<p>ಕನಕಪುರ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ಎರಡು ಚಿತ್ರಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅವುಗಳಲ್ಲಿ ನಟ ಉಪೇಂದ್ರ ಕಥೆ, ಚಿತ್ರಕಥೆ ಬರೆದಿರುವ `ಟೋಪಿವಾಲ~ ಒಂದು. ಚಿತ್ರದ ಚಿತ್ರೀಕರಣ ಇದೇ ತಿಂಗಳ ಹನ್ನೆರಡರಿಂದ ಆರಂಭವಾಗಲಿದೆ. ಪಿ.ವಾಸು ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅಭಿನಯಿಸುತ್ತಿರುವ ಇನ್ನೊಂದು ಚಿತ್ರಕ್ಕೆ ಜೂನ್ನಲ್ಲಿ ಚಿತ್ರೀಕರಣ ನಡೆಯಲಿದೆ.<br /> <br /> ಆರು ವರ್ಷಗಳಿಂದ ಪುನೀತ್ಗಾಗಿ ಕಾದಿದ್ದ ಕನಕಪುರ ಶ್ರೀನಿವಾಸ್ ಅವರಿಗೆ ಈಗ ಕಾಲ್ಷೀಟ್ ದೊರಕಿರುವುದು ಸಂತಸ ತಂದಿದೆ. ಅವರ `ಮಯೂರ~ ಚಿತ್ರದಲ್ಲಿ ಪುನೀತ್ ಅಭಿನಯಿಸಬೇಕಿತ್ತು. ನಿರ್ದೇಶಕ ಶೋಭನ್ ಅವರ ಅಕಾಲಿಕ ಮರಣದಿಂದಾಗಿ ಈ ಚಿತ್ರ ಸ್ಥಗಿತಗೊಂಡಿತ್ತು. ಅಲ್ಲಿಂದ ಒಳ್ಳೆಯ ಕಥೆಗಾಗಿ ಹುಡುಕುತ್ತಿದ್ದ ನಿರ್ಮಾಪಕರಿಗೆ ಈಗ ಕಾಲ ಕೂಡಿ ಬಂದಿದೆ. <br /> <br /> ಉಪೇಂದ್ರ ಅಭಿನಯದ `ಟೋಪಿವಾಲ~ ಚಿತ್ರವನ್ನು ಶ್ರೀನಿವಾಸ್(ಶ್ರೀನಿ) ನಿರ್ದೇಶಿಸುತ್ತಿದ್ದಾರೆ. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಇವರಿಗೆ ರೇಡಿಯೋ ಜಾಕಿಯಾಗಿ ಕಾರ್ಯ ನಿರ್ವಹಿಸಿರುವ ಅನುಭವವೂ ಇದೆ. ಹಿರಿತೆರೆಯಲ್ಲಿ ಇದು ಚೊಚ್ಚಿಲ ಯತ್ನ. ಚಿತ್ರಕ್ಕೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ಎರಡು ಚಿತ್ರಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅವುಗಳಲ್ಲಿ ನಟ ಉಪೇಂದ್ರ ಕಥೆ, ಚಿತ್ರಕಥೆ ಬರೆದಿರುವ `ಟೋಪಿವಾಲ~ ಒಂದು. ಚಿತ್ರದ ಚಿತ್ರೀಕರಣ ಇದೇ ತಿಂಗಳ ಹನ್ನೆರಡರಿಂದ ಆರಂಭವಾಗಲಿದೆ. ಪಿ.ವಾಸು ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅಭಿನಯಿಸುತ್ತಿರುವ ಇನ್ನೊಂದು ಚಿತ್ರಕ್ಕೆ ಜೂನ್ನಲ್ಲಿ ಚಿತ್ರೀಕರಣ ನಡೆಯಲಿದೆ.<br /> <br /> ಆರು ವರ್ಷಗಳಿಂದ ಪುನೀತ್ಗಾಗಿ ಕಾದಿದ್ದ ಕನಕಪುರ ಶ್ರೀನಿವಾಸ್ ಅವರಿಗೆ ಈಗ ಕಾಲ್ಷೀಟ್ ದೊರಕಿರುವುದು ಸಂತಸ ತಂದಿದೆ. ಅವರ `ಮಯೂರ~ ಚಿತ್ರದಲ್ಲಿ ಪುನೀತ್ ಅಭಿನಯಿಸಬೇಕಿತ್ತು. ನಿರ್ದೇಶಕ ಶೋಭನ್ ಅವರ ಅಕಾಲಿಕ ಮರಣದಿಂದಾಗಿ ಈ ಚಿತ್ರ ಸ್ಥಗಿತಗೊಂಡಿತ್ತು. ಅಲ್ಲಿಂದ ಒಳ್ಳೆಯ ಕಥೆಗಾಗಿ ಹುಡುಕುತ್ತಿದ್ದ ನಿರ್ಮಾಪಕರಿಗೆ ಈಗ ಕಾಲ ಕೂಡಿ ಬಂದಿದೆ. <br /> <br /> ಉಪೇಂದ್ರ ಅಭಿನಯದ `ಟೋಪಿವಾಲ~ ಚಿತ್ರವನ್ನು ಶ್ರೀನಿವಾಸ್(ಶ್ರೀನಿ) ನಿರ್ದೇಶಿಸುತ್ತಿದ್ದಾರೆ. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಇವರಿಗೆ ರೇಡಿಯೋ ಜಾಕಿಯಾಗಿ ಕಾರ್ಯ ನಿರ್ವಹಿಸಿರುವ ಅನುಭವವೂ ಇದೆ. ಹಿರಿತೆರೆಯಲ್ಲಿ ಇದು ಚೊಚ್ಚಿಲ ಯತ್ನ. ಚಿತ್ರಕ್ಕೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>