದಿಕೆ ಅಥವಾ ರಂಗ ರಚಿಸಿದರೆ ಅದು ಯಶಸ್ವಿಯಾಗಬಹುದು. ಕೇವಲ ಘೋಷಣೆ ಮಾಡುವುದರಿಂದ ಒಕ್ಕೂಟ ವೇದಿಕೆ ರಚನೆಯಾಗುವುದಿಲ್ಲ' ಎಂದು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.<br /> <br /> ಧರ್ಮ ಮತ್ತು ಜಾತಿ ಆಧಾರದ ಮೇಲೆ ರಾಜಕೀಯ ಪಕ್ಷಗಳು ಹಂಚಿ ಹೋಗಿರುವ ಹಿನ್ನೆಲೆಯಲ್ಲಿ ಪರ್ಯಾಯ ವೇದಿಕೆ ರಚನೆ ಸವಾಲಿನ ಕೆಲಸ ಎಂದು ಸಿಪಿಐಎಂ ಮುಖಂಡ ಬುದ್ಧದೇವ್ ಭಟ್ಟಾಚಾರ್ಯ ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆದಾಗ, `ಹೌದು, ಅವರ ಹೇಳಿಕೆ ವಾಸ್ತವಾಂಶದಿಂದ ಕೂಡಿದೆ' ಎಂದು ಚುಟುಕಾಗಿ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>