<p><strong>ಬೆಂಗಳೂರು</strong>: ಎಡಿಜಿಪಿ ರವೀಂದ್ರನಾಥ್ ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ನಗರದ ಪುರಭವನದ ಬಳಿ ಶನಿವಾರ ಪ್ರತಿಭಟನೆ ಮಾಡಿದರು.<br /> <br /> ದಲಿತ ಸಂಘರ್ಷ ಸಮಿತಿ, ಪ್ರಜಾ ಪರಿವರ್ತನಾ ವೇದಿಕೆ, ರಾಜ್ಯ ಜನಾಂದೋಲನ ಸಂಘಟನೆ ಹಾಗೂ ಸಮತಾ ಸೈನಿಕ ದಳದ ಕಾರ್ಯಕರ್ತರು ಬೆಳಿಗ್ಗೆ 11.30ರ ಸುಮಾರಿಗೆ ಪುರಭವನದ ಮುಂದೆ ಜಮಾಯಿಸಿ ಸರ್ಕಾರದ ಆದೇಶದ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಮಾರಪ್ಪ, ‘ಎಡಿಜಿಪಿ ರವೀಂದ್ರನಾಥ್ ಅವರು ಕೆಎಸ್ಆರ್ಪಿ ಎಡಿಜಿಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಅವರು ಇಲಾಖೆಯ ಉನ್ನತ ಹುದ್ದೆಗೆ ಹೋಗುವವರಿದ್ದರು. ಅವರ ಈ ಯಶಸ್ಸನ್ನು ಸಹಿಸದ ಕಮಿಷನರ್ ರಾಘವೇಂದ್ರ ಔರಾದಕರ್, ಡಿಸಿಪಿ ಬಿ.ಆರ್.ರವಿಕಾಂತೇಗೌಡ ಹಾಗೂ ಹೈಗ್ರೌಂಡ್ಸ್ ಎಸ್ಐ ರವಿ ಅವರ ಮೂಲಕ ಎಡಿಜಿಪಿ ವಿರುದ್ಧ ಷಡ್ಯಂತ್ರ ಮಾಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.<br /> <br /> ‘ಕಮಿಷನರ್, ಡಿಸಿಪಿ ಹಾಗೂ ಎಸ್ಐ ಅವರು ರವೀಂದ್ರನಾಥ್ ಅವರನ್ನು ಅಸ್ಪೃಶ್ಯನಂತೆ ನಡೆಸಿಕೊಂಡಿದ್ದಾರೆ. ಅವರ ವಿರುದ್ಧ ರವೀಂದ್ರನಾಥ್, ಪರಿಶಿಷ್ಟ ಜಾತಿ ಮತ್ತು ಪಂಗಡದವರ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ–1989ರ ಅನ್ವಯ ಕಬ್ಬನ್ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆ ಮೂವರನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿದರು.<br /> <br /> ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಗೋಪಾಲ್, ‘ರವೀಂದ್ರನಾಥ್ ಅವರನ್ನು ಇಲಾಖೆಯಲ್ಲಿ ಮೂಲೆ ಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ. ಸರ್ಕಾರ, ವರ್ಗಾವಣೆ ಆದೇಶವನ್ನು ಹಿಂಪಡೆದು ಕೆಎಸ್ಆರ್ಪಿ ಎಡಿಜಿಪಿಯಾಗಿ ಅವರನ್ನೇ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.<br /> ನಂತರ ಗೃಹಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿದ ಪ್ರತಿಭಟನಾಕಾರರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.<br /> <br /> ಈ ವೇಳೆ ಮಾತನಾಡಿದ ಜಾರ್ಜ್, ‘ಪ್ರಕರಣದ ತನಿಖೆಯನ್ನು ಸದ್ಯ ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಅವರು ವರದಿ ಸಲ್ಲಿಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಡಿಜಿಪಿ ರವೀಂದ್ರನಾಥ್ ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ನಗರದ ಪುರಭವನದ ಬಳಿ ಶನಿವಾರ ಪ್ರತಿಭಟನೆ ಮಾಡಿದರು.<br /> <br /> ದಲಿತ ಸಂಘರ್ಷ ಸಮಿತಿ, ಪ್ರಜಾ ಪರಿವರ್ತನಾ ವೇದಿಕೆ, ರಾಜ್ಯ ಜನಾಂದೋಲನ ಸಂಘಟನೆ ಹಾಗೂ ಸಮತಾ ಸೈನಿಕ ದಳದ ಕಾರ್ಯಕರ್ತರು ಬೆಳಿಗ್ಗೆ 11.30ರ ಸುಮಾರಿಗೆ ಪುರಭವನದ ಮುಂದೆ ಜಮಾಯಿಸಿ ಸರ್ಕಾರದ ಆದೇಶದ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಮಾರಪ್ಪ, ‘ಎಡಿಜಿಪಿ ರವೀಂದ್ರನಾಥ್ ಅವರು ಕೆಎಸ್ಆರ್ಪಿ ಎಡಿಜಿಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಅವರು ಇಲಾಖೆಯ ಉನ್ನತ ಹುದ್ದೆಗೆ ಹೋಗುವವರಿದ್ದರು. ಅವರ ಈ ಯಶಸ್ಸನ್ನು ಸಹಿಸದ ಕಮಿಷನರ್ ರಾಘವೇಂದ್ರ ಔರಾದಕರ್, ಡಿಸಿಪಿ ಬಿ.ಆರ್.ರವಿಕಾಂತೇಗೌಡ ಹಾಗೂ ಹೈಗ್ರೌಂಡ್ಸ್ ಎಸ್ಐ ರವಿ ಅವರ ಮೂಲಕ ಎಡಿಜಿಪಿ ವಿರುದ್ಧ ಷಡ್ಯಂತ್ರ ಮಾಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.<br /> <br /> ‘ಕಮಿಷನರ್, ಡಿಸಿಪಿ ಹಾಗೂ ಎಸ್ಐ ಅವರು ರವೀಂದ್ರನಾಥ್ ಅವರನ್ನು ಅಸ್ಪೃಶ್ಯನಂತೆ ನಡೆಸಿಕೊಂಡಿದ್ದಾರೆ. ಅವರ ವಿರುದ್ಧ ರವೀಂದ್ರನಾಥ್, ಪರಿಶಿಷ್ಟ ಜಾತಿ ಮತ್ತು ಪಂಗಡದವರ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ–1989ರ ಅನ್ವಯ ಕಬ್ಬನ್ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆ ಮೂವರನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿದರು.<br /> <br /> ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ಗೋಪಾಲ್, ‘ರವೀಂದ್ರನಾಥ್ ಅವರನ್ನು ಇಲಾಖೆಯಲ್ಲಿ ಮೂಲೆ ಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ. ಸರ್ಕಾರ, ವರ್ಗಾವಣೆ ಆದೇಶವನ್ನು ಹಿಂಪಡೆದು ಕೆಎಸ್ಆರ್ಪಿ ಎಡಿಜಿಪಿಯಾಗಿ ಅವರನ್ನೇ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.<br /> ನಂತರ ಗೃಹಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿದ ಪ್ರತಿಭಟನಾಕಾರರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.<br /> <br /> ಈ ವೇಳೆ ಮಾತನಾಡಿದ ಜಾರ್ಜ್, ‘ಪ್ರಕರಣದ ತನಿಖೆಯನ್ನು ಸದ್ಯ ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಅವರು ವರದಿ ಸಲ್ಲಿಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>