<p><strong>ಬೆಂಗಳೂರು (ಪಿಟಿಐ): </strong>ಭೂಹಗರಣಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐ ಆರ್) ದಾಖಲಿಸಿದ್ದಾರೆ.<br /> <br /> ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧಿನಪಡಿಸಿಕೊಂಡ ಭೂಮಿಯನ್ನು ಡಿನೋಟಿಫೈ ಮಾಡುವ ಸಮಯದಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಮೇರೆಗೆ ಮುರುಗೇಶ್ ನಿರಾಣಿ ಮತ್ತು ಇತರರು ಸೇರಿದಂತೆ 8 ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಸಚಿವರ ಸಹೋದರ ಎಚ್.ಆರ್. ನಿರಾಣಿ ಅವರ ಹೆಸರೂ ಎಫ್ಐಆರ್ನಲ್ಲಿ ದಾಖಲಾಗಿದೆ.</p>.<p>ದೇವನಹಳ್ಳಿ ಬಳಿಯ ಹೂವಿನಾಯಕನಹಳ್ಳಿಯಲ್ಲಿನ ಸುಮಾರು 20 ಎಕರೆ ಕೈಗಾರಿಕಾ ಜಮೀನು ಹಾಗೂ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿನ ಮರಕನಕುಪ್ಪೆ ಗ್ರಾಮದಲ್ಲಿ ಏಳು ಎಕರೆ ಜಮೀನನ್ನು 2010ರಲ್ಲಿ ಸ್ವಂತ ಲಾಭಕ್ಕಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ (ಡಿನೋಟಿಫೈ) ಎನ್ನುವುದು ಅರ್ಜಿದಾರರ ದೂರು.<br /> <br /> ಇಲ್ಲಿಗೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಸಂಪುಟದ ಇಬ್ಬರು ಸಚಿವರ ಮೇಲೆ ಎಫ್ಐಆರ್ ದಾಖಲಾದಂತಾಗಿದೆ. <a href="http://www.prajavani.net/web/include/story.php?news=46484&section=2&menuid=10">ಗೃಹ ಸಚಿವ ಆರ್. ಅಶೋಕ್ </a>ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ): </strong>ಭೂಹಗರಣಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐ ಆರ್) ದಾಖಲಿಸಿದ್ದಾರೆ.<br /> <br /> ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧಿನಪಡಿಸಿಕೊಂಡ ಭೂಮಿಯನ್ನು ಡಿನೋಟಿಫೈ ಮಾಡುವ ಸಮಯದಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಮೇರೆಗೆ ಮುರುಗೇಶ್ ನಿರಾಣಿ ಮತ್ತು ಇತರರು ಸೇರಿದಂತೆ 8 ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಪ್ರಥಮ ಮಾಹಿತಿ ವರದಿ ದಾಖಲಿಸಿದ್ದಾರೆ. ಸಚಿವರ ಸಹೋದರ ಎಚ್.ಆರ್. ನಿರಾಣಿ ಅವರ ಹೆಸರೂ ಎಫ್ಐಆರ್ನಲ್ಲಿ ದಾಖಲಾಗಿದೆ.</p>.<p>ದೇವನಹಳ್ಳಿ ಬಳಿಯ ಹೂವಿನಾಯಕನಹಳ್ಳಿಯಲ್ಲಿನ ಸುಮಾರು 20 ಎಕರೆ ಕೈಗಾರಿಕಾ ಜಮೀನು ಹಾಗೂ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿನ ಮರಕನಕುಪ್ಪೆ ಗ್ರಾಮದಲ್ಲಿ ಏಳು ಎಕರೆ ಜಮೀನನ್ನು 2010ರಲ್ಲಿ ಸ್ವಂತ ಲಾಭಕ್ಕಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ (ಡಿನೋಟಿಫೈ) ಎನ್ನುವುದು ಅರ್ಜಿದಾರರ ದೂರು.<br /> <br /> ಇಲ್ಲಿಗೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಸಂಪುಟದ ಇಬ್ಬರು ಸಚಿವರ ಮೇಲೆ ಎಫ್ಐಆರ್ ದಾಖಲಾದಂತಾಗಿದೆ. <a href="http://www.prajavani.net/web/include/story.php?news=46484&section=2&menuid=10">ಗೃಹ ಸಚಿವ ಆರ್. ಅಶೋಕ್ </a>ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>