<p><strong>ಧಾರವಾಡ: </strong>ಮುಂಗಾರು ತಡವಾಗಿ ಆರಂಭವಾಗಿರುವುದರಿಂದ ಮೇವಿನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ರೈತರು ತಮ್ಮ ಎತ್ತುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾ ಡಲು ಮುಂದಾಗಿದ್ದಾರೆ. <br /> ನಗರದಲ್ಲಿ ಮಂಗಳವಾರ ನಡೆದ ದನದ ಸಂತೆಗೆ ತಂದಿದ್ದ ಹಲವು ಬಲಿಷ್ಠ ಎತ್ತುಗಳಲ್ಲಿ ಮೇವಿನ ಕೊರತೆಯಿಂದ ತಂದವುಗಳೇ ಅಧಿಕ ಸಂಖ್ಯೆಯಲ್ಲಿದ್ದವು. <br /> <br /> 18 ಸಾವಿರಕ್ಕೆ ಖರೀದಿ ಮಾಡಿದ್ದ ಗರಗ ಬಳಿಯ ದುಮ್ಮನಮಡ್ಡಿಯ ರೈತ ರೊಬ್ಬರ ಎತ್ತನ್ನು 12 ಸಾವಿರಕ್ಕೂ ಕೇಳು ವವರು ಗತಿ ಇರಲಿಲ್ಲ. ಇದೇ ಸಮಯ ವನ್ನು ಕಾಯುತ್ತಿದ್ದ ಕಟುಕರು ಬಾಯಿಗೆ ಬಂದಷ್ಟು ಬೆಲೆಗೆ ಕೇಳುತ್ತಿದ್ದರು. <br /> <br /> ರೈತರಂತೂ ಎತ್ತುಗಳ ಖರೀದಿಗಾಗಿ ಬರುತ್ತಲೇ ಇಲ್ಲ ಎಂದು ಗ್ರಾಮದ ಸುರೇಶ ಜುಟ್ಟಪ್ಪನವರ ಅಲವತ್ತು ಕೊಂಡರು. ಇನ್ನು ಮುಗದ ಗ್ರಾಮದ ಪಾರ್ವತಿ ಎಂಬ ರೈತ ಮಹಿಳೆ ತಂದಿದ್ದ ಎತ್ತಿನ ಕಥೆಯೂ ಇದೇ ಆಗಿತ್ತು. <br /> ಅತ್ಯಂತ ಬಲಿಷ್ಠವಾದ ಆ ಎತ್ತನ್ನು ಕೊಳ್ಳುವವರೂ ಅಲ್ಲಿರಲಿಲ್ಲ. ಬೆಳಿಗ್ಗೆಯೇ ಬಂದವರು ಮಧ್ಯಾಹ್ನದವರೆಗೂ ಗಿರಾಕಿ ಗಳಿಗಾಗಿ ಕಾಯುತ್ತಾ ನಿಂತಿದ್ದರು.<br /> <br /> ಜೂನ್ ಮೊದಲ ವಾರದಲ್ಲಿ ಆರಂಭ ವಾಗಬೇಕಿದ್ದ ಮಳೆ ಜುಲೈ ತಿಂಗಳು ಕಾಲಿಟ್ಟರೂ ಪೂರ್ಣ ಪ್ರಮಾಣ ದಲ್ಲಿ ಆಗದೇ ಇರುವುದರಿಂದ ಹಸಿರು ಮೇವು ಜಮೀನುಗಳಲ್ಲಿ ಕಾಣುತ್ತಿಲ್ಲ.ಎತ್ತುಗಳನ್ನು ಹಸಿವಿನಿಂದ ಬಳಲಿಸುವ ಬದಲು ಮಾರಾಟ ಮಾಡಿದರಾಯಿತು ಎಂದು ಹಲವು ರೈತರು ತಮ್ಮ ಜಾನುವಾರುಗಳನ್ನು ತಂದಿದ್ದರು. <br /> ಸುಮಾರು 40 ಸಾವಿರ ಬೆಲೆ ಬಾಳ ಬಹುದಾದ ಜೋಡೆತ್ತು ಗಳನ್ನು ಕೇವಲ 28 ಸಾವಿರಕ್ಕೆ ಕೇಳುತ್ತಿದ್ದ ದೃಶ್ಯವೂ ಅಲ್ಲಿ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಮುಂಗಾರು ತಡವಾಗಿ ಆರಂಭವಾಗಿರುವುದರಿಂದ ಮೇವಿನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ರೈತರು ತಮ್ಮ ಎತ್ತುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾ ಡಲು ಮುಂದಾಗಿದ್ದಾರೆ. <br /> ನಗರದಲ್ಲಿ ಮಂಗಳವಾರ ನಡೆದ ದನದ ಸಂತೆಗೆ ತಂದಿದ್ದ ಹಲವು ಬಲಿಷ್ಠ ಎತ್ತುಗಳಲ್ಲಿ ಮೇವಿನ ಕೊರತೆಯಿಂದ ತಂದವುಗಳೇ ಅಧಿಕ ಸಂಖ್ಯೆಯಲ್ಲಿದ್ದವು. <br /> <br /> 18 ಸಾವಿರಕ್ಕೆ ಖರೀದಿ ಮಾಡಿದ್ದ ಗರಗ ಬಳಿಯ ದುಮ್ಮನಮಡ್ಡಿಯ ರೈತ ರೊಬ್ಬರ ಎತ್ತನ್ನು 12 ಸಾವಿರಕ್ಕೂ ಕೇಳು ವವರು ಗತಿ ಇರಲಿಲ್ಲ. ಇದೇ ಸಮಯ ವನ್ನು ಕಾಯುತ್ತಿದ್ದ ಕಟುಕರು ಬಾಯಿಗೆ ಬಂದಷ್ಟು ಬೆಲೆಗೆ ಕೇಳುತ್ತಿದ್ದರು. <br /> <br /> ರೈತರಂತೂ ಎತ್ತುಗಳ ಖರೀದಿಗಾಗಿ ಬರುತ್ತಲೇ ಇಲ್ಲ ಎಂದು ಗ್ರಾಮದ ಸುರೇಶ ಜುಟ್ಟಪ್ಪನವರ ಅಲವತ್ತು ಕೊಂಡರು. ಇನ್ನು ಮುಗದ ಗ್ರಾಮದ ಪಾರ್ವತಿ ಎಂಬ ರೈತ ಮಹಿಳೆ ತಂದಿದ್ದ ಎತ್ತಿನ ಕಥೆಯೂ ಇದೇ ಆಗಿತ್ತು. <br /> ಅತ್ಯಂತ ಬಲಿಷ್ಠವಾದ ಆ ಎತ್ತನ್ನು ಕೊಳ್ಳುವವರೂ ಅಲ್ಲಿರಲಿಲ್ಲ. ಬೆಳಿಗ್ಗೆಯೇ ಬಂದವರು ಮಧ್ಯಾಹ್ನದವರೆಗೂ ಗಿರಾಕಿ ಗಳಿಗಾಗಿ ಕಾಯುತ್ತಾ ನಿಂತಿದ್ದರು.<br /> <br /> ಜೂನ್ ಮೊದಲ ವಾರದಲ್ಲಿ ಆರಂಭ ವಾಗಬೇಕಿದ್ದ ಮಳೆ ಜುಲೈ ತಿಂಗಳು ಕಾಲಿಟ್ಟರೂ ಪೂರ್ಣ ಪ್ರಮಾಣ ದಲ್ಲಿ ಆಗದೇ ಇರುವುದರಿಂದ ಹಸಿರು ಮೇವು ಜಮೀನುಗಳಲ್ಲಿ ಕಾಣುತ್ತಿಲ್ಲ.ಎತ್ತುಗಳನ್ನು ಹಸಿವಿನಿಂದ ಬಳಲಿಸುವ ಬದಲು ಮಾರಾಟ ಮಾಡಿದರಾಯಿತು ಎಂದು ಹಲವು ರೈತರು ತಮ್ಮ ಜಾನುವಾರುಗಳನ್ನು ತಂದಿದ್ದರು. <br /> ಸುಮಾರು 40 ಸಾವಿರ ಬೆಲೆ ಬಾಳ ಬಹುದಾದ ಜೋಡೆತ್ತು ಗಳನ್ನು ಕೇವಲ 28 ಸಾವಿರಕ್ಕೆ ಕೇಳುತ್ತಿದ್ದ ದೃಶ್ಯವೂ ಅಲ್ಲಿ ಕಂಡು ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>