<p><strong>ಬೆಂಗಳೂರು:</strong> `ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ಎಚ್1ಎನ್1 ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು~ ಎಂದು ಶಾಸಕ ನೆ.ಲ. ನರೇಂದ್ರಬಾಬು ಆಗ್ರಹಿಸಿದ್ದಾರೆ.<br /> <br /> `ಆರೋಗ್ಯ ಇಲಾಖೆ ವರದಿ ಪ್ರಕಾರ ರಾಜ್ಯದಲ್ಲಿ ಮೂರು ಮಂದಿ ಮೃತಪಟ್ಟಿದ್ದರೆ, ಬಿಬಿಎಂಪಿ ಪ್ರಕಾರ 9 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಯಾವುದು ನಿಜ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಆಗ ಸಂಪೂರ್ಣ ನಿಯಂತ್ರಣ ಮಾಡಿದ್ದರೆ ಈಗ ಸಮಸ್ಯೆ ಆಗುತ್ತಿರಲಿಲ್ಲ. <br /> <br /> 2009ರಲ್ಲಿಯೇ ಈ ಕಾಯಿಲೆಗೆ ಔಷಧಿ ಕೊರತೆ ಇದೆ ಎಂಬುದು ಬೆಳಕಿಗೆ ಬಂದಿತ್ತು. ಸ್ಥಾನೀಯವಾಗಿ ಔಷಧಿ ಲಭ್ಯವಿದ್ದರೂ ಅದನ್ನು ಸರ್ಕಾರ/ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಂಗ್ರಹಿಸಿ ಜನರಿಗೆ ಒದಗಿಸಲು ಇರುವ ತೊಡಕು ಏನು. ಈ ಬಗ್ಗೆ ಆರೋಗ್ಯ ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಉತ್ತರಿಸಬೇಕು. ಜತೆಗೆ ಕಾಯಿಲೆ ಬಗ್ಗೆ ಜನರಲ್ಲಿ ಎಚ್ಚರಿಕೆ, ಜಾಗೃತಿ, ಅರಿವು ಮೂಡಿಸಬೇಕು~ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ಎಚ್1ಎನ್1 ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು~ ಎಂದು ಶಾಸಕ ನೆ.ಲ. ನರೇಂದ್ರಬಾಬು ಆಗ್ರಹಿಸಿದ್ದಾರೆ.<br /> <br /> `ಆರೋಗ್ಯ ಇಲಾಖೆ ವರದಿ ಪ್ರಕಾರ ರಾಜ್ಯದಲ್ಲಿ ಮೂರು ಮಂದಿ ಮೃತಪಟ್ಟಿದ್ದರೆ, ಬಿಬಿಎಂಪಿ ಪ್ರಕಾರ 9 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಯಾವುದು ನಿಜ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಆಗ ಸಂಪೂರ್ಣ ನಿಯಂತ್ರಣ ಮಾಡಿದ್ದರೆ ಈಗ ಸಮಸ್ಯೆ ಆಗುತ್ತಿರಲಿಲ್ಲ. <br /> <br /> 2009ರಲ್ಲಿಯೇ ಈ ಕಾಯಿಲೆಗೆ ಔಷಧಿ ಕೊರತೆ ಇದೆ ಎಂಬುದು ಬೆಳಕಿಗೆ ಬಂದಿತ್ತು. ಸ್ಥಾನೀಯವಾಗಿ ಔಷಧಿ ಲಭ್ಯವಿದ್ದರೂ ಅದನ್ನು ಸರ್ಕಾರ/ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಂಗ್ರಹಿಸಿ ಜನರಿಗೆ ಒದಗಿಸಲು ಇರುವ ತೊಡಕು ಏನು. ಈ ಬಗ್ಗೆ ಆರೋಗ್ಯ ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಉತ್ತರಿಸಬೇಕು. ಜತೆಗೆ ಕಾಯಿಲೆ ಬಗ್ಗೆ ಜನರಲ್ಲಿ ಎಚ್ಚರಿಕೆ, ಜಾಗೃತಿ, ಅರಿವು ಮೂಡಿಸಬೇಕು~ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>