<p>ಬೆಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿದ್ದ ನಕಲಿ ವೈದ್ಯೆ ಹಾಗೂ ಆಕೆಯ ಪತಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.<br /> <br /> ಸುಳ್ಯ ತಾಲ್ಲೂಕಿನ ಎಡಮಂಗಲ ಗ್ರಾಮದ ವಾಣಿ (30) ಮತ್ತು ಅವರ ಪತಿ ರಾಜೇಶ್ (36) ಬಂಧಿತರು.<br /> ಕೊಡಿಗೇಹಳ್ಳಿಯ ಕೆನರಾ ಬ್ಯಾಂಕ್ ಲೇಔಟ್ ನಿವಾಸಿ ಚಿನ್ನಾಭರಣ ವ್ಯಾಪಾರಿ ಶ್ರೀಕಾಂತ್ ಮತ್ತು ರೂಪಾ ದಂಪತಿಯ ಮಗು ಸನೂಪ್ನನ್ನು ಆರೋಪಿಗಳು ಅಪಹರಿಸಿದ್ದರು. ಉಡುಪಿಯಲ್ಲಿ ಅವರು ಇರುವ ಬಗ್ಗೆ ಮಾಹಿತಿ ಪಡೆದು ಇಬ್ಬರನ್ನೂ ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ನಕಲಿ ವೈದ್ಯೆ: ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅನುತ್ತೀರ್ಣ ಆಗಿರುವ ವಾಣಿ ಆಯುರ್ವೇದ ವೈದ್ಯೆ ಎಂದು ಹೇಳಿಕೊಂಡಿದ್ದರು. ಕೆನರಾ ಬ್ಯಾಂಕ್ ಲೇಔಟ್ನಲ್ಲಿ ಅವರು `ಗುರು ರಾಘವೇಂದ್ರ ಆಯುರ್ವೇದ ಕ್ಲಿನಿಕ್~ ನಡೆಸುತ್ತಿದ್ದರು. ಶ್ರೀಕಾಂತ್ ಅವರ ಮನೆಯನ್ನು ಬಾಡಿಗೆಗೆ ಪಡೆದು ವಾಸವಿದ್ದರು. ಸನೂಪ್ನನ್ನು ವಾಣಿ ಅವರು ಆಗಾಗ್ಗೆ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಸನೂಪ್ ಸಹ ದಂಪತಿಯನ್ನು ಹಚ್ಚಿಕೊಂಡಿದ್ದ ಎಂದು ಇನ್ಸ್ಪೆಕ್ಟರ್ ಪುನೀತ್ ಕುಮಾರ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಸೆ.29ರಂದು ಆರೋಪಿಗಳು ಸನೂಪ್ನನ್ನು ಅಪಹರಿಸಿದ್ದರು. ಮಗು ಕಾಣೆಯಾದ ಬಗ್ಗೆ ಶ್ರೀಕಾಂತ್ ದೂರು ಕೊಟ್ಟಿದ್ದರು. ಉಡುಪಿ ಪೊಲೀಸರ ನೆರವಿನಿಂದ ಆರೋಪಿಗಳನ್ನು ಬಂಧಿಸಲಾಯಿತು. <br /> <br /> ಹಣಕ್ಕಾಗಿ ಅವರು ಈ ಬೇಡಿಕೆಯನ್ನು ಇಟ್ಟಿರಲಿಲ್ಲ. ಅಪಹರಣಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ಮಗುವನ್ನು ಕರೆದುಕೊಂಡು ದೇವಸ್ಥಾನಕ್ಕೆ ಹೋಗಿದ್ದೆವು ಎಂದು ಆರೋಪಿಗಳು ಹೇಳಿಕೆ ನೀಡಿದ್ದಾರೆ. <br /> <br /> ವಾಣಿ ಮತ್ತು ರಾಜೇಶ್ ಅವರ ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು. ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿದ್ದ ನಕಲಿ ವೈದ್ಯೆ ಹಾಗೂ ಆಕೆಯ ಪತಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.<br /> <br /> ಸುಳ್ಯ ತಾಲ್ಲೂಕಿನ ಎಡಮಂಗಲ ಗ್ರಾಮದ ವಾಣಿ (30) ಮತ್ತು ಅವರ ಪತಿ ರಾಜೇಶ್ (36) ಬಂಧಿತರು.<br /> ಕೊಡಿಗೇಹಳ್ಳಿಯ ಕೆನರಾ ಬ್ಯಾಂಕ್ ಲೇಔಟ್ ನಿವಾಸಿ ಚಿನ್ನಾಭರಣ ವ್ಯಾಪಾರಿ ಶ್ರೀಕಾಂತ್ ಮತ್ತು ರೂಪಾ ದಂಪತಿಯ ಮಗು ಸನೂಪ್ನನ್ನು ಆರೋಪಿಗಳು ಅಪಹರಿಸಿದ್ದರು. ಉಡುಪಿಯಲ್ಲಿ ಅವರು ಇರುವ ಬಗ್ಗೆ ಮಾಹಿತಿ ಪಡೆದು ಇಬ್ಬರನ್ನೂ ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ನಕಲಿ ವೈದ್ಯೆ: ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅನುತ್ತೀರ್ಣ ಆಗಿರುವ ವಾಣಿ ಆಯುರ್ವೇದ ವೈದ್ಯೆ ಎಂದು ಹೇಳಿಕೊಂಡಿದ್ದರು. ಕೆನರಾ ಬ್ಯಾಂಕ್ ಲೇಔಟ್ನಲ್ಲಿ ಅವರು `ಗುರು ರಾಘವೇಂದ್ರ ಆಯುರ್ವೇದ ಕ್ಲಿನಿಕ್~ ನಡೆಸುತ್ತಿದ್ದರು. ಶ್ರೀಕಾಂತ್ ಅವರ ಮನೆಯನ್ನು ಬಾಡಿಗೆಗೆ ಪಡೆದು ವಾಸವಿದ್ದರು. ಸನೂಪ್ನನ್ನು ವಾಣಿ ಅವರು ಆಗಾಗ್ಗೆ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಸನೂಪ್ ಸಹ ದಂಪತಿಯನ್ನು ಹಚ್ಚಿಕೊಂಡಿದ್ದ ಎಂದು ಇನ್ಸ್ಪೆಕ್ಟರ್ ಪುನೀತ್ ಕುಮಾರ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಸೆ.29ರಂದು ಆರೋಪಿಗಳು ಸನೂಪ್ನನ್ನು ಅಪಹರಿಸಿದ್ದರು. ಮಗು ಕಾಣೆಯಾದ ಬಗ್ಗೆ ಶ್ರೀಕಾಂತ್ ದೂರು ಕೊಟ್ಟಿದ್ದರು. ಉಡುಪಿ ಪೊಲೀಸರ ನೆರವಿನಿಂದ ಆರೋಪಿಗಳನ್ನು ಬಂಧಿಸಲಾಯಿತು. <br /> <br /> ಹಣಕ್ಕಾಗಿ ಅವರು ಈ ಬೇಡಿಕೆಯನ್ನು ಇಟ್ಟಿರಲಿಲ್ಲ. ಅಪಹರಣಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ಮಗುವನ್ನು ಕರೆದುಕೊಂಡು ದೇವಸ್ಥಾನಕ್ಕೆ ಹೋಗಿದ್ದೆವು ಎಂದು ಆರೋಪಿಗಳು ಹೇಳಿಕೆ ನೀಡಿದ್ದಾರೆ. <br /> <br /> ವಾಣಿ ಮತ್ತು ರಾಜೇಶ್ ಅವರ ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು. ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>