<p><strong>ನವದೆಹಲಿ (ಐಎಎನ್ಎಸ್):</strong> ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ, ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್ಸಿಟಿಸಿ) ಸ್ಥಾಪನೆ ಕುರಿತಂತೆ ಮೇ ಐದರಂದು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ನಿರ್ಧರಿಸಿದೆ.</p>.<p>ಗೃಹ ಸಚಿವ ಪಿ. ಚಿದಂಬರಂ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ಸಂಬಂಧ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p>`ನಾನು ಎಲ್ಲಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಈ ಸಭೆಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ಎಲ್ಲ ಮುಖ್ಯಮಂತ್ರಿಗಳು ದೃಢಪಡಿಸುತ್ತಾರೆ ಎಂಬ ವಿಶ್ವಾಸವಿದೆ. ಏಪ್ರಿಲ್ 16ರಂದು ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಈಗಾಗಲೇ ಸಿದ್ಧ ಪಡಿಸಿರುವ ಕಾರ್ಯಸೂಚಿಗಳ ಕುರಿತು ಚರ್ಚಿಸಲಾಗುವುದು. ಎನ್ಸಿಟಿಸಿ ಬಗ್ಗೆ ಮೇ 5ರಂದು ಚರ್ಚಿಸಲಿದ್ದೇವೆ~ ಎಂದು ಚಿದಂಬರಂ ಹೇಳಿದರು.</p>.<p>ವಾರ್ಷಿಕವಾಗಿ ನಡೆಯುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯು 16ರಂದು ನವದೆಹಲಿಯಲ್ಲಿ ನಡೆಯಲಿದೆ.<br /> ಎನ್ಸಿಟಿಸಿ ವಿಚಾರ ಚರ್ಚಿಸಲು ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ಮನಮೋಹನ್ಸಿಂಗ್ ಅವರಿಗೆ ಪತ್ರ ಬರೆದು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಕಾಂಗ್ರೆಸ್ಸೇತರ ರಾಜ್ಯ ಸರ್ಕಾರಗಳ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ, ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ (ಎನ್ಸಿಟಿಸಿ) ಸ್ಥಾಪನೆ ಕುರಿತಂತೆ ಮೇ ಐದರಂದು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ನಿರ್ಧರಿಸಿದೆ.</p>.<p>ಗೃಹ ಸಚಿವ ಪಿ. ಚಿದಂಬರಂ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ಸಂಬಂಧ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.</p>.<p>`ನಾನು ಎಲ್ಲಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಈ ಸಭೆಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ಎಲ್ಲ ಮುಖ್ಯಮಂತ್ರಿಗಳು ದೃಢಪಡಿಸುತ್ತಾರೆ ಎಂಬ ವಿಶ್ವಾಸವಿದೆ. ಏಪ್ರಿಲ್ 16ರಂದು ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಈಗಾಗಲೇ ಸಿದ್ಧ ಪಡಿಸಿರುವ ಕಾರ್ಯಸೂಚಿಗಳ ಕುರಿತು ಚರ್ಚಿಸಲಾಗುವುದು. ಎನ್ಸಿಟಿಸಿ ಬಗ್ಗೆ ಮೇ 5ರಂದು ಚರ್ಚಿಸಲಿದ್ದೇವೆ~ ಎಂದು ಚಿದಂಬರಂ ಹೇಳಿದರು.</p>.<p>ವಾರ್ಷಿಕವಾಗಿ ನಡೆಯುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯು 16ರಂದು ನವದೆಹಲಿಯಲ್ಲಿ ನಡೆಯಲಿದೆ.<br /> ಎನ್ಸಿಟಿಸಿ ವಿಚಾರ ಚರ್ಚಿಸಲು ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ಮನಮೋಹನ್ಸಿಂಗ್ ಅವರಿಗೆ ಪತ್ರ ಬರೆದು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>