<p><strong>ನವದೆಹಲಿ (ಪಿಟಿಐ): </strong>ಸುಬ್ರಮಣಿಯನ್ ಸ್ವಾಮಿ ನೇತೃತ್ವದ ಜನತಾ ಪಕ್ಷವನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಬಿಜೆಪಿ ನೇತೃತ್ವದ ಎನ್ಡಿಎ ಭಾನುವಾರ ನಿರ್ಧರಿಸಿದೆ. ಇದರಿಂದ ಮೈತ್ರಿಕೂಟದ ಪಕ್ಷಗಳ ಸಂಖ್ಯೆ ಆರಕ್ಕೆ ಏರಿದಂತಾಗಿದೆ.<br /> <br /> ಬಜೆಟ್ಗೆ ಪೂರ್ವಭಾವಿಯಾಗಿ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ನಿವಾಸದಲ್ಲಿ ನಡೆದ ಎನ್ಡಿಎ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.<br /> <br /> `ಎನ್ಡಿಎ ಸೇರಲು ಸ್ವಾಮಿ ಆಸಕ್ತಿ ಹೊಂದಿದ್ದರಲ್ಲದೆ, ಈ ಕುರಿತು ಮೈತ್ರಿಕೂಟದ ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಲೇ ಬಂದಿದ್ದರು~ ಎಂದು ಬಿಜೆಪಿ ಮುಖಂಡ ಎಸ್.ಎಸ್.ಅಹ್ಲುವಾಲಿಯ ವರದಿಗಾರರಿಗೆ ತಿಳಿಸಿದರು.<br /> <br /> ಮೈತ್ರಿಕೂಟದ ಇತರ ಪಕ್ಷಗಳಲ್ಲಿ ಜೆಡಿ (ಯು), ಶಿರೋಮಣಿ ಅಕಾಲಿದಳ, ಶಿವಸೇನೆ, ರಾಮದಾಸ್ ಅಥಾವಳೆ ನೇತೃತ್ವದ ಭಾರತೀಯ ರಿಪಬ್ಲಿಕನ್ ಪಕ್ಷಗಳು ಸೇರಿವೆ. <br /> <br /> ಸಂಸತ್ನಲ್ಲಿನ ಎನ್ಡಿಎ ಪ್ರಮುಖರನ್ನು ಮಾತ್ರ ಸಭೆಗೆ ಆಹ್ವಾನಿಸಿದ್ದರಿಂದ ಅಥಾವಳೆ ಮತ್ತು ಸ್ವಾಮಿ ಪಾಲ್ಗೊಂಡಿರಲಿಲ್ಲ. ಈ ಎರಡೂ ಪಕ್ಷಗಳ ಸದಸ್ಯರು ಸಂಸತ್ತನ್ನು ಪ್ರತಿನಿಧಿಸುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಸುಬ್ರಮಣಿಯನ್ ಸ್ವಾಮಿ ನೇತೃತ್ವದ ಜನತಾ ಪಕ್ಷವನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಬಿಜೆಪಿ ನೇತೃತ್ವದ ಎನ್ಡಿಎ ಭಾನುವಾರ ನಿರ್ಧರಿಸಿದೆ. ಇದರಿಂದ ಮೈತ್ರಿಕೂಟದ ಪಕ್ಷಗಳ ಸಂಖ್ಯೆ ಆರಕ್ಕೆ ಏರಿದಂತಾಗಿದೆ.<br /> <br /> ಬಜೆಟ್ಗೆ ಪೂರ್ವಭಾವಿಯಾಗಿ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ನಿವಾಸದಲ್ಲಿ ನಡೆದ ಎನ್ಡಿಎ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.<br /> <br /> `ಎನ್ಡಿಎ ಸೇರಲು ಸ್ವಾಮಿ ಆಸಕ್ತಿ ಹೊಂದಿದ್ದರಲ್ಲದೆ, ಈ ಕುರಿತು ಮೈತ್ರಿಕೂಟದ ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಲೇ ಬಂದಿದ್ದರು~ ಎಂದು ಬಿಜೆಪಿ ಮುಖಂಡ ಎಸ್.ಎಸ್.ಅಹ್ಲುವಾಲಿಯ ವರದಿಗಾರರಿಗೆ ತಿಳಿಸಿದರು.<br /> <br /> ಮೈತ್ರಿಕೂಟದ ಇತರ ಪಕ್ಷಗಳಲ್ಲಿ ಜೆಡಿ (ಯು), ಶಿರೋಮಣಿ ಅಕಾಲಿದಳ, ಶಿವಸೇನೆ, ರಾಮದಾಸ್ ಅಥಾವಳೆ ನೇತೃತ್ವದ ಭಾರತೀಯ ರಿಪಬ್ಲಿಕನ್ ಪಕ್ಷಗಳು ಸೇರಿವೆ. <br /> <br /> ಸಂಸತ್ನಲ್ಲಿನ ಎನ್ಡಿಎ ಪ್ರಮುಖರನ್ನು ಮಾತ್ರ ಸಭೆಗೆ ಆಹ್ವಾನಿಸಿದ್ದರಿಂದ ಅಥಾವಳೆ ಮತ್ತು ಸ್ವಾಮಿ ಪಾಲ್ಗೊಂಡಿರಲಿಲ್ಲ. ಈ ಎರಡೂ ಪಕ್ಷಗಳ ಸದಸ್ಯರು ಸಂಸತ್ತನ್ನು ಪ್ರತಿನಿಧಿಸುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>