<p>ನವದೆಹಲಿ, (ಪಿಟಿಐ): ಅಕ್ರಮ ಸಂತಾನ ಹೊಂದಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಧುರೀಣ ಎನ್.ಡಿ. ತಿವಾರಿ ಅವರನ್ನು ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ದೆಹಲಿ ಹೈಕೋರ್ಟ್ ಸೋಮವಾರ ಆದೇಶಿಸಿದೆ. <br /> <br /> ಮಂಗಳವಾರ ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎದುರು ಹಾಜರಾಗಿ ಡಿಎನ್ಎ ಪರೀಕ್ಷೆಗೆ ಸಂಬಂಧಿಸಿದಂತೆ ರಕ್ತ ಸಂಗ್ರಹ ಮತ್ತು ಇತ್ಯಾದಿ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ತನ್ನ ತಾಯಿ ಉಜ್ವಲಾದೇವಿ ಜತೆ ಎನ್.ಡಿ. ತಿವಾರಿ ಹೊಂದಿದ್ದ ಸಂಬಂಧದಿಂದ ತಾನು ಜನಿಸಿರುವುದಾಗಿ ರೋಹಿತ್ ಶೇಖರ್ ಹೇಳಿಕೊಂಡಿದ್ದ. <br /> ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್. ರವೀಂದ ಭಟ್ ಅವರನ್ನು ಒಳಗೊಂಡ ಹೈಕೋರ್ಟ್ ಏಕ ಸದಸ್ಯ ಪೀಠ ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ಡಿಸೆಂಬರ್ 23 ರಂದು ಆದೇಶಿಸಿತ್ತು. <br /> <br /> ‘ಪ್ರತಿ ಮಗುವಿಗೂ ತನ್ನ ತಂದೆ ಮತ್ತು ತಾಯಿ ಯಾರು ಎಂದು ತಿಳಿಯುವ ಅಧಿಕಾರ ಇರುತ್ತದೆ. ಆ ಹಕ್ಕನ್ನು ನಿರಾಕರಿಸಲು ಆಗದು.’ ಎಂದು ನ್ಯಾಯಮೂರ್ತಿಗಳು ಹೇಳಿದ್ದರು.<br /> ಡಿಎನ್ಎ ಪರೀಕ್ಷೆಯ ಮುಜುಗರದಿಂದ ತಪ್ಪಿಸಿಕೊಳ್ಳಲು ಏಕ ಸದಸ್ಯ ಪೀಠ ನೀಡಿದ್ದ ಆದೇಶದ ವಿರುದ್ಧ ತಡೆಯಾಜ್ಞೆ ನೀಡುವಂತೆ ಕೋರಿ ತಿವಾರಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. <br /> <br /> ಸೋಮವಾರ ಈ ಅರ್ಜಿಯನ್ನು ವಿಚಾರಣೆಗಾಗಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೆನ್ ಮತ್ತು ಸಿದ್ಧಾರ್ಥ ಮೃದುಲ್ ಅವರನ್ನು ಒಳಗೊಂಡ ಪೀಠ ಮನವಿಯನ್ನು ತಳ್ಳಿ ಹಾಕಿದೆ. <br /> <br /> ಡಿಎನ್ಎ ಪರೀಕ್ಷೆಗೆ ರಕ್ತ ಸಂಗ್ರಹ ಮತ್ತು ಇತ್ಯಾದಿ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸಲು ಈ ಮೊದಲೇ ನಿಗದಿಯಾದಂತೆ ಇದೇ ಮಂಗಳವಾರ ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎದುರು ಹಾಜರಾಗುವಂತೆಯೂ ಆದೇಶಿಸಿದೆ.<br /> <br /> ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಳೆದ ವರ್ಷ ತಿವಾರಿ ಆಂಧ್ರ ಪ್ರದೇಶದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ, (ಪಿಟಿಐ): ಅಕ್ರಮ ಸಂತಾನ ಹೊಂದಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಧುರೀಣ ಎನ್.ಡಿ. ತಿವಾರಿ ಅವರನ್ನು ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ದೆಹಲಿ ಹೈಕೋರ್ಟ್ ಸೋಮವಾರ ಆದೇಶಿಸಿದೆ. <br /> <br /> ಮಂಗಳವಾರ ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎದುರು ಹಾಜರಾಗಿ ಡಿಎನ್ಎ ಪರೀಕ್ಷೆಗೆ ಸಂಬಂಧಿಸಿದಂತೆ ರಕ್ತ ಸಂಗ್ರಹ ಮತ್ತು ಇತ್ಯಾದಿ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ತನ್ನ ತಾಯಿ ಉಜ್ವಲಾದೇವಿ ಜತೆ ಎನ್.ಡಿ. ತಿವಾರಿ ಹೊಂದಿದ್ದ ಸಂಬಂಧದಿಂದ ತಾನು ಜನಿಸಿರುವುದಾಗಿ ರೋಹಿತ್ ಶೇಖರ್ ಹೇಳಿಕೊಂಡಿದ್ದ. <br /> ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್. ರವೀಂದ ಭಟ್ ಅವರನ್ನು ಒಳಗೊಂಡ ಹೈಕೋರ್ಟ್ ಏಕ ಸದಸ್ಯ ಪೀಠ ಡಿಎನ್ಎ ಪರೀಕ್ಷೆಗೆ ಒಳಗಾಗುವಂತೆ ಡಿಸೆಂಬರ್ 23 ರಂದು ಆದೇಶಿಸಿತ್ತು. <br /> <br /> ‘ಪ್ರತಿ ಮಗುವಿಗೂ ತನ್ನ ತಂದೆ ಮತ್ತು ತಾಯಿ ಯಾರು ಎಂದು ತಿಳಿಯುವ ಅಧಿಕಾರ ಇರುತ್ತದೆ. ಆ ಹಕ್ಕನ್ನು ನಿರಾಕರಿಸಲು ಆಗದು.’ ಎಂದು ನ್ಯಾಯಮೂರ್ತಿಗಳು ಹೇಳಿದ್ದರು.<br /> ಡಿಎನ್ಎ ಪರೀಕ್ಷೆಯ ಮುಜುಗರದಿಂದ ತಪ್ಪಿಸಿಕೊಳ್ಳಲು ಏಕ ಸದಸ್ಯ ಪೀಠ ನೀಡಿದ್ದ ಆದೇಶದ ವಿರುದ್ಧ ತಡೆಯಾಜ್ಞೆ ನೀಡುವಂತೆ ಕೋರಿ ತಿವಾರಿ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. <br /> <br /> ಸೋಮವಾರ ಈ ಅರ್ಜಿಯನ್ನು ವಿಚಾರಣೆಗಾಗಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೆನ್ ಮತ್ತು ಸಿದ್ಧಾರ್ಥ ಮೃದುಲ್ ಅವರನ್ನು ಒಳಗೊಂಡ ಪೀಠ ಮನವಿಯನ್ನು ತಳ್ಳಿ ಹಾಕಿದೆ. <br /> <br /> ಡಿಎನ್ಎ ಪರೀಕ್ಷೆಗೆ ರಕ್ತ ಸಂಗ್ರಹ ಮತ್ತು ಇತ್ಯಾದಿ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸಲು ಈ ಮೊದಲೇ ನಿಗದಿಯಾದಂತೆ ಇದೇ ಮಂಗಳವಾರ ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎದುರು ಹಾಜರಾಗುವಂತೆಯೂ ಆದೇಶಿಸಿದೆ.<br /> <br /> ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಳೆದ ವರ್ಷ ತಿವಾರಿ ಆಂಧ್ರ ಪ್ರದೇಶದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>